Homeಮುಖಪುಟಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ದೆಹಲಿ ಸರ್ಕಾರ ವಿದ್ಯುತ್ ಉತ್ಪಾದನೆ ಮಾಡುತ್ತಿಲ್ಲ. ಆದರು ಅದು ತನ್ನ ಜನರಿಗೆ 200 ಯುನಿಟ್‍ ಮಾಸಿಕ ಉಚಿತ ವಿದ್ಯುತ್‍ ನೀಡಲು ಸಾಧ್ಯ ಆಗುವುದಾದರೆ ಕರ್ನಾಟಕದಲ್ಲಿ ಅದು ಏಕೆ ಸಾಧ್ಯವಿಲ್ಲ ಎಂದು ಆಪ್ ಪ್ರಶ್ನಿಸಿದೆ.

- Advertisement -
- Advertisement -

ನೀವು ಮನೆಯಲ್ಲಿ ಮಾಸಿಕ 200 ಯುನಿಟ್ ವಿದ್ಯುತ್‍ ಬಳಸಿದರೆ, ಇನ್ಮುಂದೆ 1,260 ರೂ. ಬಿಲ್‍ ಕಟ್ಟಬೇಕು. ವರ್ಷಕ್ಕೆ ಇದು 15 ಸಾವಿರ ರೂ. ಆಗುತ್ತದೆ! ನಿಮ್ಮನ್ನು ಮನೆಯಲ್ಲಿ ಕೂಡಿ ಹಾಕಿ, ನಿಮ್ಮ ಆದಾಯವನ್ನು ಕಿತ್ತುಕೊಳ್ಳಲಾಗಿದೆ. ಅನಿವಾರ್ಯವಾಗಿ ಟಿವಿ, ಫ್ರಿಡ್ಜ್ ಬಳಕೆ ಹೆಚ್ಚುವುದರಿಂದ ವಿದ್ಯುತ್‍ ಬಳಕೆಯೂ ಹೆಚ್ಚುತ್ತದೆ. ಸಂಬಳ ಪಡೆಯುವ ವರ್ಗಕ್ಕೇ ಇದು ಭಾರ. ಆದರೆ ನಿಶ್ಚಿತ ಆದಾಯವಿಲ್ಲದ, ಅಸಂಘಟಿತ ವಲಯಕ್ಕೆ ಸೇರಿದ ಮತ್ತು ಲಾಕ್‍ ಡೌನ್‍ ಕಾರಣಕ್ಕೆ ಕೆಲಸವೂ ಇಲ್ಲದಿರುವ ಜನತೆಗೆ ಇದೊಂದು ದೊಡ್ಡ ಹೊರೆಯಾಗಿದೆ.

ಆದರೆ ಯಡಿಯೂರಪ್ಪ ಸರ್ಕಾರದ ವಿದ್ಯುತ್‍ ದರ ಏರಿಕೆಯಿಂದ ಅತಿ ಹೆಚ್ಚು ಖುಷಿಗೊಂಡವರು ಗುಜರಾತ್‍ನ ಗೌತಮ್‍ ಅದಾನಿ ಎಂಬ ದೊಡ್ಡ ಕಾರ್ಪೊರೇಟ್ ಉದ್ಯಮಿ!

ಅದಾನಿ ಕಂಪನಿಗೆ ಲಾಭ ಮಾಡಲು ಕನ್ನಡಿಗರನ್ನು ಸರ್ಕಾರ ಪಿಕ್‍ಪಾಕೆಟ್‍ ಮಾಡುತ್ತಿದೆ ಎಂದು ಕಾಂಗ್ರೆಸ್‍, ಜೆಡಿಎಸ್‍ ಮತ್ತು ಇತರ ಪಕ್ಷಗಳು ಇದನ್ನು ಖಂಡಿಸಿವೆ. ಆದರೆ ರಾಜ್ಯದ ಆಮ್‍ ಆದ್ಮಿ ಪಕ್ಷ ಸ್ಪಷ್ಟ ದಾಖಲೆಗಳೊಂದಿಗೆ, ಇದು ಅದಾನಿಗೆ ಲಾಭ ಮಾಡಿಕೊಡುವ ಕುತಂತ್ರ ಎಂದು ನಿರೂಪಿಸಿದೆ. ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿವರಗಳನ್ನು ನೀಡಲಾಗಿದೆ.

