Homeಅಂತರಾಷ್ಟ್ರೀಯಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

ಪೂರ್ವ ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 800 ಮಂದಿ ಸಾವು, 2500 ಜನರಿಗೆ ಗಾಯ

- Advertisement -
- Advertisement -

ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಕನಿಷ್ಠ 800 ಜನರು ಸಾವನ್ನಪ್ಪಿದ್ದಾರೆ ಮತ್ತು 2,500 ಜನರು ಗಾಯಗೊಂಡಿದ್ದಾರೆ ಎಂದು ತಾಲಿಬಾನ್ ಸರ್ಕಾರದ ವಕ್ತಾರರು ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಸಂಭವಿಸಿದ 6.0 ತೀವ್ರತೆಯ ಭೂಕಂಪದಿಂದ ಪೂರ್ವ ಅಫ್ಘಾನಿಸ್ತಾನದ ನಂಗಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಸಮೀಪವಿರುವ ಕುನಾರ್ ಪ್ರದೇಶದಲ್ಲಿ ವ್ಯಾಪಕ ಹಾನಿಯುಂಟು ಮಾಡಿದೆ ಎಂದು ವರದಿಯಾಗಿದೆ.

ರಾತ್ರಿ 11:47ಕ್ಕೆ ಸಂಭವಿಸಿದ ಭೂಕಂಪದ ಕೇಂದ್ರ ಬಿಂದು ನಂಗರ್‌ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದ ಪೂರ್ವ-ಈಶಾನ್ಯಕ್ಕೆ 27 ಕಿಲೋಮೀಟರ್ (17 ಮೈಲುಗಳು) ದೂರದಲ್ಲಿ ಪತ್ತೆಯಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.

ಭೂಮಿಯ ಕೇವಲ 8 ಕಿಲೋಮೀಟರ್ (5 ಮೈಲುಗಳು) ಆಳದಲ್ಲಿ ಭೂಕಂಪದ ಕೇಂದ್ರ ಬಿಂದು ಪತ್ತೆಯಾಗಿದೆ. ಆಳವಿಲ್ಲದ ಭೂಕಂಪಗಳು ಹೆಚ್ಚಿನ ಹಾನಿಯನ್ನುಂಟುಮಾಡುತ್ತವೆ. ಮೊದಲ ಪ್ರಬಲ ಕಂಪನದ ನಂತರ ಹಲವಾರು ಬಾರಿ ಭೂಮಿ ಕಂಪಿಸಿದೆ ಎಂದು ವರದಿಗಳು ಹೇಳಿವೆ.

ಕುಸಿದ ಕಟ್ಟಡಗಳ ಅವಶೇಷಗಳ ಅಡಿಯಿಂದ ಗಾಯಗೊಂಡ ಜನರನ್ನು ರಕ್ಷಿಸಿ, ಅವರನ್ನು ಸ್ಟ್ರೆಚರ್‌ನಲ್ಲಿ ಮತ್ತು ಹೆಲಿಕಾಪ್ಟರ್‌ಗಳಲ್ಲಿ ರಕ್ಷಿಸುವ ಮತ್ತು ಜನರು ತಮ್ಮ ಕೈಗಳಿಂದ ಅವಶೇಷಗಳಡಿಯಿಂದ ತಮ್ಮವರನ್ನು ರಕ್ಷಿಸಲು ಪ್ರಯತ್ನಿಸುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಗಳಲ್ಲಿ ಹರಿದಾಡುತ್ತಿವೆ. ಇವು ಘಟನೆಯ ಭೀಕರತೆಯನ್ನು ವಿವರಿಸುತ್ತವೆ.

ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾವಿನ ಸಂಖ್ಯೆ 800ಕ್ಕೆ ಏರಿಕೆಯಾಗಿದೆ ಮತ್ತು 2,500 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಕುನಾರ್ ಪ್ರಾಂತ್ಯದಲ್ಲಿ ಹೆಚ್ಚಿನ ಸಾವುನೋವುಗಳು ಸಂಭವಿಸಿವೆ ಎಂದು ತಿಳಿಸಿದ್ದಾರೆ.

