Homeಮುಖಪುಟಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ಅದಾನಿಗೆ ಲಾಭ ಮಾಡಲು ವಿದ್ಯುತ್‍ ದರ ಏರಿಕೆ: ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

ದೆಹಲಿ ಸರ್ಕಾರ ವಿದ್ಯುತ್ ಉತ್ಪಾದನೆ ಮಾಡುತ್ತಿಲ್ಲ. ಆದರು ಅದು ತನ್ನ ಜನರಿಗೆ 200 ಯುನಿಟ್‍ ಮಾಸಿಕ ಉಚಿತ ವಿದ್ಯುತ್‍ ನೀಡಲು ಸಾಧ್ಯ ಆಗುವುದಾದರೆ ಕರ್ನಾಟಕದಲ್ಲಿ ಅದು ಏಕೆ ಸಾಧ್ಯವಿಲ್ಲ ಎಂದು ಆಪ್ ಪ್ರಶ್ನಿಸಿದೆ.

- Advertisement -
- Advertisement -

ನೀವು ಮನೆಯಲ್ಲಿ ಮಾಸಿಕ 200 ಯುನಿಟ್ ವಿದ್ಯುತ್‍ ಬಳಸಿದರೆ, ಇನ್ಮುಂದೆ 1,260 ರೂ. ಬಿಲ್‍ ಕಟ್ಟಬೇಕು. ವರ್ಷಕ್ಕೆ ಇದು 15 ಸಾವಿರ ರೂ. ಆಗುತ್ತದೆ! ನಿಮ್ಮನ್ನು ಮನೆಯಲ್ಲಿ ಕೂಡಿ ಹಾಕಿ, ನಿಮ್ಮ ಆದಾಯವನ್ನು ಕಿತ್ತುಕೊಳ್ಳಲಾಗಿದೆ. ಅನಿವಾರ್ಯವಾಗಿ ಟಿವಿ, ಫ್ರಿಡ್ಜ್ ಬಳಕೆ ಹೆಚ್ಚುವುದರಿಂದ ವಿದ್ಯುತ್‍ ಬಳಕೆಯೂ ಹೆಚ್ಚುತ್ತದೆ. ಸಂಬಳ ಪಡೆಯುವ ವರ್ಗಕ್ಕೇ ಇದು ಭಾರ. ಆದರೆ ನಿಶ್ಚಿತ ಆದಾಯವಿಲ್ಲದ, ಅಸಂಘಟಿತ ವಲಯಕ್ಕೆ ಸೇರಿದ ಮತ್ತು ಲಾಕ್‍ ಡೌನ್‍ ಕಾರಣಕ್ಕೆ ಕೆಲಸವೂ ಇಲ್ಲದಿರುವ ಜನತೆಗೆ ಇದೊಂದು ದೊಡ್ಡ ಹೊರೆಯಾಗಿದೆ.

ಆದರೆ ಯಡಿಯೂರಪ್ಪ ಸರ್ಕಾರದ ವಿದ್ಯುತ್‍ ದರ ಏರಿಕೆಯಿಂದ ಅತಿ ಹೆಚ್ಚು ಖುಷಿಗೊಂಡವರು ಗುಜರಾತ್‍ನ ಗೌತಮ್‍ ಅದಾನಿ ಎಂಬ ದೊಡ್ಡ ಕಾರ್ಪೊರೇಟ್ ಉದ್ಯಮಿ!

ಅದಾನಿ ಕಂಪನಿಗೆ ಲಾಭ ಮಾಡಲು ಕನ್ನಡಿಗರನ್ನು ಸರ್ಕಾರ ಪಿಕ್‍ಪಾಕೆಟ್‍ ಮಾಡುತ್ತಿದೆ ಎಂದು ಕಾಂಗ್ರೆಸ್‍, ಜೆಡಿಎಸ್‍ ಮತ್ತು ಇತರ ಪಕ್ಷಗಳು ಇದನ್ನು ಖಂಡಿಸಿವೆ. ಆದರೆ ರಾಜ್ಯದ ಆಮ್‍ ಆದ್ಮಿ ಪಕ್ಷ ಸ್ಪಷ್ಟ ದಾಖಲೆಗಳೊಂದಿಗೆ, ಇದು ಅದಾನಿಗೆ ಲಾಭ ಮಾಡಿಕೊಡುವ ಕುತಂತ್ರ ಎಂದು ನಿರೂಪಿಸಿದೆ. ರಾಜ್ಯ ಸಹ ಸಂಚಾಲಕಿ ಶಾಂತಲಾ ದಾಮ್ಲೆ ಅವರು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ವಿವರಗಳನ್ನು ನೀಡಲಾಗಿದೆ.

