Homeಅಂತರಾಷ್ಟ್ರೀಯಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸುನಾಮಿ ಎಚ್ಚರಿಕೆ ನೀಡಿ ವಾಪಸ್ ಪಡೆದ ಸರ್ಕಾರ

- Advertisement -
- Advertisement -

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಅವೋಮೋರಿ ಪ್ರದೇಶದ ಕರಾವಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿ ಭೂಮಿಯ 50 ಕಿ.ಮೀ (31 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಆರಂಭದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿತ್ತು, ಈಗ ಅದನ್ನು ವಾಪಸ್ ಪಡೆಯಲಾಗಿದೆ. ಆದರೆ, ಸಮುದ್ರದಲ್ಲಿ ಸುಮಾರು 70 ಸೆಂ.ಮೀ (27 ಇಂಚು) ಎತ್ತರದ ಅಲೆಗಳು ಕಂಡುಬಂದಿವೆ ಎಂದು ಸುದ್ದಿ ಸಂಸ್ಥೆ ಬಿಬಿಸಿ ವರದಿ ಮಾಡಿದೆ.

ಭೂಕಂಪ ಹಿನ್ನೆಲೆ ಕೆಲವು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಸಾವಿರಾರು ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿವೆ. ಮುಂದಿನ ದಿನಗಳಲ್ಲಿ ಇನ್ನೂ ಬಲವಾದ ಭೂಕಂಪ ಸಂಭವಿಸಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಕನಿಷ್ಠ ಒಂದು ವಾರದವರೆಗೆ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಭೂಕಂಪದ ಬಳಿಕ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಜಪಾನ್ ಪ್ರಧಾನಿ ಸನೈ ತಾಕೈಚಿ, “ಕೆಲ ದಿನಗಳ ಕಾಲ ಪ್ರತಿನಿತ್ಯ ಭೂಕಂಪ ಎದುರಿಸಲು ಸಿದ್ದರಾಗಿರಿ. ಮನೆ, ಕಚೇರಿಗಳ ಪೀಠೋಪಕರಣಗಳು ಹಾನಿಯಾಗದಂತೆ ಸುರಕ್ಷಿತವಾಗಿಡಿ. ಕಂಪನದ ಅನುಭ ಆದರೆ ತಕ್ಷಣ ಕಟ್ಟಡಗಳಿಂದ ಹೊರಗೆ ಓಡಿ” ಎಂದು ಹೇಳಿದ್ದಾರೆ.

ರಾಯಿಟರ್ಸ್ ಸುದ್ದಿ ಸಂಸ್ಥೆಯ ಪ್ರಕಾರ, ಸುಮಾರು 90,000 ನಿವಾಸಿಗಳನ್ನು ಸ್ಥಳಾಂತರಿಸಲು ಸರ್ಕಾರ ಆದೇಶ ನೀಡಿದೆ. ಅವೋಮೋರಿ ಪ್ರಿಫೆಕ್ಚರ್ ಸರ್ಕಾರ ಹೇಳಿದ ಪ್ರಕಾರ, ಸುಮಾರು 2,700 ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪೂರ್ವ ಜಪಾನ್ ರೈಲ್ವೆ ಸಂಸ್ಥೆಯು ಈಶಾನ್ಯ ಕರಾವಳಿ ಭಾಗದ ಕೆಲವು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

ಜಪಾನ್ ಸರ್ಕಾರವು ಪ್ರಧಾನ ಮಂತ್ರಿಯ ಬಿಕ್ಕಟ್ಟು ನಿರ್ವಹಣಾ ಕೇಂದ್ರದಲ್ಲಿ ಒಂದು ಪ್ರತಿಕ್ರಿಯೆ ಕಚೇರಿಯನ್ನು ಸ್ಥಾಪಿಸಿದೆ ಮತ್ತು ತುರ್ತು ತಂಡವನ್ನು ಸಿದ್ದಪಡಿಸಿದೆ ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಮಿನೋರು ಕಿಹರಾ ಹೇಳಿದ್ದಾರೆ.

“ನಾವು ಹಾನಿಯನ್ನು ನಿರ್ಣಯಿಸಲು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಸೇರಿದಂತೆ ತುರ್ತು ವಿಪತ್ತು ಪ್ರತಿಕ್ರಿಯೆ ಕ್ರಮಗಳನ್ನು ಜಾರಿಗೆ ತರಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಭೂಕಂಪದಿಂದ ತನ್ನ ಹಿಗಾಶಿಡೋರಿ ಮತ್ತು ಒನಗಾವಾ ಪರಮಾಣು ವಿದ್ಯುತ್ ಸ್ಥಾವರಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಜಪಾನಿನ ವಿದ್ಯುತ್ ಕಂಪನಿ ಟೊಹೊಕು ಎಲೆಕ್ಟ್ರಿಕ್ ಪವರ್‌ ಹೇಳಿದೆ. ನಿಷ್ಕ್ರಿಯಗೊಂಡ ಫುಕುಶಿಮಾ ಅಣುವಿದ್ಯುತ್ ಕೇಂದ್ರದಲ್ಲಿಯೂ ಭೂಕಂಪದಿಂದ ಯಾವುದೇ ತೊಂದರೆ ಕಂಡುಬಂದಿಲ್ಲ ಎಂದು ವರದಿಯಾಗಿದೆ.

