Homeಅಂತರಾಷ್ಟ್ರೀಯಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

- Advertisement -
- Advertisement -

ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆಯ ವಿವಾದದ ಮಧ್ಯೆ, ಚೀನಾದ ಸರ್ಕಾರ-ಸಂಬಂಧಿತ ಹ್ಯಾಕರ್‌ಗಳ ಗುಂಪು ಮಾಲ್‌ವೇರ್ ಮೂಲಕ ಭಾರತದ ನಿರ್ಣಾಯಕ ಪವರ್ ಗ್ರಿಡ್ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಅಮೆರಿಕದ ಕಂಪನಿಯೊಂದು ತನ್ನ ಇತ್ತೀಚಿನ ಅಧ್ಯಯನದಲ್ಲಿ ಹೇಳಿಕೊಂಡಿದ್ದು, ಕಳೆದ ವರ್ಷ ಮುಂಬೈನಲ್ಲಿ ಭಾರಿ ವಿದ್ಯುತ್ ಕಡಿತ ಉಂಟಾಗಿದ್ದಕ್ಕೆ ಈ ಆನ್‌ಲೈನ್ ಒಳನುಗ್ಗುವಿಕೆ ಕಾರಣವಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾಸಚೂಸೆಟ್ಸ್ ಮೂಲದ ರೆಕಾರ್ಡೆಡ್ ಫ್ಯೂಚರ್, ವಿವಿಧ ದೇಶ/ರಾಜ್ಯಗಳ ಅಂತರ್ಜಾಲದ ಬಳಕೆಯನ್ನು ಅಧ್ಯಯನ ಮಾಡುತ್ತದೆ. ಅದು ತನ್ನ ಇತ್ತೀಚಿನ ವರದಿಯಲ್ಲಿ ಚೀನಾ-ಸಂಬಂಧಿತ ಬೆದರಿಕೆ ಚಟುವಟಿಕೆ ಗುಂಪು ರೆಡ್‌ಇಕೋ ಭಾರತೀಯ ವಿದ್ಯುತ್ ವಲಯವನ್ನು ಗುರಿಯಾಗಿಸಿಕೊಂಡು ನಡೆಸಿದ ಅಭಿಯಾನವನ್ನು ವಿವರಿಸಿದೆ.

ದೊಡ್ಡ-ಪ್ರಮಾಣದ ಸ್ವಯಂಚಾಲಿತ ನೆಟ್‌ವರ್ಕ್ ಸಂಚಾರ ವಿಶ್ಲೇಷಣೆ ಮತ್ತು ತಜ್ಞರ ವಿಶ್ಲೇಷಣೆಯ ಸಂಯೋಜನೆಯ ಮೂಲಕ ಚಟುವಟಿಕೆಯನ್ನು ಗುರುತಿಸಲಾಗಿದೆ.

ಅಕ್ಟೋಬರ್ 12 ರಂದು, ಮುಂಬೈನಲ್ಲಿ ಗ್ರಿಡ್ ವೈಫಲ್ಯದಿಂದಾಗಿ ಭಾರಿ ವಿದ್ಯುತ್ ಕಡಿತವಾಗಿತ್ತು. ಹಳಿಗಳಲ್ಲಿ ರೈಲುಗಳನ್ನು ನಿಲ್ಲಿಸುವುದು, ಕೊವಿಡ್ -19 ಸಾಂಕ್ರಾಮಿಕದ ಮಧ್ಯೆ ಮನೆಯಿಂದ ಕೆಲಸ ಮಾಡುವವರಿಗೆ ಅಡ್ಡಿಯುಂಟು ಮಾಡುವುದು ಮತ್ತು ಬಳಲುತ್ತಿದ್ದ ಆರ್ಥಿಕ ಚಟುವಟಿಕೆಯನ್ನು ತೀವ್ರವಾಗಿ ಮುಗ್ಗರಿಸುವಂತೆ ಮಾಡುವುದು ಆನ್‌ಲೈನ್ ದಾಳಿಯ ಗುರಿಯಾಗಿತ್ತು ಎನ್ನಲಾಗಿದೆ.

ಅಂದು ಅಗತ್ಯ ಸೇವೆಗಳಿಗಾಗಿ ವಿದ್ಯುತ್ ಸರಬರಾಜು ಪುನರಾರಂಭಗೊಳ್ಳಲು ಎರಡು ಗಂಟೆ ಬೇಕಾಯಿತು, ಈ ಘಟನೆಯ ತನಿಖೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶಿಸಿದ್ದರು.

ತನ್ನ ವರದಿಯಲ್ಲಿ, ರೆಕಾರ್ಡೆಡ್ ಫ್ಯೂಚರ್ ಕಂಪನಿಯು, ಶಂಕಿತ ಒಳನುಗ್ಗುವಿಕೆಗಳನ್ನು ಪ್ರಕಟಿಸುವ ಮೊದಲು, ಪರಿಹಾರ ವ್ಯವಸ್ಥೆಯನ್ನು ಬೆಂಬಲಿಸಲು ಸೂಕ್ತ ಭಾರತೀಯ ಸರ್ಕಾರಿ ಇಲಾಖೆಗಳಿಗೆ ಸೂಚಿಸಿದೆ.

