Homeಮುಖಪುಟಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

ಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಮೈತ್ರಿ ಮೂಲಕ ಸ್ಥಾನ ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಪಕ್ಷಗಳು ಈಗ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಸಿವೆ. ಅದಾಗ್ಯೂ ಚುನಾವಣೆಯಲ್ಲಿ 105 ಸ್ಥಾನ ಗಳಿಸುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರ ಗದ್ದುಗೆ ಏರಲು ಮತ್ತೊಂದು ಪಕ್ಷದ ಬೆಂಬಲ ಅಗತ್ಯವಾಗಿದೆ. ಆದರೆ, ಸಿಎಂ ಖುರ್ಚಿಗಾಗಿ ಶಿವಸೇನೆ ಮತ್ತು ಬಿಜೆಪಿ ಹೊಡೆದಾಡುತ್ತಿರುವುದು ಈಗ ಜಗಜ್ಜಾಹೀರಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಇಂದು ಶಿವಸೇನೆ ಪಕ್ಷದ ದಿವಾಕರ್ ರಾವೋಟೆ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಈಗ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ರಾಜ್ಯಪಾಲರನ್ನು ಭೇಟಿಯಾಗುವುದಾಗಿ ಹೊರಟಿದ್ದಾರೆ. ಮೈತ್ರಿ ಮೂಲಕ ಒಂದೇ ಎಂದು ಘೋಷಿಸಿದ್ದ ಪಕ್ಷಗಳೀಗ ಬೇರೆ, ಬೇರೆಯಾಗಿ ರಾಜ್ಯಪಾಲರನ್ನು ಭೇಟಿಯಾಗುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಆದರೆ ಶಿವಸೇನೆ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ದೀಪಾವಳಿ ಹಬ್ಬದ ಶುಭಾಶಯ ವಿನಿಮಯಕ್ಕಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದಾಗಿ ತಿಳಿಸಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದರೂ ಸಹ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊಮ್ಮಿದೆ. ಈಗ ಅಧಿಕಾರಕ್ಕಾಗಿ ಮಿತ್ರ ಪಕ್ಷಗಳ ಮಧ್ಯೆ ಒಡಕುಂಟಾಗಿದೆ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿಯಲ್ಲಿ ನೀಡಿದ ವಾಗ್ದಾನವನ್ನು ಪೂರೈಸಬೇಕು. 50:50 ಸೂತ್ರಕ್ಕೆ ಬಿಜೆಪಿ ಬದ್ಧವಾಗಿರಬೇಕು ಎಂದು ಶಿವಸೇನೆ ಪಟ್ಟು ಹಿಡಿದಿದೆ.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಗೃಹ ಸಚಿವ ಅಮಿತ್ ಶಾ ಜತೆ ಈಗಾಗಲೇ ಚರ್ಚಿಸಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ನಡೆದ ಸಭೆಯಲ್ಲಿ ಉದ್ಧವ್ ಠಾಕ್ರೆ, ಅಮಿತ್ ಶಾ, ಚಂದ್ರಕಾಂತ್ ಪಾಟೀಲ್, ದೇವೇಂದ್ರ ಫಡ್ನವೀಸ್ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು. ‘ನಮಗೂ ಪಕ್ಷದ ಬೆಳವಣಿಗೆ ಅತ್ಯಗತ್ಯ. ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಶಿವಸೇನೆ ಪ್ರಾಮುಖ್ಯತೆ ನೀಡುತ್ತದೆ. ಲೋಕಸಭೆಯಲ್ಲೂ ಶಿವಸೇನೆ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಎಲ್ಲಾ ಸಮಯದಲ್ಲಿ ಬಿಜೆಪಿಗೆ ಅಧಿಕಾರ ಬಿಟ್ಟು ಕೊಡಲು ಸಾಧ್ಯವಿಲ್ಲ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಒಪ್ಪಂದಕ್ಕೆ ಬದ್ಧವಾಗಿರಬೇಕು’ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಗಾದಿಯ ಮೇಲೆ ಕಣ್ಣಿಟ್ಟಿರುವ ಶಿವಸೇನೆ, ಅಧಿಕಾರಕ್ಕೇರುವ ತವಕದಲ್ಲಿದೆ. ಆದರೆ ಬಿಜೆಪಿ ಇದಕ್ಕೆ ಒಪ್ಪುತ್ತಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶದ ನಂತರ ಎರಡೂ ಪಕ್ಷಗಳು ಹಾವು-ಮುಂಗುಸಿಯಂತೆ ಕಚ್ಚಾಟಕ್ಕಿಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...