Homeಅಂತರಾಷ್ಟ್ರೀಯಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

- Advertisement -
- Advertisement -

ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 800 ಜನರು ಸಾವನ್ನಪ್ಪಿದ್ದಾರೆ ಮತ್ತು 2,500 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಿಂದ ಪೂರ್ವ ಅಫ್ಘಾನಿಸ್ತಾನದ ನಂಗಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಸಮೀಪವಿರುವ ಕುನಾರ್ ಪ್ರದೇಶದಲ್ಲಿ ವ್ಯಾಪಕ ಹಾನಿಯುಂಟು ಮಾಡಿದೆ ಎಂದು ವರದಿಯಾಗಿದೆ.

ರಾತ್ರಿ 11:47ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರ ಬಿಂದು ನಂಗರ್‌ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಪೂರ್ವ-ಈಶಾನ್ಯಕ್ಕೆ 27 ಕಿಲೋಮೀಟರ್ (17 ಮೈಲುಗಳು) ದೂರದಲ್ಲಿ ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಭೂಮಿಯ ಕೇವಲ 8 ಕಿಲೋಮೀಟರ್ (5 ಮೈಲುಗಳು) ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಆಳವಿಲ್ಲದ ಭೂಕಂಪಗಳು ಹೆಚ್ಚಿನ ಹಾನಿಯನ್ನುಂಟುಮಾಡುತ್ತವೆ. ಮೊದಲ ಪ್ರಬಲ ಕಂಪನದ ನಂತರ ಹಲವಾರು ಬಾರಿ ಭೂಮಿ ಕಂಪಿಸಿದೆ ಎಂದು ವರದಿಗಳು ಹೇಳಿವೆ.

ಕುಸಿದ ಕಟ್ಟಡಗಳ ಅವಶೇಷಗಳ ಅಡಿಯಿಂದ ಗಾಯಗೊಂಡ ಜನರನ್ನು ರಕ್ಷಿಸಿ, ಅವರನ್ನು ಸ್ಟ್ರೆಚರ್‌ನಲ್ಲಿ ಮತ್ತು ಹೆಲಿಕಾಪ್ಟರ್‌ಗಳಲ್ಲಿ ರಕ್ಷಿಸುವ ಮತ್ತು ಜನರು ತಮ್ಮ ಕೈಗಳಿಂದ ಅವಶೇಷಗಳಡಿಯಿಂದ ತಮ್ಮವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿವೆ. ಇವು ಘಟನೆಯ ಭೀಕರತೆಯನ್ನು ವಿವರಿಸುತ್ತವೆ.

ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾವಿನ ಸಂಖ್ಯೆ 800ಕ್ಕೆ ಏರಿಕೆಯಾಗಿದೆ ಮತ್ತು 2,500 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕುನಾರ್ ಪ್ರಾಂತ್ಯದಲ್ಲಿ ಹೆಚ್ಚಿನ ಸಾವುನೋವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಕಟ್ಟಡಗಳು ಸಾಮಾನ್ಯವಾಗಿ ಕಡಿಮೆ ಎತ್ತರದ ನಿರ್ಮಾಣಗಳಾಗಿದ್ದು, ಹೆಚ್ಚಾಗಿ ಕಾಂಕ್ರೀಟ್ ಮತ್ತು ಇಟ್ಟಿಗೆಗಳಿಂದ ಮಾಡಲ್ಪಟ್ಟಿರುತ್ತವೆ. ಗ್ರಾಮೀಣ ಮತ್ತು ಹೊರವಲಯದ ಪ್ರದೇಶಗಳಲ್ಲಿನ ಮನೆಗಳು ಮಣ್ಣಿನ ಇಟ್ಟಿಗೆಗಳು ಮತ್ತು ಮರದಿಂದ ಮಾಡಲ್ಪಟ್ಟಿರುತ್ತವೆ. ಅವುಗಳಲ್ಲಿ ಹೆಚ್ಚಿನವು ಹಲವು ಕಳಪೆ ನಿರ್ಮಾಣದಿಂದ ಕೂಡಿವೆ ಎಂದು ವರದಿಗಳು ಹೇಳಿವೆ.

ಕುನಾರ್‌ನಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾದ ನುರ್ಗಲ್ ಜಿಲ್ಲೆಯ ನಿವಾಸಿಯೊಬ್ಬರು, ಬಹುತೇಕ ಇಡೀ ಗ್ರಾಮವೇ ನಾಶವಾಗಿದೆ ಎಂದು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಪೂರ್ವ ಅಫ್ಘಾನಿಸ್ತಾನವು ಪರ್ವತಮಯ ದುರ್ಗಮ ಪ್ರದೇಶಗಳಾಗಿವೆ. ಭೂಕಂಪದಿಂದ ಈ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ. ಅಲ್ಲಿಗೆ ರಕ್ಷಣಾ ತಂಡಗಳು ತಲುಪುದು ಕೂಡ ಸವಾಲಾಗಿದೆ.

ಅಕ್ಟೋಬರ್ 7, 2023ರಂದು ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಂತರ ಬಲವಾದ  ಕಂಪನಗಳು ಉಂಟಾಗಿದ್ದವು. ಈ ದುರಂತದಲ್ಲಿ ಕನಿಷ್ಠ 4,000 ಜನರು ಸಾವನ್ನಪ್ಪಿದ್ದರು ಎಂದು ತಾಲಿಬಾನ್ ಸರ್ಕಾರ ಅಂದಾಜಿಸಿತ್ತು.

ವಿಶ್ವಸಂಸ್ಥೆಯು ಸುಮಾರು 1,500 ಜನರ ಸಾವಿನ ಸಂಖ್ಯೆಯನ್ನು ನೀಡಿದೆ. ಇತ್ತೀಚಿನ ವರ್ಷಗಳಲ್ಲಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪ ಇದಾಗಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...