ನವೆಂಬರ್ 1, 2020ರ ನಂತರ ಪ್ರತಿ ಯೂನಿಟ್‍ಗೆ 40 ಪೈಸೆ (ಶೇ.6) ಏರಿಕೆಯಾಗಿದ್ದ ವಿದ್ಯುತ್ ದರವನ್ನು ಈಗ ಸರ್ಕಾರ ಮತ್ತೆ ಏರಿಕೆ ಮಾಡಿದೆ. ಪ್ರತೀ ಯೂನಿಟ್‍ಗೆ 30 ಪೈಸೆ (ಶೇ.4) ಏರಿಸಿ ಈಗಾಗಲೇ ಕೋವಿಡ್ ಲಾಕ್ ಡೌನ್‌ಗಳ ಪರಿಣಾಮ ತೀವ್ರ ಸಂಕಷ್ಟದಲ್ಲಿ ಇರುವ ಜನತೆಯ ಮೇಲೆ ಸರಕಾರ ದೊಡ್ಡ ಹೊರೆಯನ್ನು ಹಾಕಿದೆ ಎಂದು ಆಮ್‍ ಆದ್ಮಿ ಆರೋಪಿಸಿದೆ.

ಅದಾನಿಗೆ ಹೇಗೆ ಲಾಭ?

ರಾಜ್ಯ ಸರ್ಕಾರ ಅದಾನಿ ಕಂಪನಿಗಳಿಂದ ವಿದ್ಯುತ್‍ ಮತ್ತು ಕಲ್ಲಿದಲ್ಲನ್ನು ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರದಲ್ಲಿ ಖರೀದಿಸುತ್ತಿದೆ. ರಾಜ್ಯದ ಎಲ್ಲ ವಿದ್ಯುತ್‍ ಸರಬರಾಜು ಕಂಪನಿಗಳು ನಷ್ಟ ತೋರಿಸುತ್ತಿದ್ದರೆ, ಅದಾನಿಯ ಪವರ್ ಕಂಪನಿ ಬಂಪರ್ ಲಾಭ ಗಳಿಸಿದೆ. ಅದನ್ನು ಅದು ಅಧಿಕೃತವಾಗಿ ಘೋಷಿಸಿದೆ ಕೂಡ. ಅದರ ಪತ್ರಿಕಾ ಪ್ರಕಟಣೆ ಪ್ರಕಾರ, 2021ರ ನಾಲ್ಕನೇ ತ್ರೈಮಾಸಿಕದಲ್ಲಿ ಅದು 2,143 ಕೋಟಿ ರೂ. ಲಾಭ ಗಳಿಸಿದೆ. ಹಿಂದಿನ ವರ್ಷ ದ ನಾಲ್ಕನೆ ತ್ರೈಮಾಸಿಕಕ್ಕೆ ಹೋಲಿಸಿದರೆ ಇದು ಶೇ.496 ಏರಿಕೆ. 2021ರ ಆರ್ಥಿಕ ವರ್ಷದಲ್ಲಿ ಅದು 10,597 ಕೋಟಿ ರೂ. ಗಳಿಸಿದ್ದು, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇ.50ರಷ್ಟು ಏರಿಕೆಯಾಗಿದೆ!

