Homeಅಂತರಾಷ್ಟ್ರೀಯಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಕನಿಷ್ಠ 30 ಜನರಿಗೆ ಗಾಯ, ಸಾವಿರಾರು ಜನರ ಸ್ಥಳಾಂತರ

ಸುನಾಮಿ ಎಚ್ಚರಿಕೆ ನೀಡಿ ವಾಪಸ್ ಪಡೆದ ಸರ್ಕಾರ

- Advertisement -
- Advertisement -

ಸೋಮವಾರ (ಡಿಸೆಂಬರ್ 8) ರಾತ್ರಿ (ಭಾರತೀಯ ಕಾಲಮಾನ ಸಂಜೆ 7.45) ಈಶಾನ್ಯ ಜಪಾನ್‌ನಲ್ಲಿ ಸಂಭವಿಸಿದ 7.5 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ 30 ಜನರು ಗಾಯಗೊಂಡಿದ್ದು, ಸಾವಿರಾರು ಜನರು ತಮ್ಮ ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳಿದ್ದಾರೆ ಎಂದು ವರದಿಯಾಗಿದೆ.

ಅವೋಮೋರಿ ಪ್ರದೇಶದ ಕರಾವಳಿಯಿಂದ ಸುಮಾರು 80 ಕಿ.ಮೀ ದೂರದಲ್ಲಿ ಭೂಮಿಯ 50 ಕಿ.ಮೀ (31 ಮೈಲಿ) ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಜಪಾನ್ ಹವಾಮಾನ ಸಂಸ್ಥೆ ತಿಳಿಸಿದೆ. ಆರಂಭದಲ್ಲಿ ಸುನಾಮಿ ಎಚ್ಚರಿಕೆ ನೀಡಲಾಗಿತ್ತು, ಈಗ ಅದನ್ನು ವಾಪಸ್ ಪಡೆಯಲಾಗಿದೆ. ಆದರೆ, ಸಮುದ್ರದಲ್ಲಿ ಸುಮಾರು 70 ಸೆಂ.ಮೀ (27 ಇಂಚು) ಎತ್ತರದ ಅಲೆಗಳು ಕಂಡುಬಂದಿವೆ ಎಂದು ಸುದ್ದಿ ಸಂಸ್ಥೆ ಬಿಬಿಸಿ ವರದಿ ಮಾಡಿದೆ.

ಭೂಕಂಪ ಹಿನ್ನೆಲೆ ಕೆಲವು ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದ್ದು, ಸಾವಿರಾರು ಮನೆಗಳ ವಿದ್ಯುತ್ ಸಂಪರ್ಕ ಕಡಿತಗೊಂಡಿವೆ. ಮುಂದಿನ ದಿನಗಳಲ್ಲಿ ಇನ್ನೂ ಬಲವಾದ ಭೂಕಂಪ ಸಂಭವಿಸಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಕನಿಷ್ಠ ಒಂದು ವಾರದವರೆಗೆ ಸಾರ್ವಜನಿಕರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಭೂಕಂಪದ ಬಳಿಕ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಜಪಾನ್ ಪ್ರಧಾನಿ ಸನೈ ತಾಕೈಚಿ, “ಕೆಲ ದಿನಗಳ ಕಾಲ ಪ್ರತಿನಿತ್ಯ ಭೂಕಂಪ ಎದುರಿಸಲು ಸಿದ್ದರಾಗಿರಿ. ಮನೆ, ಕಚೇರಿಗಳ ಪೀಠೋಪಕರಣಗಳು ಹಾನಿಯಾಗದಂತೆ ಸುರಕ್ಷಿತವಾಗಿಡಿ. ಕಂಪನದ ಅನುಭ ಆದರೆ ತಕ್ಷಣ ಕಟ್ಟಡಗಳಿಂದ ಹೊರಗೆ ಓಡಿ” ಎಂದು ಹೇಳಿದ್ದಾರೆ.

ರಾಯಿಟರ್ಸ್ ಸುದ್ದಿ ಸಂಸ್ಥೆಯ ಪ್ರಕಾರ, ಸುಮಾರು 90,000 ನಿವಾಸಿಗಳನ್ನು ಸ್ಥಳಾಂತರಿಸಲು ಸರ್ಕಾರ ಆದೇಶ ನೀಡಿದೆ. ಅವೋಮೋರಿ ಪ್ರಿಫೆಕ್ಚರ್ ಸರ್ಕಾರ ಹೇಳಿದ ಪ್ರಕಾರ, ಸುಮಾರು 2,700 ಮನೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪೂರ್ವ ಜಪಾನ್ ರೈಲ್ವೆ ಸಂಸ್ಥೆಯು ಈಶಾನ್ಯ ಕರಾವಳಿ ಭಾಗದ ಕೆಲವು ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸಿದೆ.

