Homeಕರ್ನಾಟಕಮುಖ್ಯಮಂತ್ರಿಗಳ ದಾಳಿಗೆ ಬಗ್ಗುವುದಿಲ್ಲ, ಪವರ್ ಟಿವಿ ಪುಟಿದೇಳಲಿದೆ: ರಹಮಾನ್ ಹಾಸನ್

ಮುಖ್ಯಮಂತ್ರಿಗಳ ದಾಳಿಗೆ ಬಗ್ಗುವುದಿಲ್ಲ, ಪವರ್ ಟಿವಿ ಪುಟಿದೇಳಲಿದೆ: ರಹಮಾನ್ ಹಾಸನ್

ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “Power TV” ಪ್ರಸಾರವನ್ನು ನಿನ್ನೆ ರಾತ್ರಿಯಿಂದ ತಡೆಹಿಡಿಯಲಾಗಿದೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರ ಮಗ ಬಿ.ವೈ ವಿಜಯೇಂದ್ರ ಭ್ರಷ್ಟಾಚಾರವನ್ನು ಬಯಲಿಗೆಳೆದಿದ್ದಕ್ಕೆ Power TV ಯ ಪ್ರಸಾರಕ್ಕೆ ತೆಡೆಯೊಡ್ಡಲಾಗಿದೆ. ಇದನ್ನು ಸಿಎಂ ಮತ್ತು ಅವರ ಮಗ ವಿಜಯೇಂದ್ರ ಮಾಡುತ್ತಿದ್ದಾರೆ. ಇದು ಅಧಿಕಾರದ ದುರುಪಯೋಗವಾಗಿದ್ದು, ಪವರ್‌ ಟಿವಿ ಇದಕ್ಕೆ ಬಗ್ಗುವುದಿಲ್ಲ. ನಾವು ಕಾನೂನಾತ್ಮವಾಗಿ ಹೋರಾಡುತ್ತೇವೆ ಎಂದು ಪವರ್‌ ಟಿವಿಯ ಪ್ರಿನ್ಸಿಪಲ್ ಎಡಿಟರ್‌ ರಹಮಾನ್ ಹಾಸನ್ ಹೇಳಿದ್ದಾರೆ.

ಬಿ.ವೈ ವಿಜಯೇಂದ್ರ ಭ್ರಷ್ಟಾಚಾರ ನಡೆಸಿದ್ದಾರೆಂದು ಕಳೆದ ಹಲವು ದಿನಗಳಿಂದ ದಾಖಲೆ ಸಹಿತ ಸತತವಾಗಿ ವರದಿ ಮಾಡಿ ರಾಜ್ಯದ ಗಮನ ಸೆಳೆದಿದ್ದ ಕನ್ನಡದ ಸುದ್ದಿ ಮಾಧ್ಯಮ “Power TV”ಯ ಪ್ರಸಾರವನ್ನು ನಿನ್ನೆ ರಾತ್ರಿಯಿಂದ ತಡೆಹಿಡಿಯಲಾಗಿದೆ.

ಇದನ್ನೂ ಓದಿ: ಸಿಎಂ ಮಗನ ಭ್ರಷ್ಟಾಚಾರ ಬಯಲು: Power TV ಪ್ರಸಾರಕ್ಕೆ ತಡೆ!

