Homeಅಂತರಾಷ್ಟ್ರೀಯಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

- Advertisement -
- Advertisement -

ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 800 ಜನರು ಸಾವನ್ನಪ್ಪಿದ್ದಾರೆ ಮತ್ತು 2,500 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಿಂದ ಪೂರ್ವ ಅಫ್ಘಾನಿಸ್ತಾನದ ನಂಗಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಸಮೀಪವಿರುವ ಕುನಾರ್ ಪ್ರದೇಶದಲ್ಲಿ ವ್ಯಾಪಕ ಹಾನಿಯುಂಟು ಮಾಡಿದೆ ಎಂದು ವರದಿಯಾಗಿದೆ.

ರಾತ್ರಿ 11:47ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರ ಬಿಂದು ನಂಗರ್‌ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಪೂರ್ವ-ಈಶಾನ್ಯಕ್ಕೆ 27 ಕಿಲೋಮೀಟರ್ (17 ಮೈಲುಗಳು) ದೂರದಲ್ಲಿ ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಭೂಮಿಯ ಕೇವಲ 8 ಕಿಲೋಮೀಟರ್ (5 ಮೈಲುಗಳು) ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಆಳವಿಲ್ಲದ ಭೂಕಂಪಗಳು ಹೆಚ್ಚಿನ ಹಾನಿಯನ್ನುಂಟುಮಾಡುತ್ತವೆ. ಮೊದಲ ಪ್ರಬಲ ಕಂಪನದ ನಂತರ ಹಲವಾರು ಬಾರಿ ಭೂಮಿ ಕಂಪಿಸಿದೆ ಎಂದು ವರದಿಗಳು ಹೇಳಿವೆ.

ಕುಸಿದ ಕಟ್ಟಡಗಳ ಅವಶೇಷಗಳ ಅಡಿಯಿಂದ ಗಾಯಗೊಂಡ ಜನರನ್ನು ರಕ್ಷಿಸಿ, ಅವರನ್ನು ಸ್ಟ್ರೆಚರ್‌ನಲ್ಲಿ ಮತ್ತು ಹೆಲಿಕಾಪ್ಟರ್‌ಗಳಲ್ಲಿ ರಕ್ಷಿಸುವ ಮತ್ತು ಜನರು ತಮ್ಮ ಕೈಗಳಿಂದ ಅವಶೇಷಗಳಡಿಯಿಂದ ತಮ್ಮವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿವೆ. ಇವು ಘಟನೆಯ ಭೀಕರತೆಯನ್ನು ವಿವರಿಸುತ್ತವೆ.

ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾವಿನ ಸಂಖ್ಯೆ 800ಕ್ಕೆ ಏರಿಕೆಯಾಗಿದೆ ಮತ್ತು 2,500 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕುನಾರ್ ಪ್ರಾಂತ್ಯದಲ್ಲಿ ಹೆಚ್ಚಿನ ಸಾವುನೋವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಕಟ್ಟಡಗಳು ಸಾಮಾನ್ಯವಾಗಿ ಕಡಿಮೆ ಎತ್ತರದ ನಿರ್ಮಾಣಗಳಾಗಿದ್ದು, ಹೆಚ್ಚಾಗಿ ಕಾಂಕ್ರೀಟ್ ಮತ್ತು ಇಟ್ಟಿಗೆಗಳಿಂದ ಮಾಡಲ್ಪಟ್ಟಿರುತ್ತವೆ. ಗ್ರಾಮೀಣ ಮತ್ತು ಹೊರವಲಯದ ಪ್ರದೇಶಗಳಲ್ಲಿನ ಮನೆಗಳು ಮಣ್ಣಿನ ಇಟ್ಟಿಗೆಗಳು ಮತ್ತು ಮರದಿಂದ ಮಾಡಲ್ಪಟ್ಟಿರುತ್ತವೆ. ಅವುಗಳಲ್ಲಿ ಹೆಚ್ಚಿನವು ಹಲವು ಕಳಪೆ ನಿರ್ಮಾಣದಿಂದ ಕೂಡಿವೆ ಎಂದು ವರದಿಗಳು ಹೇಳಿವೆ.

ಕುನಾರ್‌ನಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾದ ನುರ್ಗಲ್ ಜಿಲ್ಲೆಯ ನಿವಾಸಿಯೊಬ್ಬರು, ಬಹುತೇಕ ಇಡೀ ಗ್ರಾಮವೇ ನಾಶವಾಗಿದೆ ಎಂದು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಪೂರ್ವ ಅಫ್ಘಾನಿಸ್ತಾನವು ಪರ್ವತಮಯ ದುರ್ಗಮ ಪ್ರದೇಶಗಳಾಗಿವೆ. ಭೂಕಂಪದಿಂದ ಈ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ. ಅಲ್ಲಿಗೆ ರಕ್ಷಣಾ ತಂಡಗಳು ತಲುಪುದು ಕೂಡ ಸವಾಲಾಗಿದೆ.

ಅಕ್ಟೋಬರ್ 7, 2023ರಂದು ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಂತರ ಬಲವಾದ  ಕಂಪನಗಳು ಉಂಟಾಗಿದ್ದವು. ಈ ದುರಂತದಲ್ಲಿ ಕನಿಷ್ಠ 4,000 ಜನರು ಸಾವನ್ನಪ್ಪಿದ್ದರು ಎಂದು ತಾಲಿಬಾನ್ ಸರ್ಕಾರ ಅಂದಾಜಿಸಿತ್ತು.

ವಿಶ್ವಸಂಸ್ಥೆಯು ಸುಮಾರು 1,500 ಜನರ ಸಾವಿನ ಸಂಖ್ಯೆಯನ್ನು ನೀಡಿದೆ. ಇತ್ತೀಚಿನ ವರ್ಷಗಳಲ್ಲಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪ ಇದಾಗಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...