ನವೆಂಬರ್ 1, 2020ರ ನಂತರ ಪ್ರತಿ ಯೂನಿಟ್‍ಗೆ 40 ಪೈಸೆ (ಶೇ.6) ಏರಿಕೆಯಾಗಿದ್ದ ವಿದ್ಯುತ್ ದರವನ್ನು ಈಗ ಸರ್ಕಾರ ಮತ್ತೆ ಏರಿಕೆ ಮಾಡಿದೆ. ಪ್ರತೀ ಯೂನಿಟ್‍ಗೆ 30 ಪೈಸೆ (ಶೇ.4) ಏರಿಸಿ ಈಗಾಗಲೇ ಕೋವಿಡ್ ಲಾಕ್ ಡೌನ್‌ಗಳ ಪರಿಣಾಮ ತೀವ್ರ ಸಂಕಷ್ಟದಲ್ಲಿ ಇರುವ ಜನತೆಯ ಮೇಲೆ ಸರಕಾರ ದೊಡ್ಡ ಹೊರೆಯನ್ನು ಹಾಕಿದೆ ಎಂದು ಆಮ್‍ ಆದ್ಮಿ ಆರೋಪಿಸಿದೆ.

ಅದಾನಿಗೆ ಹೇಗೆ ಲಾಭ?

ರಾಜ್ಯ ಸರ್ಕಾರ ಅದಾನಿ ಕಂಪನಿಗಳಿಂದ ವಿದ್ಯುತ್‍ ಮತ್ತು ಕಲ್ಲಿದಲ್ಲನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಸುತ್ತಿದೆ. ರಾಜ್ಯದ ಎಲ್ಲ ವಿದ್ಯುತ್‍ ಸರಬರಾಜು ಕಂಪನಿಗಳು ನಷ್ಟ ತೋರಿಸುತ್ತಿದ್ದರೆ, ಅದಾನಿಯ ಪವರ್ ಕಂಪನಿ ಬಂಪರ್ ಲಾಭ ಗಳಿಸಿದೆ. ಅದನ್ನು ಅದು ಅಧಿಕೃತವಾಗಿ ಘೋಷಿಸಿದೆ ಕೂಡ. ಅದರ ಪತ್ರಿಕಾ ಪ್ರಕಟಣೆ ಪ್ರಕಾರ, 2021ರ ನಾಲ್ಕನೇ ತ್ರೈಮಾಸಿಕದಲ್ಲಿ ಅದು 2,143 ಕೋಟಿ ರೂ. ಲಾಭ ಗಳಿಸಿದೆ. ಹಿಂದಿನ ವರ್ಷ ದ ನಾಲ್ಕನೆ ತ್ರೈಮಾಸಿಕಕ್ಕೆ ಹೋಲಿಸಿದರೆ ಇದು ಶೇ.496 ಏರಿಕೆ. 2021ರ ಆರ್ಥಿಕ ವರ್ಷದಲ್ಲಿ ಅದು 10,597 ಕೋಟಿ ರೂ. ಗಳಿಸಿದ್ದು, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.50ರಷ್ಟು ಏರಿಕೆಯಾಗಿದೆ!

ಅದಾನಿ ಪವರ್ ಕಂಪನಿಯು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಜೊತೆ ವಿದ್ಯುತ್‍ ಮಾರಾಟದ ಒಪ್ಪಂದ ಮಾಡುತ್ತಿದೆ. ಅಂದರೆ ಅದಾನಿಗೆ ಸಿಗುತ್ತಿರುವ ಲಾಭದಲ್ಲಿ ನಾವು ನೀವೆಲ್ಲ ಅನಗತ್ಯವಾಗಿ ಹೆಚ್ಚುವರಿಯಾಗಿ ಕಟ್ಟುತ್ತಿರುವ ವಿದ್ಯುತ್‍ ಬಿಲ್‍ನ ಪಾಲೂ ಇದೆ!

2019ರಲ್ಲಿ ಅದಾನಿಯ ಉಡುಪಿ ಪವರ್ ಕಾರ್ಪೋರೇಷನ್‌ಗೆ ಪಾವತಿಸಿದ ವಿವರ
2021ರಲ್ಲಿ ಅದಾನಿಯ ಉಡುಪಿ ಪವರ್ ಕಾರ್ಪೋರೇಷನ್‌ಗೆ ಪಾವತಿಸಿದ ವಿವರ

‘ಕಳೆದ ಎರಡು ವರ್ಷಗಳಿಂದ ಕರ್ನಾಟಕ ಸರ್ಕಾರ ಅದಾನಿ ಪವರ್ ಕಂಪನಿಯಿಂದ ಖರೀದಿ ಮಾಡುತ್ತಿರುವ ವಿದ್ಯುತ್‌ನ  ಬೆಲೆ ಸತತವಾಗಿ ಏರುತ್ತಿದೆ. ಬೆಸ್ಕಾಂ ಅದಾನಿಯಿಂದ ಖರೀದಿಸುವ ವಿದ್ಯುತ್ ಬೆಲೆ ಪ್ರತಿ ಯುನಿಟ್‍ಗೆ 4.76 ರೂಪಾಯಿಯಿಂದ 6.80 ರೂಪಾಯಿಗೆ ಏರಿದೆ, ಒಟ್ಟಾರೆ 2.02 ರೂಪಾಯಿ (ಶೇ. 42) ಏರಿಕೆ ಎಂದ ಶಾಂತಲಾ ದಾಮ್ಲೆ ಆರೋಪಿಸಿದ್ದಾರೆ.