ಮಾರ್ಚ್ 11, 2011ರಂದು ದೇಶದ ಪೂರ್ವ ಕರಾವಳಿಯಲ್ಲಿ 9.0 ತೀವ್ರತೆಯ ಭೂಕಂಪ ಸಂಭವಿಸಿದಾಗ ಫುಕುಶಿಮಾ ಅಣುವಿದ್ಯುತ್ ಸ್ಥಾವರಕ್ಕೆ ಹಾನಿಯಾಗಿತ್ತು. ಈ ಭೂಕಂಪ ಅತ್ಯಂತ ಶಕ್ತಿಶಾಲಿಯಾಗಿತ್ತು. ಪರಿಣಾಮ ಸಮುದ್ರದಲ್ಲಿ ಎದ್ದ ಸುನಾಮಿ ಅಲೆಗಳು ಹೊನ್ಶು ದ್ವೀಪವನ್ನು ಮುಳುಗಿಸಿತ್ತು. ಇದರಲ್ಲಿ ಸುಮಾರು 18 ಸಾವಿರ ಜನರು ಸಾವನ್ನಪ್ಪಿದ್ದರು.

ಜಪಾನ್ ವಿಶ್ವದ ಅತಿ ಹೆಚ್ಚು ಭೂಕಂಪ ಪೀಡಿತ ರಾಷ್ಟ್ರಗಳಲ್ಲಿ ಒಂದಾಗಿದೆ. ಜಪಾನ್‌ ಭೂಮಂಡಲದ ರಿಂಗ್ ಆಫ್ ಫೈರ್ ಪ್ರದೇಶದಲ್ಲಿದೆ. ಇಲ್ಲಿ ವರ್ಷಕ್ಕೆ ಸುಮಾರು 1,500 ಭೂಕಂಪನದ ಅನುಭವಗಳಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಕಾರ

ಕೇರಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಎಣಿಕೆ ನಮೂನೆಗಳನ್ನು ಸಲ್ಲಿಸುವ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಪ್ರಸ್ತುತ ಗಡುವಾದ ಡಿಸೆಂಬರ್ 18ರವರೆಗೆ ವಿಷಯವನ್ನು ಮುಂದೂಡಿ, ಆ ನಂತರ ಗಡುವನ್ನು...

‘ಎಷ್ಟೇ ದೊಡ್ಡ ಸಂಸ್ಥೆಯಾದರೂ ಪ್ರಯಾಣಿಕರಿಗೆ ತೊಂದರೆ ನೀಡುವಂತಿಲ್ಲಾ’: ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದ ವಿಮಾನಯಾನ ಸಚಿವ

ಡಿಸೆಂಬರ್ ಆರಂಭದಿಂದಲೂ ಬಿಕ್ಕಟ್ಟು ಎದುರಿಸುತ್ತಿರುವ ಇಂಡಿಗೋ ಏರ್ ಲೈಲ್ಸ್ ಸಂಸ್ಥೆಗೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಎಚ್ಚರಿಕೆ ನೀಡಿದ್ದಾರೆ.  "ಇಂಡಿಗೋದಲ್ಲಿನ ಅಡಚಣೆಗಳು ಸ್ಥಿರವಾಗುತ್ತಿವೆ; ದೇಶಾದ್ಯಂತ ಎಲ್ಲಾ ಇತರ ವಿಮಾನಯಾನ ಸಂಸ್ಥೆಗಳು ಸರಾಗವಾಗಿ ಕಾರ್ಯನಿರ್ವಹಿಸುತ್ತಿವೆ....

ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು...

ಕಸಾಪ ಅಕ್ರಮ | 17 ಆರೋಪಗಳ ಪೈಕಿ 14ರ ವಿಚಾರಣೆ ಪೂರ್ಣ : ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಆರ್ಥಿಕ ಅವ್ಯವಹಾರಕ್ಕೆ ಸಂಬಂಧಿಸಿದ 17 ಆರೋಪಗಳ ಪೈಕಿ 14ರ ವಿಚಾರಣೆ ಮುಕ್ತಾಯಗೊಂಡಿದ್ದು, ಉಳಿದ 3 ಅಂಶಗಳ ವಿಚಾರಣೆಯನ್ನು 10 ದಿನಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ರಾಜ್ಯ...