ಅದಾನಿ ಪವರ್ ಕಂಪನಿಯು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಜೊತೆ ವಿದ್ಯುತ್‍ ಮಾರಾಟದ ಒಪ್ಪಂದ ಮಾಡುತ್ತಿದೆ. ಅಂದರೆ ಅದಾನಿಗೆ ಸಿಗುತ್ತಿರುವ ಲಾಭದಲ್ಲಿ ನಾವು ನೀವೆಲ್ಲ ಅನಗತ್ಯವಾಗಿ ಹೆಚ್ಚುವರಿಯಾಗಿ ಕಟ್ಟುತ್ತಿರುವ ವಿದ್ಯುತ್‍ ಬಿಲ್‍ನ ಪಾಲೂ ಇದೆ!

2019ರಲ್ಲಿ ಅದಾನಿಯ ಉಡುಪಿ ಪವರ್ ಕಾರ್ಪೋರೇಷನ್‌ಗೆ ಪಾವತಿಸಿದ ವಿವರ
2021ರಲ್ಲಿ ಅದಾನಿಯ ಉಡುಪಿ ಪವರ್ ಕಾರ್ಪೋರೇಷನ್‌ಗೆ ಪಾವತಿಸಿದ ವಿವರ

‘ಕಳೆದ ಎರಡು ವರ್ಷಗಳಿಂದ ಕರ್ನಾಟಕ ಸರ್ಕಾರ ಅದಾನಿ ಪವರ್ ಕಂಪನಿಯಿಂದ ಖರೀದಿ ಮಾಡುತ್ತಿರುವ ವಿದ್ಯುತ್‌ನ  ಬೆಲೆ ಸತತವಾಗಿ ಏರುತ್ತಿದೆ. ಬೆಸ್ಕಾಂ ಅದಾನಿಯಿಂದ ಖರೀದಿಸುವ ವಿದ್ಯುತ್ ಬೆಲೆ ಪ್ರತಿ ಯುನಿಟ್‍ಗೆ 4.76 ರೂಪಾಯಿಯಿಂದ 6.80 ರೂಪಾಯಿಗೆ ಏರಿದೆ, ಒಟ್ಟಾರೆ 2.02 ರೂಪಾಯಿ (ಶೇ. 42) ಏರಿಕೆ ಎಂದ ಶಾಂತಲಾ ದಾಮ್ಲೆ ಆರೋಪಿಸಿದ್ದಾರೆ.

ಇದನ್ನೂ ಓದಿ; 35000 ಸಾವಿರದಿಂದ ಸೊನ್ನೆ ರೂಗಿಳಿದ ವಿದ್ಯುತ್ ಬಿಲ್: ದೆಹಲಿ ಆಪ್ ಸರ್ಕಾರ ಮಾಡಿದ ಮೋಡಿಯಾದರೂ ಏನು ಗೊತ್ತೆ?

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಆಮ್‍ ಆದ್ಮಿ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್‍ ಜೈನ್‍, ‘ಐಐಟಿಗಳ ಎಲೆಕ್ಟ್ರಿಕಲ್ ಇಂಜಿನಿಯರಿಂಗ್‍ ವಿಭಾಗದ ತಜ್ಞ ಇಂಜಿನಿಯರ್‌ಗಳ ಜೊತೆ ಮಾತಾಡಿದ್ದೇವೆ. ಯಾವ ಕಾರಣಕ್ಕೂ ಒಂದು ಯುನಿಟ್‍ಗೆ ಸರ್ಕಾರಗಳು 3.20 ರೂ.ಗಿಂತ ಹೆಚ್ಚಿನ ಹಣವನ್ನು ಖಾಸಗಿ ವಿದ್ಯುತ್‍ ಕಂಪನಿಗಳಿಗೆ ನೀಡುವ ಅಗತ್ಯವೇ ಇಲ್ಲ ಎಂದು ಅವರು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಆದರೆ ನಮ್ಮ ಸರ್ಕಾರ ಪ್ರತಿ ಯುನಿಟ್‍ಗೆ 6.80 ರೂ ನೀಡುವ ಮೂಲಕ ಅನಗತ್ಯವಾಗಿ ಎರಡು ಪಟ್ಟಿಗಿಂತ ಹೆಚ್ಚಿನ ದರವನ್ನು ನೀಡಿ ಅದಾನಿಗೆ ಲಾಭ ಮಾಡಿಕೊಡುತ್ತಿದೆ. ಅದಾನಿ ಮೋದಿಯವರ ಆಪ್ತರು ಎಂಬುದು ರಹಸ್ಯವೇನಲ್ಲ. ಹೀಗಾಗಿ ರಾಜ್ಯ ಬಿಜೆಪಿ ಸರ್ಕಾರ ಅದಾನಿಗೆ ಲಾಭ ಮಾಡಲು ಜನರ ಮೇಲೆ ಹೊರೆ ಹೇರುತ್ತಿದೆ. ಇಲ್ಲಿ ಸಹಜವಾಗಿ ಕಮೀಷನ್‍ ವ್ಯವಹಾರ ಇದ್ದೇ ಇರುತ್ತದೆ’ ಎಂದು ಆರೋಪಿಸಿದರು.