ಇದನ್ನೂ ಓದಿ; 35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಆಮ್‍ ಆದ್ಮಿ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‍ ಜೈನ್‍, ‘ಐಐಟಿಗಳ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‍ ವಿಭಾಗದ ತಜ್ಞ ಇಂಜಿನಿಯರ್‌ಗಳ ಜೊತೆ ಮಾತಾಡಿದ್ದೇವೆ. ಯಾವ ಕಾರಣಕ್ಕೂ ಒಂದು ಯುನಿಟ್‍ಗೆ ಸರ್ಕಾರಗಳು 3.20 ರೂ.ಗಿಂತ ಹೆಚ್ಚಿನ ಹಣವನ್ನು ಖಾಸಗಿ ವಿದ್ಯುತ್‍ ಕಂಪನಿಗಳಿಗೆ ನೀಡುವ ಅಗತ್ಯವೇ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಆದರೆ ನಮ್ಮ ಸರ್ಕಾರ ಪ್ರತಿ ಯುನಿಟ್‍ಗೆ 6.80 ರೂ ನೀಡುವ ಮೂಲಕ ಅನಗತ್ಯವಾಗಿ ಎರಡು ಪಟ್ಟಿಗಿಂತ ಹೆಚ್ಚಿನ ದರವನ್ನು ನೀಡಿ ಅದಾನಿಗೆ ಲಾಭ ಮಾಡಿಕೊಡುತ್ತಿದೆ. ಅದಾನಿ ಮೋದಿಯವರ ಆಪ್ತರು ಎಂಬುದು ರಹಸ್ಯವೇನಲ್ಲ. ಹೀಗಾಗಿ ರಾಜ್ಯ ಬಿಜೆಪಿ ಸರ್ಕಾರ ಅದಾನಿಗೆ ಲಾಭ ಮಾಡಲು ಜನರ ಮೇಲೆ ಹೊರೆ ಹೇರುತ್ತಿದೆ. ಇಲ್ಲಿ ಸಹಜವಾಗಿ ಕಮೀಷನ್‍ ವ್ಯವಹಾರ ಇದ್ದೇ ಇರುತ್ತದೆ’ ಎಂದು ಆರೋಪಿಸಿದರು.

2018ರ ಸರ್ಕಾರಿ ದಾಖಲೆ ಪ್ರಕಾರ, ಉಡುಪಿ ಪವರ್ ಕಾರ್ಪೋರೇಷನ್‍ ಲಿಮಿಟೆಡ್‍ (ಯುಪಿಸಿಎಲ್‍-ಅದಾನಿ ಕಂಪನಿ) ಕಂಪನಿಯಿಂದ ಯುನಿಟ್‍ಗೆ 4.76 ರೂ. ದರದಲ್ಲಿ ವಿದ್ಯುತ್‍ ಖರೀದಿಸಿದ ಸರ್ಕಾರ ಒಟ್ಟು 2,085 ಕೋಟಿ ರೂ.ಗಳನ್ನ ಅದಾನಿ ಕಂಪನಿಗೆ ಪಾವತಿಸಿದೆ. ಈಗ ಯಡಿಯೂರಪ್ಪ ಸರ್ಕಾರವು ಯುನಿಟ್‍ಗೆ 6.80 ರೂ ದರದಲ್ಲಿ ಖರೀದಿ ಮಾಡುತ್ತಿದೆ! ಹೀಗೆ ಅದಾನಿ ಕಂಪನಿಗೆ ದುಪ್ಪಟ್ಟು ಹಣ ನೀಡಿ, ಆ ನಷ್ಟವನ್ನು ತುಂಬಿಕೊಳ್ಳಲು ವಿದ್ಯುತ್‍ ದರ ಏರಿಸಲಾಗುತ್ತಿದೆ ಎಂದು ಆಮ್‍ ಆದ್ಮಿ ಆರೋಪಿಸಿದೆ.

ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

‘ದೆಹಲಿಯ ಜನತೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್ ಬಳಸುತ್ತಾರೆ. ದೆಹಲಿಯ ಶೇ.70 ಜನ ವಿದ್ಯುತ್ ಬಿಲ್ ಪಾವತಿಸುವುದೇ ಇಲ್ಲ! ಕಳೆದ ಆರು ವರ್ಷಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗಿಯೇ ಇಲ್ಲ’ ಎಂದು ಶಾಂತಲ ದಾಮ್ಲೆ ಹೇಳುತ್ತಾರೆ.