ಈ ಕುರಿತು ಇಂದು ಬೆಳಿಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ರಹಮಾನ್ ಹಾಸನ್, “ಸಿಸಿಬಿ ಅಧಿಕಾರಿಗಳು ನಿನ್ನೆ ಸರ್ಚ್‌ ವಾರೆಂಟ್ ತಂದು ಪವರ್‌ ಟಿವಿಯ ಲೈವ್‌ ಅನ್ನು ತಡೆ ಹಿಡಿದಿದ್ದಾರೆ. ನಮ್ಮ ಹಾರ್ಡ್‌ಡಿಸ್ಕ್‌, ಲ್ಯಾಪ್‌ಟಾಪ್‌ ಇತ್ಯಾದಿ ಎಲ್ಲಾ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ನಂತರ ನಮ್ಮ ಸರ್ವರ್‌ ರೂಮ್‌‌ಗೆ ತೆರಳಿ ನಮ್ಮ ಮುಖ್ಯವಾದ ಸರ್ವರ್‌‌ನಲ್ಲಿರುವ ಡಾಟಾ ಎಲ್ಲವೂ ಬೇಕು ಎಂದಿದ್ದಾರೆ, ಅದಕ್ಕೆ ನಾವು ಡಾಟಾ ಎಲ್ಲವನ್ನೂ ನಿಮಗೆ ಕಾಪಿ ಮಾಡಿ ಕೊಡುತ್ತೇವೆ ಎಂದೆವು ಆದರೆ ಅವನ್ನು ಕೇಳದೆ ಸಂಪೂರ್ಣ ಸರ್ವರ್‌ ಸಿಸ್ಟಂ ಅನ್ನೇ ಪಡೆದುಕೊಂಡಿದ್ದಾರೆ. ಇದರಿಂದಾಗಿ ನಮ್ಮ ಲೈವ್‌ ಕಟ್‌ ಆಗಿದೆ” ಎಂದಿದ್ದಾರೆ.

“ಇಷ್ಟೇ ಅಲ್ಲದೆ, ಫೇಸ್‌ಬುಕ್‌ ಖಾತೆಗಳನ್ನು, ಯೂಟ್ಯೂಬ್‌ ಚಾನೆಲ್‌ನ ಪಾಸ್‌ವರ್ಡ್ ಚೇಂಜ್ ಮಾಡಿ ಅದರ ಪ್ರಸಾರ ನಿಲ್ಲಿಸಿದ್ದಾರೆ. ಇದು ಖಂಡಿತವಾಗಿಯೂ ಅಧಿಕಾರದ ದುರುಪಯೋಗ, ಇದನ್ನು ಸಿಎಂ ಮತ್ತು ಅವರ ಮಗ ಇದನ್ನು ಮಾಡಿದ್ದಾರೆ ಎಂಬುವುದರಲ್ಲಿ ಅನುಮಾನವೆ ಇಲ್ಲ. ಯಾಕೆಂದರೆ ನಾವು ಅವರ ಭ್ರಷ್ಟಾಚಾರವನ್ನು ಸುದ್ದಿ ಮಾಡಿದ್ದೆವು. ಮಾಧ್ಯಮದ ಸ್ವಾತಂತ್ಯ್ರವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಹಮಾನ್ ಹೇಳಿದ್ದಾರೆ.

“ಆದರೆ ನಮ್ಮ ಪ್ರತಿಪಾದನೆಯೇನೆಂದರೆ ನಮ್ಮ ಎಂ.ಡಿ ರಾಕೇಶ್‌ ಶೆಟ್ಟಿಯವರ ಮೇಲೆ ಏನೇ ಪ್ರಕರಣಗಳಿದ್ದರೂ ಅದನ್ನು ಕೋರ್ಟ್‌ನಲ್ಲಿ ಇತ್ಯರ್ಥ ಮಾಡಬೇಕು. ಆದರೆ ಚಾನೆಲ್ ತಡೆಹಿಡಿಯುವುದು ಉದ್ಯೋಗಿಗಳ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಉಂಟುಮಾಡುತ್ತದೆ. ಇದು ಖಂಡನೀಯ. ಪತ್ರಕರ್ತರ ಹಕ್ಕನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದ್ದಾರೆ. ಆದರೆ ಇದಕ್ಕೆ ನಾವು ಬಗ್ಗುವುದಿಲ್ಲ. ಇದನ್ನು ನಾವು ಕಾನೂನಾತ್ಮಕವಾಗಿ ಹೋರಾಡುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಸಿಎಂ ಪುತ್ರನ ಭ್ರಷ್ಟಾಚಾರದ ಬಗ್ಗೆ ನಿರಂತರ ವರದಿ ಮಾಡಿದ Power TV MD ಮನೆ ಮೇಲೆ ಪೊಲೀಸರ ದಾಳಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...