ಅಫ್ಘಾನಿಸ್ತಾನದಲ್ಲಿ ಕಟ್ಟಡಗಳು ಸಾಮಾನ್ಯವಾಗಿ ಕಡಿಮೆ ಎತ್ತರದ ನಿರ್ಮಾಣಗಳಾಗಿದ್ದು, ಹೆಚ್ಚಾಗಿ ಕಾಂಕ್ರೀಟ್ ಮತ್ತು ಇಟ್ಟಿಗೆಗಳಿಂದ ಮಾಡಲ್ಪಟ್ಟಿರುತ್ತವೆ. ಗ್ರಾಮೀಣ ಮತ್ತು ಹೊರವಲಯದ ಪ್ರದೇಶಗಳಲ್ಲಿನ ಮನೆಗಳು ಮಣ್ಣಿನ ಇಟ್ಟಿಗೆಗಳು ಮತ್ತು ಮರದಿಂದ ಮಾಡಲ್ಪಟ್ಟಿರುತ್ತವೆ. ಅವುಗಳಲ್ಲಿ ಹೆಚ್ಚಿನವು ಹಲವು ಕಳಪೆ ನಿರ್ಮಾಣದಿಂದ ಕೂಡಿವೆ ಎಂದು ವರದಿಗಳು ಹೇಳಿವೆ.

ಕುನಾರ್‌ನಲ್ಲಿ ಅತಿ ಹೆಚ್ಚು ಹಾನಿಗೊಳಗಾದ ಪ್ರದೇಶಗಳಲ್ಲಿ ಒಂದಾದ ನುರ್ಗಲ್ ಜಿಲ್ಲೆಯ ನಿವಾಸಿಯೊಬ್ಬರು, ಬಹುತೇಕ ಇಡೀ ಗ್ರಾಮವೇ ನಾಶವಾಗಿದೆ ಎಂದು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಪೂರ್ವ ಅಫ್ಘಾನಿಸ್ತಾನವು ಪರ್ವತಮಯ ದುರ್ಗಮ ಪ್ರದೇಶಗಳಾಗಿವೆ. ಭೂಕಂಪದಿಂದ ಈ ಪ್ರದೇಶಗಳ ಸಂಪರ್ಕ ಕಡಿತಗೊಂಡಿದೆ. ಅಲ್ಲಿಗೆ ರಕ್ಷಣಾ ತಂಡಗಳು ತಲುಪುದು ಕೂಡ ಸವಾಲಾಗಿದೆ.

ಅಕ್ಟೋಬರ್ 7, 2023ರಂದು ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ನಂತರ ಬಲವಾದ  ಕಂಪನಗಳು ಉಂಟಾಗಿದ್ದವು. ಈ ದುರಂತದಲ್ಲಿ ಕನಿಷ್ಠ 4,000 ಜನರು ಸಾವನ್ನಪ್ಪಿದ್ದರು ಎಂದು ತಾಲಿಬಾನ್ ಸರ್ಕಾರ ಅಂದಾಜಿಸಿತ್ತು.

ವಿಶ್ವಸಂಸ್ಥೆಯು ಸುಮಾರು 1,500 ಜನರ ಸಾವಿನ ಸಂಖ್ಯೆಯನ್ನು ನೀಡಿದೆ. ಇತ್ತೀಚಿನ ವರ್ಷಗಳಲ್ಲಿ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಅತ್ಯಂತ ಭೀಕರ ನೈಸರ್ಗಿಕ ವಿಕೋಪ ಇದಾಗಿದೆ.

ಸಾವಿನ ನಂತರ ಖುಲಾಸೆ: ಸಮಾಧಿ ಬಳಿ ಕೋರ್ಟ್ ಆದೇಶ ಓದಿದ ಸಂಬಂಧಿಕರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....