Homeಅಂತರಾಷ್ಟ್ರೀಯಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

- Advertisement -
- Advertisement -

ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆಯ ವಿವಾದದ ಮಧ್ಯೆ, ಚೀನಾದ ಸರ್ಕಾರ-ಸಂಬಂಧಿತ ಹ್ಯಾಕರ್‌ಗಳ ಗುಂಪು ಮಾಲ್‌ವೇರ್ ಮೂಲಕ ಭಾರತದ ನಿರ್ಣಾಯಕ ಪವರ್ ಗ್ರಿಡ್ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಅಮೆರಿಕದ ಕಂಪನಿಯೊಂದು ತನ್ನ ಇತ್ತೀಚಿನ ಅಧ್ಯಯನದಲ್ಲಿ ಹೇಳಿಕೊಂಡಿದ್ದು, ಕಳೆದ ವರ್ಷ ಮುಂಬೈನಲ್ಲಿ ಭಾರಿ ವಿದ್ಯುತ್ ಕಡಿತ ಉಂಟಾಗಿದ್ದಕ್ಕೆ ಈ ಆನ್‌ಲೈನ್ ಒಳನುಗ್ಗುವಿಕೆ ಕಾರಣವಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾಸಚೂಸೆಟ್ಸ್ ಮೂಲದ ರೆಕಾರ್ಡೆಡ್ ಫ್ಯೂಚರ್, ವಿವಿಧ ದೇಶ/ರಾಜ್ಯಗಳ ಅಂತರ್ಜಾಲದ ಬಳಕೆಯನ್ನು ಅಧ್ಯಯನ ಮಾಡುತ್ತದೆ. ಅದು ತನ್ನ ಇತ್ತೀಚಿನ ವರದಿಯಲ್ಲಿ ಚೀನಾ-ಸಂಬಂಧಿತ ಬೆದರಿಕೆ ಚಟುವಟಿಕೆ ಗುಂಪು ರೆಡ್‌ಇಕೋ ಭಾರತೀಯ ವಿದ್ಯುತ್ ವಲಯವನ್ನು ಗುರಿಯಾಗಿಸಿಕೊಂಡು ನಡೆಸಿದ ಅಭಿಯಾನವನ್ನು ವಿವರಿಸಿದೆ.

ದೊಡ್ಡ-ಪ್ರಮಾಣದ ಸ್ವಯಂಚಾಲಿತ ನೆಟ್‌ವರ್ಕ್ ಸಂಚಾರ ವಿಶ್ಲೇಷಣೆ ಮತ್ತು ತಜ್ಞರ ವಿಶ್ಲೇಷಣೆಯ ಸಂಯೋಜನೆಯ ಮೂಲಕ ಚಟುವಟಿಕೆಯನ್ನು ಗುರುತಿಸಲಾಗಿದೆ.

ಅಕ್ಟೋಬರ್ 12 ರಂದು, ಮುಂಬೈನಲ್ಲಿ ಗ್ರಿಡ್ ವೈಫಲ್ಯದಿಂದಾಗಿ ಭಾರಿ ವಿದ್ಯುತ್ ಕಡಿತವಾಗಿತ್ತು. ಹಳಿಗಳಲ್ಲಿ ರೈಲುಗಳನ್ನು ನಿಲ್ಲಿಸುವುದು, ಕೊವಿಡ್ -19 ಸಾಂಕ್ರಾಮಿಕದ ಮಧ್ಯೆ ಮನೆಯಿಂದ ಕೆಲಸ ಮಾಡುವವರಿಗೆ ಅಡ್ಡಿಯುಂಟು ಮಾಡುವುದು ಮತ್ತು ಬಳಲುತ್ತಿದ್ದ ಆರ್ಥಿಕ ಚಟುವಟಿಕೆಯನ್ನು ತೀವ್ರವಾಗಿ ಮುಗ್ಗರಿಸುವಂತೆ ಮಾಡುವುದು ಆನ್‌ಲೈನ್ ದಾಳಿಯ ಗುರಿಯಾಗಿತ್ತು ಎನ್ನಲಾಗಿದೆ.

ಅಂದು ಅಗತ್ಯ ಸೇವೆಗಳಿಗಾಗಿ ವಿದ್ಯುತ್ ಸರಬರಾಜು ಪುನರಾರಂಭಗೊಳ್ಳಲು ಎರಡು ಗಂಟೆ ಬೇಕಾಯಿತು, ಈ ಘಟನೆಯ ತನಿಖೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶಿಸಿದ್ದರು.

ತನ್ನ ವರದಿಯಲ್ಲಿ, ರೆಕಾರ್ಡೆಡ್ ಫ್ಯೂಚರ್ ಕಂಪನಿಯು, ಶಂಕಿತ ಒಳನುಗ್ಗುವಿಕೆಗಳನ್ನು ಪ್ರಕಟಿಸುವ ಮೊದಲು, ಪರಿಹಾರ ವ್ಯವಸ್ಥೆಯನ್ನು ಬೆಂಬಲಿಸಲು ಸೂಕ್ತ ಭಾರತೀಯ ಸರ್ಕಾರಿ ಇಲಾಖೆಗಳಿಗೆ ಸೂಚಿಸಿದೆ.

