Homeಮುಖಪುಟಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

ಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಮೈತ್ರಿ ಮೂಲಕ ಸ್ಥಾನ ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಪಕ್ಷಗಳು ಈಗ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಸಿವೆ. ಅದಾಗ್ಯೂ ಚುನಾವಣೆಯಲ್ಲಿ 105 ಸ್ಥಾನ ಗಳಿಸುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರ ಗದ್ದುಗೆ ಏರಲು ಮತ್ತೊಂದು ಪಕ್ಷದ ಬೆಂಬಲ ಅಗತ್ಯವಾಗಿದೆ. ಆದರೆ, ಸಿಎಂ ಖುರ್ಚಿಗಾಗಿ ಶಿವಸೇನೆ ಮತ್ತು ಬಿಜೆಪಿ ಹೊಡೆದಾಡುತ್ತಿರುವುದು ಈಗ ಜಗಜ್ಜಾಹೀರಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಇಂದು ಶಿವಸೇನೆ ಪಕ್ಷದ ದಿವಾಕರ್ ರಾವೋಟೆ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಈಗ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ರಾಜ್ಯಪಾಲರನ್ನು ಭೇಟಿಯಾಗುವುದಾಗಿ ಹೊರಟಿದ್ದಾರೆ. ಮೈತ್ರಿ ಮೂಲಕ ಒಂದೇ ಎಂದು ಘೋಷಿಸಿದ್ದ ಪಕ್ಷಗಳೀಗ ಬೇರೆ, ಬೇರೆಯಾಗಿ ರಾಜ್ಯಪಾಲರನ್ನು ಭೇಟಿಯಾಗುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಆದರೆ ಶಿವಸೇನೆ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ದೀಪಾವಳಿ ಹಬ್ಬದ ಶುಭಾಶಯ ವಿನಿಮಯಕ್ಕಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದಾಗಿ ತಿಳಿಸಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದರೂ ಸಹ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊಮ್ಮಿದೆ. ಈಗ ಅಧಿಕಾರಕ್ಕಾಗಿ ಮಿತ್ರ ಪಕ್ಷಗಳ ಮಧ್ಯೆ ಒಡಕುಂಟಾಗಿದೆ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿಯಲ್ಲಿ ನೀಡಿದ ವಾಗ್ದಾನವನ್ನು ಪೂರೈಸಬೇಕು. 50:50 ಸೂತ್ರಕ್ಕೆ ಬಿಜೆಪಿ ಬದ್ಧವಾಗಿರಬೇಕು ಎಂದು ಶಿವಸೇನೆ ಪಟ್ಟು ಹಿಡಿದಿದೆ.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಗೃಹ ಸಚಿವ ಅಮಿತ್ ಶಾ ಜತೆ ಈಗಾಗಲೇ ಚರ್ಚಿಸಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ನಡೆದ ಸಭೆಯಲ್ಲಿ ಉದ್ಧವ್ ಠಾಕ್ರೆ, ಅಮಿತ್ ಶಾ, ಚಂದ್ರಕಾಂತ್ ಪಾಟೀಲ್, ದೇವೇಂದ್ರ ಫಡ್ನವೀಸ್ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು. ‘ನಮಗೂ ಪಕ್ಷದ ಬೆಳವಣಿಗೆ ಅತ್ಯಗತ್ಯ. ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಶಿವಸೇನೆ ಪ್ರಾಮುಖ್ಯತೆ ನೀಡುತ್ತದೆ. ಲೋಕಸಭೆಯಲ್ಲೂ ಶಿವಸೇನೆ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಎಲ್ಲಾ ಸಮಯದಲ್ಲಿ ಬಿಜೆಪಿಗೆ ಅಧಿಕಾರ ಬಿಟ್ಟು ಕೊಡಲು ಸಾಧ್ಯವಿಲ್ಲ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಒಪ್ಪಂದಕ್ಕೆ ಬದ್ಧವಾಗಿರಬೇಕು’ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಗಾದಿಯ ಮೇಲೆ ಕಣ್ಣಿಟ್ಟಿರುವ ಶಿವಸೇನೆ, ಅಧಿಕಾರಕ್ಕೇರುವ ತವಕದಲ್ಲಿದೆ. ಆದರೆ ಬಿಜೆಪಿ ಇದಕ್ಕೆ ಒಪ್ಪುತ್ತಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶದ ನಂತರ ಎರಡೂ ಪಕ್ಷಗಳು ಹಾವು-ಮುಂಗುಸಿಯಂತೆ ಕಚ್ಚಾಟಕ್ಕಿಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...