Homeದಲಿತ್ ಫೈಲ್ಸ್ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ...

ಉತ್ತರ ಪ್ರದೇಶ| ದಲಿತ ವರನ ಕುದುರೆ ಸವಾರಿ ತಡೆದ ಪ್ರಬಲಜಾತಿ ಗುಂಪು; ಮದುವೆ ಮೆರವಣಿಗೆ ಮೇಲೆ ದಾಳಿ

- Advertisement -
- Advertisement -

ಉತ್ತರ ಪ್ರದೇಶದ ಮಥುರಾದಲ್ಲಿ ದಲಿತ ಸಮುದಾಯದ ಮದುವೆ ಮೆರವಣಿಗೆಯ ಮೇಲೆ ಪ್ರಬಲ ಜಾತಿ ಗುಂಪು ದಾಳಿ ನಡೆಸಿದ್ದು, ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಳಿಸಿದ್ದಾರೆ ಎಂದು ವರದಿಯಾಗಿದೆ. ಇಷ್ಟಕ್ಕೇ ಸುಮ್ಮನಾಗದ ಗುಂಪು, ‘ಮತ್ತೆ ಸವಾರಿ ಮಾಡಿದರೆ ಗುಂಡಿಕ್ಕಿ’ ಎಂದು ವರನಿಗೆ ಬೆದರಿಕೆ ಹಾಕಿದ್ದಾರೆ.

ಮಥುರಾ ಜಿಲ್ಲೆಯ ಭೂರೇಕಾ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಆಯೋಜನೆಯಾಗಿತ್ತು. ಡಿಜೆ ಜೊತೆಗೆ ಸಾಗುತ್ತಿದ್ದ ಮದುವೆ ಮೆರವಣಿಗೆ ಮೇಲೆ ಪ್ರಬಲಜಾತಿ ಪುರುಷರ ಗುಂಪೊಂದು ದಾಳಿ ನಡೆಸಿದೆ. ನಂತರ, ದಲಿತ ವರನನ್ನು ಕುದುರೆಯಿಂದ ಬಲವಂತವಾಗಿ ಕೆಳಗಿಸಿ ಬೆದರಿಕೆ ಹಾಕಿದ್ದಾರೆ. ವಿವಾಹಕ್ಕೆ ಆಗಮಿಸಿದ್ದ ಹಲವಾರು ಅತಿಥಿಗಳ ಮೇಲೆ ಹಲ್ಲೆ ನಡೆಸಿದ ಆರೋಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿಜೆ ಸಂಗೀತ ಮತ್ತು ಕುದುರೆ ಮೆರವಣಿಗೆಯಿಂದ ಕುಪಿತಗೊಂಡ ಸವರ್ಣೀಯರು, ಮೆರವಣಿಗೆ ಮುಂದುವರಿದರೆ ವರ ಮತ್ತು ಇತರ ಅತಿಥಿಗಳಿಗಳ ಮೇಲೆ ಗುಂಡು ಹಾರಿಸಲಾಗುವುದು ಎಂದು ಜೀವ ಬೆದರಿಕೆ ಹಾಕಿದ್ದಾನೆ. “ಎಫ್ಐಆರ್ ದಾಖಲಿಸಲಾಗಿದೆ, ತನಿಖೆ ನಡೆಯುತ್ತಿದೆ” ಎಂದು ಹೇಳಿದ ಡಿಎಸ್‌ಪಿ (ಮಂತ್) ಗುಂಜನ್ ಸಿಂಗ್, ವರನನ್ನು ಬಲವಂತವಾಗಿ ಕುದುರೆಯಿಂದ ಇಳಿಸಲಾಗಿದೆ ಎಂಬ ಆರೋಪವನ್ನು ನಿರಾಕರಿಸಿದರು.

