Homeಕರ್ನಾಟಕಮುಖ್ಯಮಂತ್ರಿಗಳ ದಾಳಿಗೆ ಬಗ್ಗುವುದಿಲ್ಲ, ಪವರ್ ಟಿವಿ ಪುಟಿದೇಳಲಿದೆ: ರಹಮಾನ್ ಹಾಸನ್

ಮುಖ್ಯಮಂತ್ರಿಗಳ ದಾಳಿಗೆ ಬಗ್ಗುವುದಿಲ್ಲ, ಪವರ್ ಟಿವಿ ಪುಟಿದೇಳಲಿದೆ: ರಹಮಾನ್ ಹಾಸನ್

ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “Power TV” ಪ್ರಸಾರವನ್ನು ನಿನ್ನೆ ರಾತ್ರಿಯಿಂದ ತಡೆಹಿಡಿಯಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಮಗ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ Power TV ಯ ಪ್ರಸಾರಕ್ಕೆ ತೆಡೆಯೊಡ್ಡಲಾಗಿದೆ. ಇದನ್ನು ಸಿಎಂ ಮತ್ತು ಅವರ ಮಗ ವಿಜಯೇಂದ್ರ ಮಾಡುತ್ತಿದ್ದಾರೆ. ಇದು ಅಧಿಕಾರದ ದುರುಪಯೋಗವಾಗಿದ್ದು, ಪವರ್‌ ಟಿವಿ ಇದಕ್ಕೆ ಬಗ್ಗುವುದಿಲ್ಲ. ನಾವು ಕಾನೂನಾತ್ಮವಾಗಿ ಹೋರಾಡುತ್ತೇವೆ ಎಂದು ಪವರ್‌ ಟಿವಿಯ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “Power TV”ಯ ಪ್ರಸಾರವನ್ನು ನಿನ್ನೆ ರಾತ್ರಿಯಿಂದ ತಡೆಹಿಡಿಯಲಾಗಿದೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: Power TV ಪ್ರಸಾರಕ್ಕೆ ತಡೆ!

ಈ ಕುರಿತು ಇಂದು ಬೆಳಿಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಹಮಾನ್ ಹಾಸನ್, “ಸಿಸಿಬಿ ಅಧಿಕಾರಿಗಳು ನಿನ್ನೆ ಸರ್ಚ್‌ ವಾರೆಂಟ್ ತಂದು ಪವರ್‌ ಟಿವಿಯ ಲೈವ್‌ ಅನ್ನು ತಡೆ ಹಿಡಿದಿದ್ದಾರೆ. ನಮ್ಮ ಹಾರ್ಡ್‌ಡಿಸ್ಕ್‌, ಲ್ಯಾಪ್‌ಟಾಪ್‌ ಇತ್ಯಾದಿ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಂತರ ನಮ್ಮ ಸರ್ವರ್‌ ರೂಮ್‌‌ಗೆ ತೆರಳಿ ನಮ್ಮ ಮುಖ್ಯವಾದ ಸರ್ವರ್‌‌ನಲ್ಲಿರುವ ಡಾಟಾ ಎಲ್ಲವೂ ಬೇಕು ಎಂದಿದ್ದಾರೆ, ಅದಕ್ಕೆ ನಾವು ಡಾಟಾ ಎಲ್ಲವನ್ನೂ ನಿಮಗೆ ಕಾಪಿ ಮಾಡಿ ಕೊಡುತ್ತೇವೆ ಎಂದೆವು ಆದರೆ ಅವನ್ನು ಕೇಳದೆ ಸಂಪೂರ್ಣ ಸರ್ವರ್‌ ಸಿಸ್ಟಂ ಅನ್ನೇ ಪಡೆದುಕೊಂಡಿದ್ದಾರೆ. ಇದರಿಂದಾಗಿ ನಮ್ಮ ಲೈವ್‌ ಕಟ್‌ ಆಗಿದೆ” ಎಂದಿದ್ದಾರೆ.

“ಇಷ್ಟೇ ಅಲ್ಲದೆ, ಫೇಸ್‌ಬುಕ್‌ ಖಾತೆಗಳನ್ನು, ಯೂಟ್ಯೂಬ್‌ ಚಾನೆಲ್‌ನ ಪಾಸ್‌ವರ್ಡ್ ಚೇಂಜ್ ಮಾಡಿ ಅದರ ಪ್ರಸಾರ ನಿಲ್ಲಿಸಿದ್ದಾರೆ. ಇದು ಖಂಡಿತವಾಗಿಯೂ ಅಧಿಕಾರದ ದುರುಪಯೋಗ, ಇದನ್ನು ಸಿಎಂ ಮತ್ತು ಅವರ ಮಗ ಇದನ್ನು ಮಾಡಿದ್ದಾರೆ ಎಂಬುವುದರಲ್ಲಿ ಅನುಮಾನವೆ ಇಲ್ಲ. ಯಾಕೆಂದರೆ ನಾವು ಅವರ ಭ್ರಷ್ಟಾಚಾರವನ್ನು ಸುದ್ದಿ ಮಾಡಿದ್ದೆವು. ಮಾಧ್ಯಮದ ಸ್ವಾತಂತ್ಯ್ರವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಹಮಾನ್ ಹೇಳಿದ್ದಾರೆ.

“ಆದರೆ ನಮ್ಮ ಪ್ರತಿಪಾದನೆಯೇನೆಂದರೆ ನಮ್ಮ ಎಂ.ಡಿ ರಾಕೇಶ್‌ ಶೆಟ್ಟಿಯವರ ಮೇಲೆ ಏನೇ ಪ್ರಕರಣಗಳಿದ್ದರೂ ಅದನ್ನು ಕೋರ್ಟ್‌ನಲ್ಲಿ ಇತ್ಯರ್ಥ ಮಾಡಬೇಕು. ಆದರೆ ಚಾನೆಲ್ ತಡೆಹಿಡಿಯುವುದು ಉದ್ಯೋಗಿಗಳ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡುತ್ತದೆ. ಇದು ಖಂಡನೀಯ. ಪತ್ರಕರ್ತರ ಹಕ್ಕನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದಕ್ಕೆ ನಾವು ಬಗ್ಗುವುದಿಲ್ಲ. ಇದನ್ನು ನಾವು ಕಾನೂನಾತ್ಮಕವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ Power TV MD ಮನೆ ಮೇಲೆ ಪೊಲೀಸರ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...