2018ರ ಸರ್ಕಾರಿ ದಾಖಲೆ ಪ್ರಕಾರ, ಉಡುಪಿ ಪವರ್ ಕಾರ್ಪೋರೇಷನ್‍ ಲಿಮಿಟೆಡ್‍ (ಯುಪಿಸಿಎಲ್‍-ಅದಾನಿ ಕಂಪನಿ) ಕಂಪನಿಯಿಂದ ಯುನಿಟ್‍ಗೆ 4.76 ರೂ. ದರದಲ್ಲಿ ವಿದ್ಯುತ್‍ ಖರೀದಿಸಿದ ಸರ್ಕಾರ ಒಟ್ಟು 2,085 ಕೋಟಿ ರೂ.ಗಳನ್ನ ಅದಾನಿ ಕಂಪನಿಗೆ ಪಾವತಿಸಿದೆ. ಈಗ ಯಡಿಯೂರಪ್ಪ ಸರ್ಕಾರವು ಯುನಿಟ್‍ಗೆ 6.80 ರೂ ದರದಲ್ಲಿ ಖರೀದಿ ಮಾಡುತ್ತಿದೆ! ಹೀಗೆ ಅದಾನಿ ಕಂಪನಿಗೆ ದುಪ್ಪಟ್ಟು ಹಣ ನೀಡಿ, ಆ ನಷ್ಟವನ್ನು ತುಂಬಿಕೊಳ್ಳಲು ವಿದ್ಯುತ್‍ ದರ ಏರಿಸಲಾಗುತ್ತಿದೆ ಎಂದು ಆಮ್‍ ಆದ್ಮಿ ಆರೋಪಿಸಿದೆ.

ದೆಹಲಿಯಲ್ಲಿ ಸಾಧ್ಯವಾಗಿದ್ದು ಇಲ್ಲೇಕೆ ಇಲ್ಲ?

‘ದೆಹಲಿಯ ಜನತೆ ತಿಂಗಳಿಗೆ 200 ಯುನಿಟ್ ಉಚಿತ ವಿದ್ಯುತ್ ಬಳಸುತ್ತಾರೆ. ದೆಹಲಿಯ ಶೇ.70 ಜನ ವಿದ್ಯುತ್ ಬಿಲ್ ಪಾವತಿಸುವುದೇ ಇಲ್ಲ! ಕಳೆದ ಆರು ವರ್ಷಗಳಲ್ಲಿ ವಿದ್ಯುತ್ ಬೆಲೆ ಏರಿಕೆಯಾಗಿಯೇ ಇಲ್ಲ’ ಎಂದು ಶಾಂತಲ ದಾಮ್ಲೆ ಹೇಳುತ್ತಾರೆ.

‘ಕರ್ನಾಟಕವು ಲಭ್ಯವಿರುವ ಎಲ್ಲಾ ನೈಸರ್ಗಿಕ ಮೂಲಗಳನ್ನು ಅಂದರೆ ನೀರು, ಗಾಳಿ ಮತ್ತು ಸೌರ ಶಕ್ತಿಯನ್ನು ಬಳಸಿ ವಿದ್ಯುತ್ ಉತ್ಪಾದಿಸುತ್ತದೆ. ಹೀಗಿದ್ದೂ ಸರಕಾರ ವಿದ್ಯುತ್ ಬೆಲೆ ಏರಿಸಿ ಜನತೆಯನ್ನು ಯಾಕೆ ಹಿಂಸಿಸುತ್ತಿದೆ? ವಿದ್ಯುತ್ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆಯೇ?’ ಎಂದು ಅವರು ಪ್ರಶ್ನಿಸುತ್ತಾರೆ.

