Homeಅಂತರಾಷ್ಟ್ರೀಯಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 500ಕ್ಕೂ ಹೆಚ್ಚು ಸಾವು; ವರದಿ

ಅಫ್ಘಾನಿಸ್ತಾನದಲ್ಲಿ ಪ್ರಬಲ ಭೂಕಂಪ: 500ಕ್ಕೂ ಹೆಚ್ಚು ಸಾವು; ವರದಿ

- Advertisement -
- Advertisement -

ಪೂರ್ವ ಅಫ್ಘಾನಿಸ್ತಾನದಲ್ಲಿ ಸೋಮವಾರ (ಸೆ.1) ಸಂಭವಿಸಿದ ಭೂಕಂಪದಲ್ಲಿ ಸುಮಾರು 500 ಜನರು ಸಾವನ್ನಪ್ಪಿದ್ದಾರೆ ಮತ್ತು 1000ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಸರ್ಕಾರಿ ಪ್ರಸಾರಕ ರೇಡಿಯೋ ಟೆಲಿವಿಷನ್ ಅಫ್ಘಾನಿಸ್ತಾನ್ (ಆರ್‌ಟಿಎ) ಮೂಲಗಳನ್ನು ಉಲ್ಲೇಖಿಸಿ livemint.com ವರದಿ ಮಾಡಿದೆ.

ಕಾಬೂಲ್‌ನಲ್ಲಿರುವ ತಾಲಿಬಾನ್ ನೇತೃತ್ವದ ಆರೋಗ್ಯ ಅಧಿಕಾರಿಗಳು ದೇಶದ ದೂರದ ಪ್ರದೇಶಗಳನ್ನು ತಲುಪಲು ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಪರಿಸ್ಥಿತಿ ತಿಳಿದುಕೊಂಡು ಸಾವು-ನೋವು ಮತ್ತು ಆಸ್ತಿ-ಪಾಸ್ತಿ ಹಾನಿಯ ಕುರಿತು ಅಧಿಕೃತ ಮಾಹಿತಿಯನ್ನು ನೀಡುತ್ತೇವೆ ಎಂಬುವುದಾಗಿ ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಬಿಬಿಸಿ ಸುದ್ದಿ ಸಂಸ್ಥೆ 600 ಜನರು ಸಾವಿಗೀಡಾಗಿದ್ದಾರೆ ಎಂದು ವರದಿ ಮಾಡಿದೆ. ಇನ್ನೂ ಕೆಲ ಮಾಧ್ಯಮಗಳು 250ರಿಂದ 300 ಜನರು ಅಸುನೀಗಿದ್ದಾಗಿ ಹೇಳಿದೆ.

ಭೂಕಂಪದಿಂದ ಕುನಾರ್ ಪ್ರಾಂತ್ಯದಲ್ಲಿ ಮೂರು ಗ್ರಾಮಗಳು ನೆಲಸಮವಾಗಿವೆ. ಕುನಾರ್‌ನ ನುರ್ಗಲ್, ಚಾವ್ಕೇ ಮತ್ತು ವಾಟಪುರ್ ಜಿಲ್ಲೆಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ಅಫ್ಘಾನಿಸ್ತಾನದ ಸುದ್ದಿ ಸಂಸ್ಥೆ ಬಖ್ತರ್ ವರದಿ ಮಾಡಿದೆ.

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾ ಪ್ರದೇಶದ ಗಡಿಗೆ ರಕ್ಷಣಾ ತಂಡಗಳು ಧಾವಿಸಿವೆ. ಅಲ್ಲಿ ಭೂಮಿಯ 10 ಕಿಮೀ (6 ಮೈಲಿ) ಆಳದಲ್ಲಿ ಸಂಭವಿಸಿದ ಮಧ್ಯರಾತ್ರಿಯ ಭೂಕಂಪದಿಂದ ಮಣ್ಣು ಮತ್ತು ಕಲ್ಲಿನ ಮನೆಗಳು ನೆಲಸಮಗೊಂಡಿವೆ ಎಂದು ವರದಿ ಹೇಳಿದೆ.