ವಧುವಿನ ಚಿಕ್ಕಪ್ಪ ಪುರಣ್ ಸಿಂಗ್ ಪೊಲೀಸರಿಗೆ ನೀಡಿದ ದೂರಿನಲ್ಲಿ, ಮಥುರಾದ ನವಲಿ ನಿವಾಸಿಗಳಾದ ಕೃಷ್ಣ, ಮನೀಶ್ ಕುಮಾರ್ ಮತ್ತು ಅಂಕುರ್ ಅವರನ್ನು ಪ್ರಮುಖ ಆರೋಪಿಗಳೆಂದು ಹೆಸರಿಸಿದ್ದಾರೆ.
“ಬುಧವಾರ ಮಧ್ಯಾಹ್ನ 12.30 ರ ಸುಮಾರಿಗೆ, ಮೂವರು, 20-25 ಅಪರಿಚಿತ ವ್ಯಕ್ತಿಗಳೊಂದಿಗೆ, ಮೆರವಣಿಗೆಯನ್ನು ನಿಲ್ಲಿಸಿ ಜಾತಿ ನಿಂದನೆ ಮಾಡಿದ್ದಾರೆ. ನಮ್ಮ ಕುಟುಂಬ ಸದಸ್ಯರ ಮೇಲೆ ಕೋಲುಗಳಿಂದ ಹಲ್ಲೆ ನಡೆಸಿದರು. ನಮ್ಮ ಮುಂದೆ ಡಿಜೆ ಮತ್ತು ಕುದುರೆ ಮೆರವಣಿಗೆ ನಡೆಸುವುದಕ್ಕೆ ನಿಮಗೆ ಧೈರ್ಯ ಹೇಗೆ ಬಂತು ಎಂದು ಅವರು ನಮ್ಮನ್ನು ಕೇಳಿದರು. ಅವರು ವರನನ್ನು ಕುದುರೆ ಮೇಲಿಂದ ಎಳೆದು, ಡಿಜೆಯನ್ನು ನಿಲ್ಲಿಸಿ, ಮೆರವಣಿಗೆ ನಿಲ್ಲಿಸದಿದ್ದರೆ ನಮ್ಮನ್ನು ಕೊಲ್ಲುತ್ತೇವೆ ಎಂದು ಹೇಳಿದರು. ನಾನು 112 ಸಂಖ್ಯೆಗೆ ಕರೆ ಮಾಡಿದೆ, ಪೊಲೀಸರು ಮೆರವಣಿಗೆ ಶಾಂತಿಯುತವಾಗಿ ಮುಂದುವರಿಯುವುದನ್ನು ಖಚಿತಪಡಿಸಿಕೊಳ್ಳಲು ಬಂದರು. ನಂತರ ಪೊಲೀಸ್ ರಕ್ಷಣೆಯಲ್ಲಿ, ವಿವಾಹ ಸಮಾರಂಭ ಹಾಗೂ ಔತಣಕೂಟ ನಡೆಸಲಾಯಿತು” ಎಂದರು.

ಗುರುವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಮೋಟಾರ್ ಸೈಕಲ್‌ಗಳಲ್ಲಿ ಕೋಲುಗಳು, ಪಿಸ್ತೂಲ್‌ಗಳು ಮತ್ತು ಚಾಕುಗಳೊಂದಿಗೆ ಗುಂಪು ಮರಳಿದೆ ಎಂದು ಆರೋಪಿಸಲಾಗಿದೆ. ಅವರು ಮನೆಗೆ ನುಗ್ಗಿ ವರನ ಕುಟುಂಬದ ಹಲವಾರು ಸದಸ್ಯರ ಮೇಲೆ ಹಲ್ಲೆ ನಡೆಸಿದರು. “ಅವರು ಜಾತಿ ನಿಂದನೆ ಮಾಡಿ ಥಳಿಸಿದರು. ಅವರು ನಮ್ಮ ಬಟ್ಟೆಗಳನ್ನು ಹರಿದು ಹಾಕಿ, ಹಾಸಿಗೆಗಳು ಮತ್ತು ಮೋಟಾರ್ ಸೈಕಲ್ ಸೇರಿದಂತೆ ಮನೆಯ ವಸ್ತುಗಳನ್ನು ಧ್ವಂಸಗೊಳಿಸಿದರು” ಎಂದು ಸಿಂಗ್ ಆರೋಪಿಸಿದ್ದಾರೆ.

“ನೌಝೀಲ್ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 191-2 (ಗಲಭೆ) ಮತ್ತು ಎಸ್‌ಸಿ/ಎಸ್‌ಟಿ ಕಾಯ್ದೆ ಸೇರಿದಂತೆ ಹಲವಾರು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅನ್ವಯವಾಗುವ ಇತರ ಸೆಕ್ಷನ್‌ಗಳಲ್ಲಿ ಬಿಎನ್ಎಸ್ 76 (ಮಹಿಳೆಯ ಮೇಲೆ ಬಟ್ಟೆ ಎಳೆಯುವ ಅಥವಾ ಬೆತ್ತಲೆಯಾಗುವಂತೆ ಒತ್ತಾಯಿಸುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ) ಮತ್ತು 333 (ಹಾನಿ, ಹಲ್ಲೆ ಅಥವಾ ತಪ್ಪು ಸಂಯಮವನ್ನು ಉಂಟುಮಾಡಲು ಸಿದ್ಧತೆಯ ನಂತರ ಮನೆಗೆ ಅತಿಕ್ರಮಣ) ಸೇರಿವೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು  ಮಾಹಿತಿ ನೀಡಿದ್ದಾರೆ.

ತಮಿಳುನಾಡು| ಮಲಗುಂಡಿ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಮೂವರು ದಲಿತ ಯುವಕರು ಸಾವು, ಒಬ್ಬರ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...