‘ಕಳೆದ ವರ್ಷ ಕಲ್ಲಿದ್ದಿಲಿನ ಬೆಲೆ ಇಳಿದಿದ್ದರೂ ಅದಾನಿ ಪವರ್ ಕರ್ನಾಟಕ ಸರ್ಕಾರಕ್ಕೆ ಅಧಿಕ ಬೆಲೆಗೆ  ಕಲ್ಲಿದ್ದಲು ಮತ್ತು  ವಿದ್ಯುತ್‍ ಮಾರಿತ್ತು. ಆ ಸಂದರ್ಭದಲ್ಲಿ ಸ್ವತಃ ಮುಖ್ಯಮಂತ್ರಿ ಯಡಿಯೂರಪ್ಪನವರೇ ಇಂಧನ ಖಾತೆಯನ್ನು ಹೊಂದಿದ್ದರು. ರಾಜ್ಯ ಮುಗ್ಗಟ್ಟಿನಲ್ಲಿ ಬಳಲಿ ಹೋಗಿದ್ದಾಗ ಯಡಿಯೂರಪ್ಪನವರಿಗೆ ಜನರ ದುಡ್ಡಿನಿಂದ ಅದಾನಿ ಪವರ್‌ನ ಜೇಬು ತುಂಬಿಸುವ ನೀಚ ಮನಸ್ಸಾದರೂ ಹೇಗೆ ಬಂತು?’ ಎಂದು ಆಮ್‍ ಆದ್ಮಿ ಪ್ರಶ್ನೆ ಎತ್ತಿದೆ.

ದೆಹಲಿ ಸರ್ಕಾರ ವಿದ್ಯುತ್ ಉತ್ಪಾದನೆ ಮಾಡುತ್ತಿಲ್ಲ. ಅದು ಖಾಸಗಿ ಕಂಪನಿಗಳಿಂದ ವಿದ್ಯುತ್‍ ಖರೀದಿಸಿಯೂ ತನ್ನ ಜನರಿಗೆ 200 ಯುನಿಟ್‍ ಮಾಸಿಕ ವಿದ್ಯುತ್‍ ನೀಡಲು ಸಾಧ್ಯ ಆಗುವುದಾದರೆ ಕರ್ನಾಟಕದಲ್ಲಿ ಅದು ಏಕೆ ಸಾಧ್ಯವಿಲ್ಲ? ಇವತ್ತು ಅತ್ಯಧಿಕ ವಿದ್ಯುತ್‍ ಉತ್ಪಾದಿಸುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು. ಇಲ್ಲಿ ಎಲ್ಲ ಪ್ರಕಾರಗಳ ವಿದ್ಯುತ್‍ ಉತ್ಪಾದನೆಯಾಗುತ್ತಿದೆ. ಆದರೂ ಖಾಸಗಿ ಕಂಪನಿಗಳಿಂದ ಖರೀದಿಸುವುದೇಕೆ? ನಮ್ಮಲ್ಲಿ ಉತ್ಪಾದನೆಯಾಗುವ ಮತ್ತು ಸೆಂಟ್ರಲ್‍ ಗ್ರಿಡ್‍ನಿಂದ ಉತ್ಪಾದನೆಯಾಗುವ ವಿದ್ಯುತ್‍ ನಮಗೆ ಸಾಲುತ್ತಿಲ್ಲವೆ? ಈ ಕುರಿತಾಗಿ ಒಂದು ಸಮರ್ಪಕ ವಿದ್ಯುತ್‍ ಆಡಿಟ್‍ ಮಾಡಬೇಕು ಎಂದು ಒತ್ತಾಯಿಸಬೇಕಾಗಿದೆ.

ಪಿ.ಕೆ. ಮಲ್ಲನಗೌಡರ್


ಇದನ್ನೂ ಓದಿ: ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...