Homeದಲಿತ್ ಫೈಲ್ಸ್ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ...

ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ ದಾಳಿ

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿ ದಲಿತ ಸಮುದಾಯದ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ಗುಂಪು ದಾಳಿ ನಡೆಸಿದ್ದು, ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿದ್ದಾರೆ ಎಂದು ವರದಿಯಾಗಿದೆ. ಇಷ್ಟಕ್ಕೇ ಸುಮ್ಮನಾಗದ ಗುಂಪು, ‘ಮತ್ತೆ ಸವಾರಿ ಮಾಡಿದರೆ ಗುಂಡಿಕ್ಕಿ’ ಎಂದು ವರನಿಗೆ ಬೆದರಿಕೆ ಹಾಕಿದ್ದಾರೆ.

ಮಥುರಾ ಜಿಲ್ಲೆಯ ಭೂರೇಕಾ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಆಯೋಜನೆಯಾಗಿತ್ತು. ಡಿಜೆ ಜೊತೆಗೆ ಸಾಗುತ್ತಿದ್ದ ಮದುವೆ ಮೆರವಣಿಗೆ ಮೇಲೆ ಪ್ರಬಲಜಾತಿ ಪುರುಷರ ಗುಂಪೊಂದು ದಾಳಿ ನಡೆಸಿದೆ. ನಂತರ, ದಲಿತ ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಸಿ ಬೆದರಿಕೆ ಹಾಕಿದ್ದಾರೆ. ವಿವಾಹಕ್ಕೆ ಆಗಮಿಸಿದ್ದ ಹಲವಾರು ಅತಿಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಜೆ ಸಂಗೀತ ಮತ್ತು ಕುದುರೆ ಮೆರವಣಿಗೆಯಿಂದ ಕುಪಿತಗೊಂಡ ಸವರ್ಣೀಯರು, ಮೆರವಣಿಗೆ ಮುಂದುವರಿದರೆ ವರ ಮತ್ತು ಇತರ ಅತಿಥಿಗಳಿಗಳ ಮೇಲೆ ಗುಂಡು ಹಾರಿಸಲಾಗುವುದು ಎಂದು ಜೀವ ಬೆದರಿಕೆ ಹಾಕಿದ್ದಾನೆ. “ಎಫ್ಐಆರ್ ದಾಖಲಿಸಲಾಗಿದೆ, ತನಿಖೆ ನಡೆಯುತ್ತಿದೆ” ಎಂದು ಹೇಳಿದ ಡಿಎಸ್‌ಪಿ (ಮಂತ್) ಗುಂಜನ್ ಸಿಂಗ್, ವರನನ್ನು ಬಲವಂತವಾಗಿ ಕುದುರೆಯಿಂದ ಇಳಿಸಲಾಗಿದೆ ಎಂಬ ಆರೋಪವನ್ನು ನಿರಾಕರಿಸಿದರು.

