Homeಅಂತರಾಷ್ಟ್ರೀಯಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

- Advertisement -
- Advertisement -

ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆಯ ವಿವಾದದ ಮಧ್ಯೆ, ಚೀನಾದ ಸರ್ಕಾರ-ಸಂಬಂಧಿತ ಹ್ಯಾಕರ್‌ಗಳ ಗುಂಪು ಮಾಲ್‌ವೇರ್ ಮೂಲಕ ಭಾರತದ ನಿರ್ಣಾಯಕ ಪವರ್ ಗ್ರಿಡ್ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಅಮೆರಿಕದ ಕಂಪನಿಯೊಂದು ತನ್ನ ಇತ್ತೀಚಿನ ಅಧ್ಯಯನದಲ್ಲಿ ಹೇಳಿಕೊಂಡಿದ್ದು, ಕಳೆದ ವರ್ಷ ಮುಂಬೈನಲ್ಲಿ ಭಾರಿ ವಿದ್ಯುತ್ ಕಡಿತ ಉಂಟಾಗಿದ್ದಕ್ಕೆ ಈ ಆನ್‌ಲೈನ್ ಒಳನುಗ್ಗುವಿಕೆ ಕಾರಣವಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾಸಚೂಸೆಟ್ಸ್ ಮೂಲದ ರೆಕಾರ್ಡೆಡ್ ಫ್ಯೂಚರ್, ವಿವಿಧ ದೇಶ/ರಾಜ್ಯಗಳ ಅಂತರ್ಜಾಲದ ಬಳಕೆಯನ್ನು ಅಧ್ಯಯನ ಮಾಡುತ್ತದೆ. ಅದು ತನ್ನ ಇತ್ತೀಚಿನ ವರದಿಯಲ್ಲಿ ಚೀನಾ-ಸಂಬಂಧಿತ ಬೆದರಿಕೆ ಚಟುವಟಿಕೆ ಗುಂಪು ರೆಡ್‌ಇಕೋ ಭಾರತೀಯ ವಿದ್ಯುತ್ ವಲಯವನ್ನು ಗುರಿಯಾಗಿಸಿಕೊಂಡು ನಡೆಸಿದ ಅಭಿಯಾನವನ್ನು ವಿವರಿಸಿದೆ.

ದೊಡ್ಡ-ಪ್ರಮಾಣದ ಸ್ವಯಂಚಾಲಿತ ನೆಟ್‌ವರ್ಕ್ ಸಂಚಾರ ವಿಶ್ಲೇಷಣೆ ಮತ್ತು ತಜ್ಞರ ವಿಶ್ಲೇಷಣೆಯ ಸಂಯೋಜನೆಯ ಮೂಲಕ ಚಟುವಟಿಕೆಯನ್ನು ಗುರುತಿಸಲಾಗಿದೆ.

ಅಕ್ಟೋಬರ್ 12 ರಂದು, ಮುಂಬೈನಲ್ಲಿ ಗ್ರಿಡ್ ವೈಫಲ್ಯದಿಂದಾಗಿ ಭಾರಿ ವಿದ್ಯುತ್ ಕಡಿತವಾಗಿತ್ತು. ಹಳಿಗಳಲ್ಲಿ ರೈಲುಗಳನ್ನು ನಿಲ್ಲಿಸುವುದು, ಕೊವಿಡ್ -19 ಸಾಂಕ್ರಾಮಿಕದ ಮಧ್ಯೆ ಮನೆಯಿಂದ ಕೆಲಸ ಮಾಡುವವರಿಗೆ ಅಡ್ಡಿಯುಂಟು ಮಾಡುವುದು ಮತ್ತು ಬಳಲುತ್ತಿದ್ದ ಆರ್ಥಿಕ ಚಟುವಟಿಕೆಯನ್ನು ತೀವ್ರವಾಗಿ ಮುಗ್ಗರಿಸುವಂತೆ ಮಾಡುವುದು ಆನ್‌ಲೈನ್ ದಾಳಿಯ ಗುರಿಯಾಗಿತ್ತು ಎನ್ನಲಾಗಿದೆ.

ಅಂದು ಅಗತ್ಯ ಸೇವೆಗಳಿಗಾಗಿ ವಿದ್ಯುತ್ ಸರಬರಾಜು ಪುನರಾರಂಭಗೊಳ್ಳಲು ಎರಡು ಗಂಟೆ ಬೇಕಾಯಿತು, ಈ ಘಟನೆಯ ತನಿಖೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶಿಸಿದ್ದರು.

ತನ್ನ ವರದಿಯಲ್ಲಿ, ರೆಕಾರ್ಡೆಡ್ ಫ್ಯೂಚರ್ ಕಂಪನಿಯು, ಶಂಕಿತ ಒಳನುಗ್ಗುವಿಕೆಗಳನ್ನು ಪ್ರಕಟಿಸುವ ಮೊದಲು, ಪರಿಹಾರ ವ್ಯವಸ್ಥೆಯನ್ನು ಬೆಂಬಲಿಸಲು ಸೂಕ್ತ ಭಾರತೀಯ ಸರ್ಕಾರಿ ಇಲಾಖೆಗಳಿಗೆ ಸೂಚಿಸಿದೆ.