‘ಕರ್ನಾಟಕವು ಲಭ್ಯವಿರುವ ಎಲ್ಲಾ ನೈಸರ್ಗಿಕ ಮೂಲಗಳನ್ನು ಅಂದರೆ ನೀರು, ಗಾಳಿ ಮತ್ತು ಸೌರ ಶಕ್ತಿಯನ್ನು ಬಳಸಿ ವಿದ್ಯುತ್ ಉತ್ಪಾದಿಸುತ್ತದೆ. ಹೀಗಿದ್ದೂ ಸರಕಾರ ವಿದ್ಯುತ್ ಬೆಲೆ ಏರಿಸಿ ಜನತೆಯನ್ನು ಯಾಕೆ ಹಿಂಸಿಸುತ್ತಿದೆ? ವಿದ್ಯುತ್ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆಯೇ?’ ಎಂದು ಅವರು ಪ್ರಶ್ನಿಸುತ್ತಾರೆ.

‘ಕಳೆದ ವರ್ಷ ಕಲ್ಲಿದ್ದಿಲಿನ ಬೆಲೆ ಇಳಿದಿದ್ದರೂ ಅದಾನಿ ಪವರ್ ಕರ್ನಾಟಕ ಸರ್ಕಾರಕ್ಕೆ ಅಧಿಕ ಬೆಲೆಗೆ  ಕಲ್ಲಿದ್ದಲು ಮತ್ತು  ವಿದ್ಯುತ್‍ ಮಾರಿತ್ತು. ಆ ಸಂದರ್ಭದಲ್ಲಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂಧನ ಖಾತೆಯನ್ನು ಹೊಂದಿದ್ದರು. ರಾಜ್ಯ ಮುಗ್ಗಟ್ಟಿನಲ್ಲಿ ಬಳಲಿ ಹೋಗಿದ್ದಾಗ ಯಡಿಯೂರಪ್ಪನವರಿಗೆ ಜನರ ದುಡ್ಡಿನಿಂದ ಅದಾನಿ ಪವರ್‌ನ ಜೇಬು ತುಂಬಿಸುವ ನೀಚ ಮನಸ್ಸಾದರೂ ಹೇಗೆ ಬಂತು?’ ಎಂದು ಆಮ್‍ ಆದ್ಮಿ ಪ್ರಶ್ನೆ ಎತ್ತಿದೆ.

ದೆಹಲಿ ಸರ್ಕಾರ ವಿದ್ಯುತ್ ಉತ್ಪಾದನೆ ಮಾಡುತ್ತಿಲ್ಲ. ಅದು ಖಾಸಗಿ ಕಂಪನಿಗಳಿಂದ ವಿದ್ಯುತ್‍ ಖರೀದಿಸಿಯೂ ತನ್ನ ಜನರಿಗೆ 200 ಯುನಿಟ್‍ ಮಾಸಿಕ ವಿದ್ಯುತ್‍ ನೀಡಲು ಸಾಧ್ಯ ಆಗುವುದಾದರೆ ಕರ್ನಾಟಕದಲ್ಲಿ ಅದು ಏಕೆ ಸಾಧ್ಯವಿಲ್ಲ? ಇವತ್ತು ಅತ್ಯಧಿಕ ವಿದ್ಯುತ್‍ ಉತ್ಪಾದಿಸುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಇಲ್ಲಿ ಎಲ್ಲ ಪ್ರಕಾರಗಳ ವಿದ್ಯುತ್‍ ಉತ್ಪಾದನೆಯಾಗುತ್ತಿದೆ. ಆದರೂ ಖಾಸಗಿ ಕಂಪನಿಗಳಿಂದ ಖರೀದಿಸುವುದೇಕೆ? ನಮ್ಮಲ್ಲಿ ಉತ್ಪಾದನೆಯಾಗುವ ಮತ್ತು ಸೆಂಟ್ರಲ್‍ ಗ್ರಿಡ್‍ನಿಂದ ಉತ್ಪಾದನೆಯಾಗುವ ವಿದ್ಯುತ್‍ ನಮಗೆ ಸಾಲುತ್ತಿಲ್ಲವೆ? ಈ ಕುರಿತಾಗಿ ಒಂದು ಸಮರ್ಪಕ ವಿದ್ಯುತ್‍ ಆಡಿಟ್‍ ಮಾಡಬೇಕು ಎಂದು ಒತ್ತಾಯಿಸಬೇಕಾಗಿದೆ.

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...