ಯುಎಸ್ ಕಂಪನಿಯ ಅಧ್ಯಯನಕ್ಕೆ ಭಾರತ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
2020 ರ ಆರಂಭದಿಂದಲೂ, ರೆಕಾರ್ಡೆಡ್ ಫ್ಯೂಚರ್‌ನ ಇನ್‌ಸಿಕ್ಟ್ ಗ್ರೂಪ್, ಚೀನಾ ಸರ್ಕಾರ ಪ್ರಾಯೋಜಿತ ಗುಂಪಿನಿಂದ ಭಾರತೀಯ ಸಂಸ್ಥೆಗಳ ವಿರುದ್ಧ ಶಂಕಿತ ಉದ್ದೇಶಿತ ಒಳನುಗ್ಗುವಿಕೆ ಚಟುವಟಿಕೆಯಲ್ಲಿ ಹೆಚ್ಚಳವನ್ನು ಗಮನಿಸಿದೆ.

ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯಲ್ಲಿ, ಈ ಸಂಶೋಧನೆಯು ಮುಂಬೈ ನಿಲುಗಡೆಗೆ ಬೀಜಿಂಗ್‌ನಿಂದ ಬಂದ ಸಂದೇಶವಾಗಿರಬಹುದು, ಭಾರತವು ತನ್ನ ಗಡಿ ಹಕ್ಕುಗಳನ್ನು ತೀವ್ರವಾಗಿ ಪ್ರಸ್ತಾಪಿಸಿದರೆ ಏನಾಗಬಹುದು ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ ಎಂದು ಹೇಳಿದೆ.

ರೆಕಾರ್ಡೆಡ್ ಕಂಪನಿ ಮಾಡಲಾದ ವರದಿಯ ಪ್ರಕಾರ, 2020 ರ ಮಧ್ಯದಿಂದ ಭಾರತದ ವಿವಿಧ ಪವರ್‌ಗ್ರಿಡ್‌ಗಳ ಮೇಲೆ ಈ ಆನ್‌ಲೈಬ್ ದಾಳಿ ನಡೆದಿದೆ ಎಂದು ಹೇಳಿದೆ.

ವಿದ್ಯುತ್ ಸರಬರಾಜು ಮತ್ತು ಬೇಡಿಕೆಯನ್ನು ಸಮತೋಲನಗೊಳಿಸುವ ವಿದ್ಯುತ್ ಗ್ರಿಡ್‌ನ ಕಾರ್ಯಾಚರಣೆಯ ಜವಾಬ್ದಾರಿಯುತ ಹತ್ತು ವಿಭಿನ್ನ ಭಾರತೀಯ ವಿದ್ಯುತ್ ವಲಯದ ಸಂಸ್ಥೆಗಳನ್ನು ಸಂಘಟಿತ ಅಭಿಯಾನದಲ್ಲಿ ಗುರಿಯಾಗಿ ಮಾಡಲಾಗಿದೆ.
ಗುರುತಿಸಲಾದ ಇತರ ಗುರಿಗಳಲ್ಲಿ ಎರಡು ಭಾರತೀಯ ಬಂದರುಗಳು ಸೇರಿವೆ ಎಂದು ಅದು ಹೇಳಿದೆ.

ಚೀನೀ ಸೈಬರ್ ಗೂಢಚರ್ಯೆ ಚಟುವಟಿಕೆಗೆ ಅನನ್ಯವಾಗಿಲ್ಲವಾದರೂ, ಪ್ಲಗ್‌ಎಕ್ಸ್ ಅನ್ನು ಚೀನಾ-ನೆಕ್ಸಸ್ ಗುಂಪುಗಳು ಹಲವು ವರ್ಷಗಳಿಂದ ಹೆಚ್ಚು ಬಳಸುತ್ತಿವೆ.

“2020 ರ ಉಳಿದ ಅವಧಿಯಲ್ಲಿ, ಚೀನಾದ ಸರ್ಕಾರಿ ಪ್ರಾಯೋಜಿತ ಬೆದರಿಕೆ ಚಟುವಟಿಕೆ ಗುಂಪುಗಳಿAದ ಭಾರತೀಯ ಸರ್ಕಾರಿ ಮತ್ತು ಖಾಸಗಿ ವಲಯದ ಸಂಸ್ಥೆಗಳ ಗುರಿಯತ್ತ ಹೆಚ್ಚಿನ ಗಮನವನ್ನು ನಾವು ಗುರುತಿಸಿದ್ದೇವೆ” ಎಂದು ವರದಿ ಹೇಳಿದೆ.

ಪಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳ ಅತ್ಯಂತ ವಿವಾದಾತ್ಮಕ ಪ್ರದೇಶದಿಂದ ಸೈನ್ಯವನ್ನು ಹೊರ ತೆಗೆಯಲು ಉಭಯ ದೇಶಗಳು ಕಳೆದ ತಿಂಗಳು ಪರಸ್ಪರ ಒಪ್ಪಂದಕ್ಕೆ ಬಂದಿವೆ.


ಇದನ್ನೂ ಓದಿ: 8 ಹಂತಗಳಲ್ಲಿ ಪ.ಬಂಗಾಳ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...