ಭೂಕಂಪದಿಂದ ದೇಶದ ಪೂರ್ವ ಪ್ರಾಂತ್ಯಗಳಲ್ಲಿ ಜೀವ ಮತ್ತು ಆಸ್ತಿಪಾಸ್ತಿ ಹಾನಿಯಾಗಿದ್ದು, ರಕ್ಷಣಾ ಕಾರ್ಯಗಳು ನಡೆಯುತ್ತಿವೆ ಎಂದು ತಾಲಿಬಾನ್ ಸರ್ಕಾರದ ವಕ್ತಾರ ಜಬಿಹುಲ್ಲಾ ಮುಜಾಹಿದ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

ಅಫ್ಘಾನಿಸ್ತಾನದ ಜಲಾಲಾಬಾದ್‌ನ ಪೂರ್ವ ಈಶಾನ್ಯಕ್ಕೆ ಸುಮಾರು 27 ಕಿಲೋಮೀಟರ್ (17 ಮೈಲು) ದೂರದಲ್ಲಿ ಮಧ್ಯರಾತ್ರಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ವರದಿ ಮಾಡಿದೆ.

ಕಾಬೂಲ್ ಮತ್ತು ನೆರೆಯ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನಲ್ಲಿ ಸುಮಾರು 370 ಕಿಲೋಮೀಟರ್ (230 ಮೈಲು) ದೂರದಲ್ಲಿ ಹಲವಾರು ಸೆಕೆಂಡುಗಳ ಕಾಲ ಕಂಪನದ ಅನುಭವವಾಗಿದೆ ಎಂದು ಎಎಫ್‌ಪಿ ವರದಿ ತಿಳಿಸಿದೆ.

ಮೊದಲ ಭೂಕಂಪದ ನಂತರ, ಆ ಪ್ರದೇಶದಲ್ಲಿ 30 ನಿಮಿಷಗಳ ಅವಧಿಯಲ್ಲಿ ಮೂರು ಅಥವಾ ನಾಲ್ಕು  ಕಂಪನಗಳು ಸಂಭವಿಸಿವೆ. ಅವುಗಳ ತೀವ್ರತೆ 4 ರಿಂದ 5 ರವರೆಗೆ ಇತ್ತು ಎಂದು ವರದಿ ಹೇಳಿದೆ.

ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆಯ ಪ್ರಕಾರ, ಭೂಮಿಯ ಎಂಟು ಕಿಲೋಮೀಟರ್ ಆಳದಲ್ಲಿ ಸಂಭವಿಸಿದ ಭೂಕಂಪದ ಕೇಂದ್ರಬಿಂದು ನಂಗರ್ಹಾರ್ ಪ್ರಾಂತ್ಯದ ಜಲಾಲಾಬಾದ್ ನಗರದಿಂದ 27 ಕಿಲೋಮೀಟರ್ ದೂರದಲ್ಲಿ ಪತ್ತೆಯಾಗಿದೆ.

ಅಫ್ಘಾನಿಸ್ತಾನವು ಆಗಾಗ್ಗೆ ಭೂಕಂಪಗಳಿಗೆ ತುತ್ತಾಗುತ್ತಿದೆ, ವಿಶೇಷವಾಗಿ ಹಿಂದೂ ಕುಶ್ ಪರ್ವತ ಶ್ರೇಣಿಯಲ್ಲಿ, ಯುರೇಷಿಯನ್ ಮತ್ತು ಇಂಡಿಯನ್ ಟೆಕ್ಟೋನಿಕ್ ಪ್ಲೇಟ್‌ಗಳ ಜಂಕ್ಷನ್ ಬಳಿ ಭೂಮಿ ಕಂಪಿಸುತ್ತಿವೆ.

ನಂಗರ್‌ಹಾರ್ ಪ್ರಾಂತ್ಯವು ಶುಕ್ರವಾರದಿಂದ ಶನಿವಾರದವರೆಗೆ ರಾತ್ರಿಯಿಡೀ ಪ್ರವಾಹಕ್ಕೆ ತುತ್ತಾಗಿದ್ದು, ಐದು ಜನರು ಸಾವನ್ನಪ್ಪಿದ್ದಾರೆ. ಕೃಷಿ ಮತ್ತು ಆಸ್ತಿಪಾಸ್ತಿ ನಾಶವಾಗಿದೆ ಎಂದು ಪ್ರಾಂತೀಯ ಅಧಿಕಾರಿಗಳು ತಿಳಿಸಿದ್ದಾರೆ.

‘ಭಾರತೀಯರ ವೆಚ್ಚದಲ್ಲಿ ‘ಬ್ರಾಹ್ಮಣರು’ ಲಾಭ ಗಳಿಸುತ್ತಿದ್ದಾರೆ’: ಶ್ವೇತಭವನ ಸಲಹೆಗಾರ ನವರೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...