Homeಅಂತರಾಷ್ಟ್ರೀಯಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

- Advertisement -
- Advertisement -

ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 800 ಜನರು ಸಾವನ್ನಪ್ಪಿದ್ದಾರೆ ಮತ್ತು 2,500 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಿಂದ ಪೂರ್ವ ಅಫ್ಘಾನಿಸ್ತಾನದ ನಂಗಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಸಮೀಪವಿರುವ ಕುನಾರ್ ಪ್ರದೇಶದಲ್ಲಿ ವ್ಯಾಪಕ ಹಾನಿಯುಂಟು ಮಾಡಿದೆ ಎಂದು ವರದಿಯಾಗಿದೆ.

ರಾತ್ರಿ 11:47ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರ ಬಿಂದು ನಂಗರ್‌ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಪೂರ್ವ-ಈಶಾನ್ಯಕ್ಕೆ 27 ಕಿಲೋಮೀಟರ್ (17 ಮೈಲುಗಳು) ದೂರದಲ್ಲಿ ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಭೂಮಿಯ ಕೇವಲ 8 ಕಿಲೋಮೀಟರ್ (5 ಮೈಲುಗಳು) ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಆಳವಿಲ್ಲದ ಭೂಕಂಪಗಳು ಹೆಚ್ಚಿನ ಹಾನಿಯನ್ನುಂಟುಮಾಡುತ್ತವೆ. ಮೊದಲ ಪ್ರಬಲ ಕಂಪನದ ನಂತರ ಹಲವಾರು ಬಾರಿ ಭೂಮಿ ಕಂಪಿಸಿದೆ ಎಂದು ವರದಿಗಳು ಹೇಳಿವೆ.

ಕುಸಿದ ಕಟ್ಟಡಗಳ ಅವಶೇಷಗಳ ಅಡಿಯಿಂದ ಗಾಯಗೊಂಡ ಜನರನ್ನು ರಕ್ಷಿಸಿ, ಅವರನ್ನು ಸ್ಟ್ರೆಚರ್‌ನಲ್ಲಿ ಮತ್ತು ಹೆಲಿಕಾಪ್ಟರ್‌ಗಳಲ್ಲಿ ರಕ್ಷಿಸುವ ಮತ್ತು ಜನರು ತಮ್ಮ ಕೈಗಳಿಂದ ಅವಶೇಷಗಳಡಿಯಿಂದ ತಮ್ಮವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿವೆ. ಇವು ಘಟನೆಯ ಭೀಕರತೆಯನ್ನು ವಿವರಿಸುತ್ತವೆ.

ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾವಿನ ಸಂಖ್ಯೆ 800ಕ್ಕೆ ಏರಿಕೆಯಾಗಿದೆ ಮತ್ತು 2,500 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕುನಾರ್ ಪ್ರಾಂತ್ಯದಲ್ಲಿ ಹೆಚ್ಚಿನ ಸಾವುನೋವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಕಟ್ಟಡಗಳು ಸಾಮಾನ್ಯವಾಗಿ ಕಡಿಮೆ ಎತ್ತರದ ನಿರ್ಮಾಣಗಳಾಗಿದ್ದು, ಹೆಚ್ಚಾಗಿ ಕಾಂಕ್ರೀಟ್ ಮತ್ತು ಇಟ್ಟಿಗೆಗಳಿಂದ ಮಾಡಲ್ಪಟ್ಟಿರುತ್ತವೆ. ಗ್ರಾಮೀಣ ಮತ್ತು ಹೊರವಲಯದ ಪ್ರದೇಶಗಳಲ್ಲಿನ ಮನೆಗಳು ಮಣ್ಣಿನ ಇಟ್ಟಿಗೆಗಳು ಮತ್ತು ಮರದಿಂದ ಮಾಡಲ್ಪಟ್ಟಿರುತ್ತವೆ. ಅವುಗಳಲ್ಲಿ ಹೆಚ್ಚಿನವು ಹಲವು ಕಳಪೆ ನಿರ್ಮಾಣದಿಂದ ಕೂಡಿವೆ ಎಂದು ವರದಿಗಳು ಹೇಳಿವೆ.

ಕುನಾರ್‌ನಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾದ ನುರ್ಗಲ್ ಜಿಲ್ಲೆಯ ನಿವಾಸಿಯೊಬ್ಬರು, ಬಹುತೇಕ ಇಡೀ ಗ್ರಾಮವೇ ನಾಶವಾಗಿದೆ ಎಂದು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಪೂರ್ವ ಅಫ್ಘಾನಿಸ್ತಾನವು ಪರ್ವತಮಯ ದುರ್ಗಮ ಪ್ರದೇಶಗಳಾಗಿವೆ. ಭೂಕಂಪದಿಂದ ಈ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ. ಅಲ್ಲಿಗೆ ರಕ್ಷಣಾ ತಂಡಗಳು ತಲುಪುದು ಕೂಡ ಸವಾಲಾಗಿದೆ.

ಅಕ್ಟೋಬರ್ 7, 2023ರಂದು ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಂತರ ಬಲವಾದ  ಕಂಪನಗಳು ಉಂಟಾಗಿದ್ದವು. ಈ ದುರಂತದಲ್ಲಿ ಕನಿಷ್ಠ 4,000 ಜನರು ಸಾವನ್ನಪ್ಪಿದ್ದರು ಎಂದು ತಾಲಿಬಾನ್ ಸರ್ಕಾರ ಅಂದಾಜಿಸಿತ್ತು.

ವಿಶ್ವಸಂಸ್ಥೆಯು ಸುಮಾರು 1,500 ಜನರ ಸಾವಿನ ಸಂಖ್ಯೆಯನ್ನು ನೀಡಿದೆ. ಇತ್ತೀಚಿನ ವರ್ಷಗಳಲ್ಲಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪ ಇದಾಗಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...