Homeದಲಿತ್ ಫೈಲ್ಸ್ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ...

ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ ದಾಳಿ

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿ ದಲಿತ ಸಮುದಾಯದ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ಗುಂಪು ದಾಳಿ ನಡೆಸಿದ್ದು, ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿದ್ದಾರೆ ಎಂದು ವರದಿಯಾಗಿದೆ. ಇಷ್ಟಕ್ಕೇ ಸುಮ್ಮನಾಗದ ಗುಂಪು, ‘ಮತ್ತೆ ಸವಾರಿ ಮಾಡಿದರೆ ಗುಂಡಿಕ್ಕಿ’ ಎಂದು ವರನಿಗೆ ಬೆದರಿಕೆ ಹಾಕಿದ್ದಾರೆ.

ಮಥುರಾ ಜಿಲ್ಲೆಯ ಭೂರೇಕಾ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಆಯೋಜನೆಯಾಗಿತ್ತು. ಡಿಜೆ ಜೊತೆಗೆ ಸಾಗುತ್ತಿದ್ದ ಮದುವೆ ಮೆರವಣಿಗೆ ಮೇಲೆ ಪ್ರಬಲಜಾತಿ ಪುರುಷರ ಗುಂಪೊಂದು ದಾಳಿ ನಡೆಸಿದೆ. ನಂತರ, ದಲಿತ ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಸಿ ಬೆದರಿಕೆ ಹಾಕಿದ್ದಾರೆ. ವಿವಾಹಕ್ಕೆ ಆಗಮಿಸಿದ್ದ ಹಲವಾರು ಅತಿಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಜೆ ಸಂಗೀತ ಮತ್ತು ಕುದುರೆ ಮೆರವಣಿಗೆಯಿಂದ ಕುಪಿತಗೊಂಡ ಸವರ್ಣೀಯರು, ಮೆರವಣಿಗೆ ಮುಂದುವರಿದರೆ ವರ ಮತ್ತು ಇತರ ಅತಿಥಿಗಳಿಗಳ ಮೇಲೆ ಗುಂಡು ಹಾರಿಸಲಾಗುವುದು ಎಂದು ಜೀವ ಬೆದರಿಕೆ ಹಾಕಿದ್ದಾನೆ. “ಎಫ್ಐಆರ್ ದಾಖಲಿಸಲಾಗಿದೆ, ತನಿಖೆ ನಡೆಯುತ್ತಿದೆ” ಎಂದು ಹೇಳಿದ ಡಿಎಸ್‌ಪಿ (ಮಂತ್) ಗುಂಜನ್ ಸಿಂಗ್, ವರನನ್ನು ಬಲವಂತವಾಗಿ ಕುದುರೆಯಿಂದ ಇಳಿಸಲಾಗಿದೆ ಎಂಬ ಆರೋಪವನ್ನು ನಿರಾಕರಿಸಿದರು.

