Homeಮುಖಪುಟಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

ಬಿಜೆಪಿ-ಶಿವಸೇನೆ ಮಧ್ಯೆ ಅಧಿಕಾರಕ್ಕಾಗಿ ಗುದ್ದಾಟ: ರಾಜ್ಯಪಾಲರನ್ನು ಪ್ರತ್ಯೇಕವಾಗಿ ಭೇಟಿಯಾದ ಬಿಜೆಪಿ-ಶಿವಸೇನೆ ನಿಯೋಗ

- Advertisement -
- Advertisement -

ಮಹಾರಾಷ್ಟ್ರದಲ್ಲಿ ಚುನಾವಣಾ ಮೈತ್ರಿ ಮೂಲಕ ಸ್ಥಾನ ಹಂಚಿಕೆ ಮಾಡಿಕೊಂಡು ಚುನಾವಣೆ ಎದುರಿಸಿದ್ದ ಪಕ್ಷಗಳು ಈಗ ಅಧಿಕಾರಕ್ಕಾಗಿ ಮುಸುಕಿನ ಗುದ್ದಾಟ ನಡೆಸಿವೆ. ಅದಾಗ್ಯೂ ಚುನಾವಣೆಯಲ್ಲಿ 105 ಸ್ಥಾನ ಗಳಿಸುವ ಮೂಲಕ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅಧಿಕಾರ ಗದ್ದುಗೆ ಏರಲು ಮತ್ತೊಂದು ಪಕ್ಷದ ಬೆಂಬಲ ಅಗತ್ಯವಾಗಿದೆ. ಆದರೆ, ಸಿಎಂ ಖುರ್ಚಿಗಾಗಿ ಶಿವಸೇನೆ ಮತ್ತು ಬಿಜೆಪಿ ಹೊಡೆದಾಡುತ್ತಿರುವುದು ಈಗ ಜಗಜ್ಜಾಹೀರಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಆಕರ್ಷಣೆಯ ಕೇಂದ್ರ ಬಿಂದುವಾದ ಠಾಕ್ರೆ ಕುಡಿ: ಸಿಎಂ ಆಗ್ತಾರಾ ಆದಿತ್ಯ ಠಾಕ್ರೆ..?

ಇಂದು ಶಿವಸೇನೆ ಪಕ್ಷದ ದಿವಾಕರ್ ರಾವೋಟೆ ನಿಯೋಗ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದೆ. ಈಗ ಬಿಜೆಪಿಯ ದೇವೇಂದ್ರ ಫಡ್ನವೀಸ್ ಕೂಡ ರಾಜ್ಯಪಾಲರನ್ನು ಭೇಟಿಯಾಗುವುದಾಗಿ ಹೊರಟಿದ್ದಾರೆ. ಮೈತ್ರಿ ಮೂಲಕ ಒಂದೇ ಎಂದು ಘೋಷಿಸಿದ್ದ ಪಕ್ಷಗಳೀಗ ಬೇರೆ, ಬೇರೆಯಾಗಿ ರಾಜ್ಯಪಾಲರನ್ನು ಭೇಟಿಯಾಗುತ್ತಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಆದರೆ ಶಿವಸೇನೆ ರಾಜ್ಯಪಾಲರನ್ನು ಭೇಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ದೀಪಾವಳಿ ಹಬ್ಬದ ಶುಭಾಶಯ ವಿನಿಮಯಕ್ಕಾಗಿ ರಾಜ್ಯಪಾಲರನ್ನು ಭೇಟಿಯಾಗಿದ್ದಾಗಿ ತಿಳಿಸಿದೆ. ಬಿಜೆಪಿ ಮತ್ತು ಶಿವಸೇನೆ ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದರೂ ಸಹ ಬಿಜೆಪಿ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಅತಿದೊಡ್ಡ ಪಕ್ಷವಾಗಿ ಹೊಮ್ಮಿದೆ. ಈಗ ಅಧಿಕಾರಕ್ಕಾಗಿ ಮಿತ್ರ ಪಕ್ಷಗಳ ಮಧ್ಯೆ ಒಡಕುಂಟಾಗಿದೆ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿಯಲ್ಲಿ ನೀಡಿದ ವಾಗ್ದಾನವನ್ನು ಪೂರೈಸಬೇಕು. 50:50 ಸೂತ್ರಕ್ಕೆ ಬಿಜೆಪಿ ಬದ್ಧವಾಗಿರಬೇಕು ಎಂದು ಶಿವಸೇನೆ ಪಟ್ಟು ಹಿಡಿದಿದೆ.

ಇದನ್ನೂ ಓದಿ: ಬಿಜೆಪಿಯ ದುರಹಂಕಾರಕ್ಕೆ ಜನ ಪಾಠ ಕಲಿಸಿದ್ದಾರೆ: ’ಸಾಮ್ನಾ’ದಲ್ಲಿ ಮಿತ್ರನಿಗೆ ತಿವಿದ ಶಿವಸೇನೆ

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ಗೃಹ ಸಚಿವ ಅಮಿತ್ ಶಾ ಜತೆ ಈಗಾಗಲೇ ಚರ್ಚಿಸಿದ್ದಾರೆ. ಅಧಿಕಾರ ಹಂಚಿಕೆ ಸಂಬಂಧ ನಡೆದ ಸಭೆಯಲ್ಲಿ ಉದ್ಧವ್ ಠಾಕ್ರೆ, ಅಮಿತ್ ಶಾ, ಚಂದ್ರಕಾಂತ್ ಪಾಟೀಲ್, ದೇವೇಂದ್ರ ಫಡ್ನವೀಸ್ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖರು ಭಾಗವಹಿಸಿದ್ದರು. ‘ನಮಗೂ ಪಕ್ಷದ ಬೆಳವಣಿಗೆ ಅತ್ಯಗತ್ಯ. ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಶಿವಸೇನೆ ಪ್ರಾಮುಖ್ಯತೆ ನೀಡುತ್ತದೆ. ಲೋಕಸಭೆಯಲ್ಲೂ ಶಿವಸೇನೆ ಹೆಚ್ಚು ಸ್ಥಾನಗಳನ್ನು ಗೆದ್ದಿದೆ. ಎಲ್ಲಾ ಸಮಯದಲ್ಲಿ ಬಿಜೆಪಿಗೆ ಅಧಿಕಾರ ಬಿಟ್ಟು ಕೊಡಲು ಸಾಧ್ಯವಿಲ್ಲ. ಬಿಜೆಪಿ ಚುನಾವಣಾ ಪೂರ್ವ ಮೈತ್ರಿ ಒಪ್ಪಂದಕ್ಕೆ ಬದ್ಧವಾಗಿರಬೇಕು’ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಎಂ ಗಾದಿಯ ಮೇಲೆ ಕಣ್ಣಿಟ್ಟಿರುವ ಶಿವಸೇನೆ, ಅಧಿಕಾರಕ್ಕೇರುವ ತವಕದಲ್ಲಿದೆ. ಆದರೆ ಬಿಜೆಪಿ ಇದಕ್ಕೆ ಒಪ್ಪುತ್ತಿಲ್ಲ. ಹೀಗಾಗಿ ಚುನಾವಣಾ ಫಲಿತಾಂಶದ ನಂತರ ಎರಡೂ ಪಕ್ಷಗಳು ಹಾವು-ಮುಂಗುಸಿಯಂತೆ ಕಚ್ಚಾಟಕ್ಕಿಳಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...