Homeಮುಖಪುಟಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

ಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಮೈತ್ರಿ ಮೂಲಕ ಸ್ಥಾನ ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಪಕ್ಷಗಳು ಈಗ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಸಿವೆ. ಅದಾಗ್ಯೂ ಚುನಾವಣೆಯಲ್ಲಿ 105 ಸ್ಥಾನ ಗಳಿಸುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರ ಗದ್ದುಗೆ ಏರಲು ಮತ್ತೊಂದು ಪಕ್ಷದ ಬೆಂಬಲ ಅಗತ್ಯವಾಗಿದೆ. ಆದರೆ, ಸಿಎಂ ಖುರ್ಚಿಗಾಗಿ ಶಿವಸೇನೆ ಮತ್ತು ಬಿಜೆಪಿ ಹೊಡೆದಾಡುತ್ತಿರುವುದು ಈಗ ಜಗಜ್ಜಾಹೀರಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಇಂದು ಶಿವಸೇನೆ ಪಕ್ಷದ ದಿವಾಕರ್ ರಾವೋಟೆ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಈಗ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ರಾಜ್ಯಪಾಲರನ್ನು ಭೇಟಿಯಾಗುವುದಾಗಿ ಹೊರಟಿದ್ದಾರೆ. ಮೈತ್ರಿ ಮೂಲಕ ಒಂದೇ ಎಂದು ಘೋಷಿಸಿದ್ದ ಪಕ್ಷಗಳೀಗ ಬೇರೆ, ಬೇರೆಯಾಗಿ ರಾಜ್ಯಪಾಲರನ್ನು ಭೇಟಿಯಾಗುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಆದರೆ ಶಿವಸೇನೆ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ದೀಪಾವಳಿ ಹಬ್ಬದ ಶುಭಾಶಯ ವಿನಿಮಯಕ್ಕಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದಾಗಿ ತಿಳಿಸಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದರೂ ಸಹ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊಮ್ಮಿದೆ. ಈಗ ಅಧಿಕಾರಕ್ಕಾಗಿ ಮಿತ್ರ ಪಕ್ಷಗಳ ಮಧ್ಯೆ ಒಡಕುಂಟಾಗಿದೆ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿಯಲ್ಲಿ ನೀಡಿದ ವಾಗ್ದಾನವನ್ನು ಪೂರೈಸಬೇಕು. 50:50 ಸೂತ್ರಕ್ಕೆ ಬಿಜೆಪಿ ಬದ್ಧವಾಗಿರಬೇಕು ಎಂದು ಶಿವಸೇನೆ ಪಟ್ಟು ಹಿಡಿದಿದೆ.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಗೃಹ ಸಚಿವ ಅಮಿತ್ ಶಾ ಜತೆ ಈಗಾಗಲೇ ಚರ್ಚಿಸಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ನಡೆದ ಸಭೆಯಲ್ಲಿ ಉದ್ಧವ್ ಠಾಕ್ರೆ, ಅಮಿತ್ ಶಾ, ಚಂದ್ರಕಾಂತ್ ಪಾಟೀಲ್, ದೇವೇಂದ್ರ ಫಡ್ನವೀಸ್ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು. ‘ನಮಗೂ ಪಕ್ಷದ ಬೆಳವಣಿಗೆ ಅತ್ಯಗತ್ಯ. ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಶಿವಸೇನೆ ಪ್ರಾಮುಖ್ಯತೆ ನೀಡುತ್ತದೆ. ಲೋಕಸಭೆಯಲ್ಲೂ ಶಿವಸೇನೆ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಎಲ್ಲಾ ಸಮಯದಲ್ಲಿ ಬಿಜೆಪಿಗೆ ಅಧಿಕಾರ ಬಿಟ್ಟು ಕೊಡಲು ಸಾಧ್ಯವಿಲ್ಲ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಒಪ್ಪಂದಕ್ಕೆ ಬದ್ಧವಾಗಿರಬೇಕು’ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಗಾದಿಯ ಮೇಲೆ ಕಣ್ಣಿಟ್ಟಿರುವ ಶಿವಸೇನೆ, ಅಧಿಕಾರಕ್ಕೇರುವ ತವಕದಲ್ಲಿದೆ. ಆದರೆ ಬಿಜೆಪಿ ಇದಕ್ಕೆ ಒಪ್ಪುತ್ತಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶದ ನಂತರ ಎರಡೂ ಪಕ್ಷಗಳು ಹಾವು-ಮುಂಗುಸಿಯಂತೆ ಕಚ್ಚಾಟಕ್ಕಿಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...