ಯುಎಸ್ ಕಂಪನಿಯ ಅಧ್ಯಯನಕ್ಕೆ ಭಾರತ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
2020 ರ ಆರಂಭದಿಂದಲೂ, ರೆಕಾರ್ಡೆಡ್ ಫ್ಯೂಚರ್‌ನ ಇನ್‌ಸಿಕ್ಟ್ ಗ್ರೂಪ್, ಚೀನಾ ಸರ್ಕಾರ ಪ್ರಾಯೋಜಿತ ಗುಂಪಿನಿಂದ ಭಾರತೀಯ ಸಂಸ್ಥೆಗಳ ವಿರುದ್ಧ ಶಂಕಿತ ಉದ್ದೇಶಿತ ಒಳನುಗ್ಗುವಿಕೆ ಚಟುವಟಿಕೆಯಲ್ಲಿ ಹೆಚ್ಚಳವನ್ನು ಗಮನಿಸಿದೆ.

ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯಲ್ಲಿ, ಈ ಸಂಶೋಧನೆಯು ಮುಂಬೈ ನಿಲುಗಡೆಗೆ ಬೀಜಿಂಗ್‌ನಿಂದ ಬಂದ ಸಂದೇಶವಾಗಿರಬಹುದು, ಭಾರತವು ತನ್ನ ಗಡಿ ಹಕ್ಕುಗಳನ್ನು ತೀವ್ರವಾಗಿ ಪ್ರಸ್ತಾಪಿಸಿದರೆ ಏನಾಗಬಹುದು ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ ಎಂದು ಹೇಳಿದೆ.

ರೆಕಾರ್ಡೆಡ್ ಕಂಪನಿ ಮಾಡಲಾದ ವರದಿಯ ಪ್ರಕಾರ, 2020 ರ ಮಧ್ಯದಿಂದ ಭಾರತದ ವಿವಿಧ ಪವರ್‌ಗ್ರಿಡ್‌ಗಳ ಮೇಲೆ ಈ ಆನ್‌ಲೈಬ್ ದಾಳಿ ನಡೆದಿದೆ ಎಂದು ಹೇಳಿದೆ.

ವಿದ್ಯುತ್ ಸರಬರಾಜು ಮತ್ತು ಬೇಡಿಕೆಯನ್ನು ಸಮತೋಲನಗೊಳಿಸುವ ವಿದ್ಯುತ್ ಗ್ರಿಡ್‌ನ ಕಾರ್ಯಾಚರಣೆಯ ಜವಾಬ್ದಾರಿಯುತ ಹತ್ತು ವಿಭಿನ್ನ ಭಾರತೀಯ ವಿದ್ಯುತ್ ವಲಯದ ಸಂಸ್ಥೆಗಳನ್ನು ಸಂಘಟಿತ ಅಭಿಯಾನದಲ್ಲಿ ಗುರಿಯಾಗಿ ಮಾಡಲಾಗಿದೆ.
ಗುರುತಿಸಲಾದ ಇತರ ಗುರಿಗಳಲ್ಲಿ ಎರಡು ಭಾರತೀಯ ಬಂದರುಗಳು ಸೇರಿವೆ ಎಂದು ಅದು ಹೇಳಿದೆ.

ಚೀನೀ ಸೈಬರ್ ಗೂಢಚರ್ಯೆ ಚಟುವಟಿಕೆಗೆ ಅನನ್ಯವಾಗಿಲ್ಲವಾದರೂ, ಪ್ಲಗ್‌ಎಕ್ಸ್ ಅನ್ನು ಚೀನಾ-ನೆಕ್ಸಸ್ ಗುಂಪುಗಳು ಹಲವು ವರ್ಷಗಳಿಂದ ಹೆಚ್ಚು ಬಳಸುತ್ತಿವೆ.

“2020 ರ ಉಳಿದ ಅವಧಿಯಲ್ಲಿ, ಚೀನಾದ ಸರ್ಕಾರಿ ಪ್ರಾಯೋಜಿತ ಬೆದರಿಕೆ ಚಟುವಟಿಕೆ ಗುಂಪುಗಳಿAದ ಭಾರತೀಯ ಸರ್ಕಾರಿ ಮತ್ತು ಖಾಸಗಿ ವಲಯದ ಸಂಸ್ಥೆಗಳ ಗುರಿಯತ್ತ ಹೆಚ್ಚಿನ ಗಮನವನ್ನು ನಾವು ಗುರುತಿಸಿದ್ದೇವೆ” ಎಂದು ವರದಿ ಹೇಳಿದೆ.

ಪಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳ ಅತ್ಯಂತ ವಿವಾದಾತ್ಮಕ ಪ್ರದೇಶದಿಂದ ಸೈನ್ಯವನ್ನು ಹೊರ ತೆಗೆಯಲು ಉಭಯ ದೇಶಗಳು ಕಳೆದ ತಿಂಗಳು ಪರಸ್ಪರ ಒಪ್ಪಂದಕ್ಕೆ ಬಂದಿವೆ.


ಇದನ್ನೂ ಓದಿ: 8 ಹಂತಗಳಲ್ಲಿ ಪ.ಬಂಗಾಳ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...