ವಧುವಿನ ಚಿಕ್ಕಪ್ಪ ಪುರಣ್ ಸಿಂಗ್ ಪೊಲೀಸರಿಗೆ ನೀಡಿದ ದೂರಿನಲ್ಲಿ, ಮಥುರಾದ ನವಲಿ ನಿವಾಸಿಗಳಾದ ಕೃಷ್ಣ, ಮನೀಶ್ ಕುಮಾರ್ ಮತ್ತು ಅಂಕುರ್ ಅವರನ್ನು ಪ್ರಮುಖ ಆರೋಪಿಗಳೆಂದು ಹೆಸರಿಸಿದ್ದಾರೆ.
“ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ, ಮೂವರು, 20-25 ಅಪರಿಚಿತ ವ್ಯಕ್ತಿಗಳೊಂದಿಗೆ, ಮೆರವಣಿಗೆಯನ್ನು ನಿಲ್ಲಿಸಿ ಜಾತಿ ನಿಂದನೆ ಮಾಡಿದ್ದಾರೆ. ನಮ್ಮ ಕುಟುಂಬ ಸದಸ್ಯರ ಮೇಲೆ ಕೋಲುಗಳಿಂದ ಹಲ್ಲೆ ನಡೆಸಿದರು. ನಮ್ಮ ಮುಂದೆ ಡಿಜೆ ಮತ್ತು ಕುದುರೆ ಮೆರವಣಿಗೆ ನಡೆಸುವುದಕ್ಕೆ ನಿಮಗೆ ಧೈರ್ಯ ಹೇಗೆ ಬಂತು ಎಂದು ಅವರು ನಮ್ಮನ್ನು ಕೇಳಿದರು. ಅವರು ವರನನ್ನು ಕುದುರೆ ಮೇಲಿಂದ ಎಳೆದು, ಡಿಜೆಯನ್ನು ನಿಲ್ಲಿಸಿ, ಮೆರವಣಿಗೆ ನಿಲ್ಲಿಸದಿದ್ದರೆ ನಮ್ಮನ್ನು ಕೊಲ್ಲುತ್ತೇವೆ ಎಂದು ಹೇಳಿದರು. ನಾನು 112 ಸಂಖ್ಯೆಗೆ ಕರೆ ಮಾಡಿದೆ, ಪೊಲೀಸರು ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಬಂದರು. ನಂತರ ಪೊಲೀಸ್ ರಕ್ಷಣೆಯಲ್ಲಿ, ವಿವಾಹ ಸಮಾರಂಭ ಹಾಗೂ ಔತಣಕೂಟ ನಡೆಸಲಾಯಿತು” ಎಂದರು.

ಗುರುವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಮೋಟಾರ್ ಸೈಕಲ್‌ಗಳಲ್ಲಿ ಕೋಲುಗಳು, ಪಿಸ್ತೂಲ್‌ಗಳು ಮತ್ತು ಚಾಕುಗಳೊಂದಿಗೆ ಗುಂಪು ಮರಳಿದೆ ಎಂದು ಆರೋಪಿಸಲಾಗಿದೆ. ಅವರು ಮನೆಗೆ ನುಗ್ಗಿ ವರನ ಕುಟುಂಬದ ಹಲವಾರು ಸದಸ್ಯರ ಮೇಲೆ ಹಲ್ಲೆ ನಡೆಸಿದರು. “ಅವರು ಜಾತಿ ನಿಂದನೆ ಮಾಡಿ ಥಳಿಸಿದರು. ಅವರು ನಮ್ಮ ಬಟ್ಟೆಗಳನ್ನು ಹರಿದು ಹಾಕಿ, ಹಾಸಿಗೆಗಳು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಮನೆಯ ವಸ್ತುಗಳನ್ನು ಧ್ವಂಸಗೊಳಿಸಿದರು” ಎಂದು ಸಿಂಗ್ ಆರೋಪಿಸಿದ್ದಾರೆ.

“ನೌಝೀಲ್ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 191-2 (ಗಲಭೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆ ಸೇರಿದಂತೆ ಹಲವಾರು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅನ್ವಯವಾಗುವ ಇತರ ಸೆಕ್ಷನ್‌ಗಳಲ್ಲಿ ಬಿಎನ್ಎಸ್ 76 (ಮಹಿಳೆಯ ಮೇಲೆ ಬಟ್ಟೆ ಎಳೆಯುವ ಅಥವಾ ಬೆತ್ತಲೆಯಾಗುವಂತೆ ಒತ್ತಾಯಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಮತ್ತು 333 (ಹಾನಿ, ಹಲ್ಲೆ ಅಥವಾ ತಪ್ಪು ಸಂಯಮವನ್ನು ಉಂಟುಮಾಡಲು ಸಿದ್ಧತೆಯ ನಂತರ ಮನೆಗೆ ಅತಿಕ್ರಮಣ) ಸೇರಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು  ಮಾಹಿತಿ ನೀಡಿದ್ದಾರೆ.

ತಮಿಳುನಾಡು| ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವು, ಒಬ್ಬರ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...