Homeಮುಖಪುಟಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

ಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಮೈತ್ರಿ ಮೂಲಕ ಸ್ಥಾನ ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಪಕ್ಷಗಳು ಈಗ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಸಿವೆ. ಅದಾಗ್ಯೂ ಚುನಾವಣೆಯಲ್ಲಿ 105 ಸ್ಥಾನ ಗಳಿಸುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರ ಗದ್ದುಗೆ ಏರಲು ಮತ್ತೊಂದು ಪಕ್ಷದ ಬೆಂಬಲ ಅಗತ್ಯವಾಗಿದೆ. ಆದರೆ, ಸಿಎಂ ಖುರ್ಚಿಗಾಗಿ ಶಿವಸೇನೆ ಮತ್ತು ಬಿಜೆಪಿ ಹೊಡೆದಾಡುತ್ತಿರುವುದು ಈಗ ಜಗಜ್ಜಾಹೀರಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಇಂದು ಶಿವಸೇನೆ ಪಕ್ಷದ ದಿವಾಕರ್ ರಾವೋಟೆ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಈಗ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ರಾಜ್ಯಪಾಲರನ್ನು ಭೇಟಿಯಾಗುವುದಾಗಿ ಹೊರಟಿದ್ದಾರೆ. ಮೈತ್ರಿ ಮೂಲಕ ಒಂದೇ ಎಂದು ಘೋಷಿಸಿದ್ದ ಪಕ್ಷಗಳೀಗ ಬೇರೆ, ಬೇರೆಯಾಗಿ ರಾಜ್ಯಪಾಲರನ್ನು ಭೇಟಿಯಾಗುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಆದರೆ ಶಿವಸೇನೆ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ದೀಪಾವಳಿ ಹಬ್ಬದ ಶುಭಾಶಯ ವಿನಿಮಯಕ್ಕಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದಾಗಿ ತಿಳಿಸಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದರೂ ಸಹ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊಮ್ಮಿದೆ. ಈಗ ಅಧಿಕಾರಕ್ಕಾಗಿ ಮಿತ್ರ ಪಕ್ಷಗಳ ಮಧ್ಯೆ ಒಡಕುಂಟಾಗಿದೆ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿಯಲ್ಲಿ ನೀಡಿದ ವಾಗ್ದಾನವನ್ನು ಪೂರೈಸಬೇಕು. 50:50 ಸೂತ್ರಕ್ಕೆ ಬಿಜೆಪಿ ಬದ್ಧವಾಗಿರಬೇಕು ಎಂದು ಶಿವಸೇನೆ ಪಟ್ಟು ಹಿಡಿದಿದೆ.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಗೃಹ ಸಚಿವ ಅಮಿತ್ ಶಾ ಜತೆ ಈಗಾಗಲೇ ಚರ್ಚಿಸಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ನಡೆದ ಸಭೆಯಲ್ಲಿ ಉದ್ಧವ್ ಠಾಕ್ರೆ, ಅಮಿತ್ ಶಾ, ಚಂದ್ರಕಾಂತ್ ಪಾಟೀಲ್, ದೇವೇಂದ್ರ ಫಡ್ನವೀಸ್ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು. ‘ನಮಗೂ ಪಕ್ಷದ ಬೆಳವಣಿಗೆ ಅತ್ಯಗತ್ಯ. ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಶಿವಸೇನೆ ಪ್ರಾಮುಖ್ಯತೆ ನೀಡುತ್ತದೆ. ಲೋಕಸಭೆಯಲ್ಲೂ ಶಿವಸೇನೆ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಎಲ್ಲಾ ಸಮಯದಲ್ಲಿ ಬಿಜೆಪಿಗೆ ಅಧಿಕಾರ ಬಿಟ್ಟು ಕೊಡಲು ಸಾಧ್ಯವಿಲ್ಲ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಒಪ್ಪಂದಕ್ಕೆ ಬದ್ಧವಾಗಿರಬೇಕು’ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಗಾದಿಯ ಮೇಲೆ ಕಣ್ಣಿಟ್ಟಿರುವ ಶಿವಸೇನೆ, ಅಧಿಕಾರಕ್ಕೇರುವ ತವಕದಲ್ಲಿದೆ. ಆದರೆ ಬಿಜೆಪಿ ಇದಕ್ಕೆ ಒಪ್ಪುತ್ತಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶದ ನಂತರ ಎರಡೂ ಪಕ್ಷಗಳು ಹಾವು-ಮುಂಗುಸಿಯಂತೆ ಕಚ್ಚಾಟಕ್ಕಿಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...