Homeಅಂತರಾಷ್ಟ್ರೀಯಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 500ಕ್ಕೂ ಹೆಚ್ಚು ಸಾವು; ವರದಿ

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 500ಕ್ಕೂ ಹೆಚ್ಚು ಸಾವು; ವರದಿ

- Advertisement -
- Advertisement -

ಪೂರ್ವ ಅಫ್ಘಾನಿಸ್ತಾನದಲ್ಲಿ ಸೋಮವಾರ (ಸೆ.1) ಸಂಭವಿಸಿದ ಭೂಕಂಪದಲ್ಲಿ ಸುಮಾರು 500 ಜನರು ಸಾವನ್ನಪ್ಪಿದ್ದಾರೆ ಮತ್ತು 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಸರ್ಕಾರಿ ಪ್ರಸಾರಕ ರೇಡಿಯೋ ಟೆಲಿವಿಷನ್ ಅಫ್ಘಾನಿಸ್ತಾನ್ (ಆರ್‌ಟಿಎ) ಮೂಲಗಳನ್ನು ಉಲ್ಲೇಖಿಸಿ livemint.com ವರದಿ ಮಾಡಿದೆ.

ಕಾಬೂಲ್‌ನಲ್ಲಿರುವ ತಾಲಿಬಾನ್ ನೇತೃತ್ವದ ಆರೋಗ್ಯ ಅಧಿಕಾರಿಗಳು ದೇಶದ ದೂರದ ಪ್ರದೇಶಗಳನ್ನು ತಲುಪಲು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ತಿಳಿದುಕೊಂಡು ಸಾವು-ನೋವು ಮತ್ತು ಆಸ್ತಿ-ಪಾಸ್ತಿ ಹಾನಿಯ ಕುರಿತು ಅಧಿಕೃತ ಮಾಹಿತಿಯನ್ನು ನೀಡುತ್ತೇವೆ ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಬಿಬಿಸಿ ಸುದ್ದಿ ಸಂಸ್ಥೆ 600 ಜನರು ಸಾವಿಗೀಡಾಗಿದ್ದಾರೆ ಎಂದು ವರದಿ ಮಾಡಿದೆ. ಇನ್ನೂ ಕೆಲ ಮಾಧ್ಯಮಗಳು 250ರಿಂದ 300 ಜನರು ಅಸುನೀಗಿದ್ದಾಗಿ ಹೇಳಿದೆ.

ಭೂಕಂಪದಿಂದ ಕುನಾರ್ ಪ್ರಾಂತ್ಯದಲ್ಲಿ ಮೂರು ಗ್ರಾಮಗಳು ನೆಲಸಮವಾಗಿವೆ. ಕುನಾರ್‌ನ ನುರ್ಗಲ್, ಚಾವ್ಕೇ ಮತ್ತು ವಾಟಪುರ್ ಜಿಲ್ಲೆಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ಅಫ್ಘಾನಿಸ್ತಾನದ ಸುದ್ದಿ ಸಂಸ್ಥೆ ಬಖ್ತರ್ ವರದಿ ಮಾಡಿದೆ.

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರದೇಶದ ಗಡಿಗೆ ರಕ್ಷಣಾ ತಂಡಗಳು ಧಾವಿಸಿವೆ. ಅಲ್ಲಿ ಭೂಮಿಯ 10 ಕಿಮೀ (6 ಮೈಲಿ) ಆಳದಲ್ಲಿ ಸಂಭವಿಸಿದ ಮಧ್ಯರಾತ್ರಿಯ ಭೂಕಂಪದಿಂದ ಮಣ್ಣು ಮತ್ತು ಕಲ್ಲಿನ ಮನೆಗಳು ನೆಲಸಮಗೊಂಡಿವೆ ಎಂದು ವರದಿ ಹೇಳಿದೆ.

ಭೂಕಂಪದಿಂದ ದೇಶದ ಪೂರ್ವ ಪ್ರಾಂತ್ಯಗಳಲ್ಲಿ ಜೀವ ಮತ್ತು ಆಸ್ತಿಪಾಸ್ತಿ ಹಾನಿಯಾಗಿದ್ದು, ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಎಂದು ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಜಲಾಲಾಬಾದ್‌ನ ಪೂರ್ವ ಈಶಾನ್ಯಕ್ಕೆ ಸುಮಾರು 27 ಕಿಲೋಮೀಟರ್ (17 ಮೈಲು) ದೂರದಲ್ಲಿ ಮಧ್ಯರಾತ್ರಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ.

ಕಾಬೂಲ್ ಮತ್ತು ನೆರೆಯ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಸುಮಾರು 370 ಕಿಲೋಮೀಟರ್ (230 ಮೈಲು) ದೂರದಲ್ಲಿ ಹಲವಾರು ಸೆಕೆಂಡುಗಳ ಕಾಲ ಕಂಪನದ ಅನುಭವವಾಗಿದೆ ಎಂದು ಎಎಫ್‌ಪಿ ವರದಿ ತಿಳಿಸಿದೆ.

ಮೊದಲ ಭೂಕಂಪದ ನಂತರ, ಆ ಪ್ರದೇಶದಲ್ಲಿ 30 ನಿಮಿಷಗಳ ಅವಧಿಯಲ್ಲಿ ಮೂರು ಅಥವಾ ನಾಲ್ಕು  ಕಂಪನಗಳು ಸಂಭವಿಸಿವೆ. ಅವುಗಳ ತೀವ್ರತೆ 4 ರಿಂದ 5 ರವರೆಗೆ ಇತ್ತು ಎಂದು ವರದಿ ಹೇಳಿದೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಮಿಯ ಎಂಟು ಕಿಲೋಮೀಟರ್ ಆಳದಲ್ಲಿ ಸಂಭವಿಸಿದ ಭೂಕಂಪದ ಕೇಂದ್ರಬಿಂದು ನಂಗರ್ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದಿಂದ 27 ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ.

ಅಫ್ಘಾನಿಸ್ತಾನವು ಆಗಾಗ್ಗೆ ಭೂಕಂಪಗಳಿಗೆ ತುತ್ತಾಗುತ್ತಿದೆ, ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ, ಯುರೇಷಿಯನ್ ಮತ್ತು ಇಂಡಿಯನ್ ಟೆಕ್ಟೋನಿಕ್ ಪ್ಲೇಟ್‌ಗಳ ಜಂಕ್ಷನ್ ಬಳಿ ಭೂಮಿ ಕಂಪಿಸುತ್ತಿವೆ.

ನಂಗರ್‌ಹಾರ್ ಪ್ರಾಂತ್ಯವು ಶುಕ್ರವಾರದಿಂದ ಶನಿವಾರದವರೆಗೆ ರಾತ್ರಿಯಿಡೀ ಪ್ರವಾಹಕ್ಕೆ ತುತ್ತಾಗಿದ್ದು, ಐದು ಜನರು ಸಾವನ್ನಪ್ಪಿದ್ದಾರೆ. ಕೃಷಿ ಮತ್ತು ಆಸ್ತಿಪಾಸ್ತಿ ನಾಶವಾಗಿದೆ ಎಂದು ಪ್ರಾಂತೀಯ ಅಧಿಕಾರಿಗಳು ತಿಳಿಸಿದ್ದಾರೆ.

‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...