ವಧುವಿನ ಚಿಕ್ಕಪ್ಪ ಪುರಣ್ ಸಿಂಗ್ ಪೊಲೀಸರಿಗೆ ನೀಡಿದ ದೂರಿನಲ್ಲಿ, ಮಥುರಾದ ನವಲಿ ನಿವಾಸಿಗಳಾದ ಕೃಷ್ಣ, ಮನೀಶ್ ಕುಮಾರ್ ಮತ್ತು ಅಂಕುರ್ ಅವರನ್ನು ಪ್ರಮುಖ ಆರೋಪಿಗಳೆಂದು ಹೆಸರಿಸಿದ್ದಾರೆ.
“ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ, ಮೂವರು, 20-25 ಅಪರಿಚಿತ ವ್ಯಕ್ತಿಗಳೊಂದಿಗೆ, ಮೆರವಣಿಗೆಯನ್ನು ನಿಲ್ಲಿಸಿ ಜಾತಿ ನಿಂದನೆ ಮಾಡಿದ್ದಾರೆ. ನಮ್ಮ ಕುಟುಂಬ ಸದಸ್ಯರ ಮೇಲೆ ಕೋಲುಗಳಿಂದ ಹಲ್ಲೆ ನಡೆಸಿದರು. ನಮ್ಮ ಮುಂದೆ ಡಿಜೆ ಮತ್ತು ಕುದುರೆ ಮೆರವಣಿಗೆ ನಡೆಸುವುದಕ್ಕೆ ನಿಮಗೆ ಧೈರ್ಯ ಹೇಗೆ ಬಂತು ಎಂದು ಅವರು ನಮ್ಮನ್ನು ಕೇಳಿದರು. ಅವರು ವರನನ್ನು ಕುದುರೆ ಮೇಲಿಂದ ಎಳೆದು, ಡಿಜೆಯನ್ನು ನಿಲ್ಲಿಸಿ, ಮೆರವಣಿಗೆ ನಿಲ್ಲಿಸದಿದ್ದರೆ ನಮ್ಮನ್ನು ಕೊಲ್ಲುತ್ತೇವೆ ಎಂದು ಹೇಳಿದರು. ನಾನು 112 ಸಂಖ್ಯೆಗೆ ಕರೆ ಮಾಡಿದೆ, ಪೊಲೀಸರು ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಬಂದರು. ನಂತರ ಪೊಲೀಸ್ ರಕ್ಷಣೆಯಲ್ಲಿ, ವಿವಾಹ ಸಮಾರಂಭ ಹಾಗೂ ಔತಣಕೂಟ ನಡೆಸಲಾಯಿತು” ಎಂದರು.

ಗುರುವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಮೋಟಾರ್ ಸೈಕಲ್‌ಗಳಲ್ಲಿ ಕೋಲುಗಳು, ಪಿಸ್ತೂಲ್‌ಗಳು ಮತ್ತು ಚಾಕುಗಳೊಂದಿಗೆ ಗುಂಪು ಮರಳಿದೆ ಎಂದು ಆರೋಪಿಸಲಾಗಿದೆ. ಅವರು ಮನೆಗೆ ನುಗ್ಗಿ ವರನ ಕುಟುಂಬದ ಹಲವಾರು ಸದಸ್ಯರ ಮೇಲೆ ಹಲ್ಲೆ ನಡೆಸಿದರು. “ಅವರು ಜಾತಿ ನಿಂದನೆ ಮಾಡಿ ಥಳಿಸಿದರು. ಅವರು ನಮ್ಮ ಬಟ್ಟೆಗಳನ್ನು ಹರಿದು ಹಾಕಿ, ಹಾಸಿಗೆಗಳು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಮನೆಯ ವಸ್ತುಗಳನ್ನು ಧ್ವಂಸಗೊಳಿಸಿದರು” ಎಂದು ಸಿಂಗ್ ಆರೋಪಿಸಿದ್ದಾರೆ.

“ನೌಝೀಲ್ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 191-2 (ಗಲಭೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆ ಸೇರಿದಂತೆ ಹಲವಾರು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅನ್ವಯವಾಗುವ ಇತರ ಸೆಕ್ಷನ್‌ಗಳಲ್ಲಿ ಬಿಎನ್ಎಸ್ 76 (ಮಹಿಳೆಯ ಮೇಲೆ ಬಟ್ಟೆ ಎಳೆಯುವ ಅಥವಾ ಬೆತ್ತಲೆಯಾಗುವಂತೆ ಒತ್ತಾಯಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಮತ್ತು 333 (ಹಾನಿ, ಹಲ್ಲೆ ಅಥವಾ ತಪ್ಪು ಸಂಯಮವನ್ನು ಉಂಟುಮಾಡಲು ಸಿದ್ಧತೆಯ ನಂತರ ಮನೆಗೆ ಅತಿಕ್ರಮಣ) ಸೇರಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು  ಮಾಹಿತಿ ನೀಡಿದ್ದಾರೆ.

ತಮಿಳುನಾಡು| ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವು, ಒಬ್ಬರ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...