ಯುಎಸ್ ಕಂಪನಿಯ ಅಧ್ಯಯನಕ್ಕೆ ಭಾರತ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
2020 ರ ಆರಂಭದಿಂದಲೂ, ರೆಕಾರ್ಡೆಡ್ ಫ್ಯೂಚರ್‌ನ ಇನ್‌ಸಿಕ್ಟ್ ಗ್ರೂಪ್, ಚೀನಾ ಸರ್ಕಾರ ಪ್ರಾಯೋಜಿತ ಗುಂಪಿನಿಂದ ಭಾರತೀಯ ಸಂಸ್ಥೆಗಳ ವಿರುದ್ಧ ಶಂಕಿತ ಉದ್ದೇಶಿತ ಒಳನುಗ್ಗುವಿಕೆ ಚಟುವಟಿಕೆಯಲ್ಲಿ ಹೆಚ್ಚಳವನ್ನು ಗಮನಿಸಿದೆ.

ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯಲ್ಲಿ, ಈ ಸಂಶೋಧನೆಯು ಮುಂಬೈ ನಿಲುಗಡೆಗೆ ಬೀಜಿಂಗ್‌ನಿಂದ ಬಂದ ಸಂದೇಶವಾಗಿರಬಹುದು, ಭಾರತವು ತನ್ನ ಗಡಿ ಹಕ್ಕುಗಳನ್ನು ತೀವ್ರವಾಗಿ ಪ್ರಸ್ತಾಪಿಸಿದರೆ ಏನಾಗಬಹುದು ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ ಎಂದು ಹೇಳಿದೆ.

ರೆಕಾರ್ಡೆಡ್ ಕಂಪನಿ ಮಾಡಲಾದ ವರದಿಯ ಪ್ರಕಾರ, 2020 ರ ಮಧ್ಯದಿಂದ ಭಾರತದ ವಿವಿಧ ಪವರ್‌ಗ್ರಿಡ್‌ಗಳ ಮೇಲೆ ಈ ಆನ್‌ಲೈಬ್ ದಾಳಿ ನಡೆದಿದೆ ಎಂದು ಹೇಳಿದೆ.

ವಿದ್ಯುತ್ ಸರಬರಾಜು ಮತ್ತು ಬೇಡಿಕೆಯನ್ನು ಸಮತೋಲನಗೊಳಿಸುವ ವಿದ್ಯುತ್ ಗ್ರಿಡ್‌ನ ಕಾರ್ಯಾಚರಣೆಯ ಜವಾಬ್ದಾರಿಯುತ ಹತ್ತು ವಿಭಿನ್ನ ಭಾರತೀಯ ವಿದ್ಯುತ್ ವಲಯದ ಸಂಸ್ಥೆಗಳನ್ನು ಸಂಘಟಿತ ಅಭಿಯಾನದಲ್ಲಿ ಗುರಿಯಾಗಿ ಮಾಡಲಾಗಿದೆ.
ಗುರುತಿಸಲಾದ ಇತರ ಗುರಿಗಳಲ್ಲಿ ಎರಡು ಭಾರತೀಯ ಬಂದರುಗಳು ಸೇರಿವೆ ಎಂದು ಅದು ಹೇಳಿದೆ.

ಚೀನೀ ಸೈಬರ್ ಗೂಢಚರ್ಯೆ ಚಟುವಟಿಕೆಗೆ ಅನನ್ಯವಾಗಿಲ್ಲವಾದರೂ, ಪ್ಲಗ್‌ಎಕ್ಸ್ ಅನ್ನು ಚೀನಾ-ನೆಕ್ಸಸ್ ಗುಂಪುಗಳು ಹಲವು ವರ್ಷಗಳಿಂದ ಹೆಚ್ಚು ಬಳಸುತ್ತಿವೆ.

“2020 ರ ಉಳಿದ ಅವಧಿಯಲ್ಲಿ, ಚೀನಾದ ಸರ್ಕಾರಿ ಪ್ರಾಯೋಜಿತ ಬೆದರಿಕೆ ಚಟುವಟಿಕೆ ಗುಂಪುಗಳಿAದ ಭಾರತೀಯ ಸರ್ಕಾರಿ ಮತ್ತು ಖಾಸಗಿ ವಲಯದ ಸಂಸ್ಥೆಗಳ ಗುರಿಯತ್ತ ಹೆಚ್ಚಿನ ಗಮನವನ್ನು ನಾವು ಗುರುತಿಸಿದ್ದೇವೆ” ಎಂದು ವರದಿ ಹೇಳಿದೆ.

ಪಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳ ಅತ್ಯಂತ ವಿವಾದಾತ್ಮಕ ಪ್ರದೇಶದಿಂದ ಸೈನ್ಯವನ್ನು ಹೊರ ತೆಗೆಯಲು ಉಭಯ ದೇಶಗಳು ಕಳೆದ ತಿಂಗಳು ಪರಸ್ಪರ ಒಪ್ಪಂದಕ್ಕೆ ಬಂದಿವೆ.


ಇದನ್ನೂ ಓದಿ: 8 ಹಂತಗಳಲ್ಲಿ ಪ.ಬಂಗಾಳ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...