ಜಪಾನ್ ಸರ್ಕಾರವು ಪ್ರಧಾನ ಮಂತ್ರಿಯ ಬಿಕ್ಕಟ್ಟು ನಿರ್ವಹಣಾ ಕೇಂದ್ರದಲ್ಲಿ ಒಂದು ಪ್ರತಿಕ್ರಿಯೆ ಕಚೇರಿಯನ್ನು ಸ್ಥಾಪಿಸಿದೆ ಮತ್ತು ತುರ್ತು ತಂಡವನ್ನು ಸಿದ್ದಪಡಿಸಿದೆ ಎಂದು ಮುಖ್ಯ ಕ್ಯಾಬಿನೆಟ್ ಕಾರ್ಯದರ್ಶಿ ಮಿನೋರು ಕಿಹರಾ ಹೇಳಿದ್ದಾರೆ.

“ನಾವು ಹಾನಿಯನ್ನು ನಿರ್ಣಯಿಸಲು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಸೇರಿದಂತೆ ತುರ್ತು ವಿಪತ್ತು ಪ್ರತಿಕ್ರಿಯೆ ಕ್ರಮಗಳನ್ನು ಜಾರಿಗೆ ತರಲು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಭೂಕಂಪದಿಂದ ತನ್ನ ಹಿಗಾಶಿಡೋರಿ ಮತ್ತು ಒನಗಾವಾ ಪರಮಾಣು ವಿದ್ಯುತ್ ಸ್ಥಾವರಗಳ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದು ಜಪಾನಿನ ವಿದ್ಯುತ್ ಕಂಪನಿ ಟೊಹೊಕು ಎಲೆಕ್ಟ್ರಿಕ್ ಪವರ್‌ ಹೇಳಿದೆ. ನಿಷ್ಕ್ರಿಯಗೊಂಡ ಫುಕುಶಿಮಾ ಅಣುವಿದ್ಯುತ್ ಕೇಂದ್ರದಲ್ಲಿಯೂ ಭೂಕಂಪದಿಂದ ಯಾವುದೇ ತೊಂದರೆ ಕಂಡುಬಂದಿಲ್ಲ ಎಂದು ವರದಿಯಾಗಿದೆ.

ಮಾರ್ಚ್ 11, 2011ರಂದು ದೇಶದ ಪೂರ್ವ ಕರಾವಳಿಯಲ್ಲಿ 9.0 ತೀವ್ರತೆಯ ಭೂಕಂಪ ಸಂಭವಿಸಿದಾಗ ಫುಕುಶಿಮಾ ಅಣುವಿದ್ಯುತ್ ಸ್ಥಾವರಕ್ಕೆ ಹಾನಿಯಾಗಿತ್ತು. ಈ ಭೂಕಂಪ ಅತ್ಯಂತ ಶಕ್ತಿಶಾಲಿಯಾಗಿತ್ತು. ಪರಿಣಾಮ ಸಮುದ್ರದಲ್ಲಿ ಎದ್ದ ಸುನಾಮಿ ಅಲೆಗಳು ಹೊನ್ಶು ದ್ವೀಪವನ್ನು ಮುಳುಗಿಸಿತ್ತು. ಇದರಲ್ಲಿ ಸುಮಾರು 18 ಸಾವಿರ ಜನರು ಸಾವನ್ನಪ್ಪಿದ್ದರು.

ಜಪಾನ್ ವಿಶ್ವದ ಅತಿ ಹೆಚ್ಚು ಭೂಕಂಪ ಪೀಡಿತ ರಾಷ್ಟ್ರಗಳಲ್ಲಿ ಒಂದಾಗಿದೆ. ಜಪಾನ್‌ ಭೂಮಂಡಲದ ರಿಂಗ್ ಆಫ್ ಫೈರ್ ಪ್ರದೇಶದಲ್ಲಿದೆ. ಇಲ್ಲಿ ವರ್ಷಕ್ಕೆ ಸುಮಾರು 1,500 ಭೂಕಂಪನದ ಅನುಭವಗಳಾಗುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...