ವೇತನ ಸಹಿತ ಮುಟ್ಟಿನ ರಜೆ : ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು, ಐಟಿ ಮತ್ತು ಇತರ ಖಾಸಗಿ ಕೈಗಾರಿಕೆಗಳು ಸೇರಿ ಎಲ್ಲಾ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ಪ್ರತಿ ತಿಂಗಳು ಒಂದು ದಿನದ ವೇತನ ಸಹಿತ ಮುಟ್ಟಿನ ರಜೆ...

‘ಸಿಎಂ ಹುದ್ದೆಗೆ 500 ಕೋಟಿ’ ಹೇಳಿಕೆ : ನವಜೋತ್ ಕೌರ್ ಸಿಧು ಕಾಂಗ್ರೆಸ್‌ನಿಂದ ಅಮಾನತು

"500 ಕೋಟಿ ರೂಪಾಯಿಯ ಸೂಟ್‌ಕೇಸ್ ನೀಡುವ ವ್ಯಕ್ತಿ ಮುಖ್ಯಮಂತ್ರಿಯಾಗುತ್ತಾರೆ" ಎಂದು ಹೇಳಿಕೆ ನೀಡಿದ ಎರಡು ದಿನಗಳ ನಂತರ, ಮಾಜಿ ಕ್ರಿಕೆಟಿಗ ಮತ್ತು ಪಕ್ಷದ ನಾಯಕ ನವಜೋತ್ ಸಿಂಗ್ ಸಿಧು ಅವರ ಪತ್ನಿ ನವಜೋತ್...

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸೋಮವಾರ ಲೋಕಸಭೆಯಲ್ಲಿ 'ವಂದೇ ಮಾತರಂನ 150 ವರ್ಷಗಳು' ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ...

ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇ.30 ಮಹಿಳಾ ಮೀಸಲಾತಿಗೆ ಸುಪ್ರೀಂ ಕೋರ್ಟ್ ಆದೇಶ

ಮಹತ್ವದ ಆದೇಶವೊಂದರಲ್ಲಿ, ಚುನಾವಣೆಗಳು ಇನ್ನೂ ಘೋಷಣೆಯಾಗದ ರಾಜ್ಯ ಬಾರ್ ಕೌನ್ಸಿಲ್‌ಗಳಲ್ಲಿ ಶೇಕಡ 30ರಷ್ಟು ಸ್ಥಾನಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ಸೋಮವಾರ (ಡಿಸೆಂಬರ್ 8) ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ. ಪ್ರಸಕ್ತ ವರ್ಷಕ್ಕೆ, ಶೇಕಡ 20ರಷ್ಟು ಮಹಿಳಾ...

ಮಹಾರಾಷ್ಟ್ರ| ಶಿವಾಜಿಯ ಪಾದ ಮುಟ್ಟಿ ಕ್ಷಮೆಯಾಚಿಸುವಂತೆ ಒತ್ತಾಯ; ಮುಸ್ಲಿಂ ವಿದ್ಯಾರ್ಥಿಗಳಿಗೆ ಹಿಂದುತ್ವ ಗುಂಪಿನಿಂದ ಕಿರುಕುಳ

ವಿದ್ಯಾರ್ಥಿಗಳು, ಆಡಳಿತ ಮಂಡಳಿ ಅನುಮತಿಯೊಂದಿಗೆ ಕ್ಯಾಂಪಸ್‌ನಲ್ಲಿ ಶುಕ್ರವಾರದ ಪ್ರಾರ್ಥನೆ ಮಾಡಿದ್ದಾರೆ ಎಂದು ತಿಳಿದ ನಂತರ ಅವರಿಗೆ ಕಿರುಕುಳ ನೀಡಿರುವ ಬಲಪಂಥೀಯ ಕಾರ್ಯಕರ್ತರ ಗುಂಪು, ಮುಸ್ಲಿಂ ವಿದ್ಯಾರ್ಥಿಗಳ ಗುಂಪನ್ನು ಕ್ಷಮೆಯಾಚಿಸಲು ಹಾಗೂ ಛತ್ರಪತಿ ಶಿವಾಜಿ...

ಅನ್ನಭಾಗ್ಯ ಅಕ್ಕಿ ಅಕ್ರಮ ಸಂಗ್ರಹ, ಮಾರಾಟ ; 570 ಜನರ ಬಂಧನ : ಸಚಿವ ಕೆ.ಎಚ್‌ ಮುನಿಯಪ್ಪ

ಅನ್ನಭಾಗ್ಯ ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟ ಪ್ರಕರಣಗಳಿಗೆ ಸಂಬಂಧಿಸಿದಂತೆ 461 ಎಫ್‌ಐಆರ್‌ಗಳನ್ನು ದಾಖಲಿಸಿ, 570 ಜನರನ್ನು ಬಂಧಿಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್‌ ಮುನಿಯಪ್ಪ...