Homeಅಂತರಾಷ್ಟ್ರೀಯಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

- Advertisement -
- Advertisement -

ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆಯ ವಿವಾದದ ಮಧ್ಯೆ, ಚೀನಾದ ಸರ್ಕಾರ-ಸಂಬಂಧಿತ ಹ್ಯಾಕರ್‌ಗಳ ಗುಂಪು ಮಾಲ್‌ವೇರ್ ಮೂಲಕ ಭಾರತದ ನಿರ್ಣಾಯಕ ಪವರ್ ಗ್ರಿಡ್ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಅಮೆರಿಕದ ಕಂಪನಿಯೊಂದು ತನ್ನ ಇತ್ತೀಚಿನ ಅಧ್ಯಯನದಲ್ಲಿ ಹೇಳಿಕೊಂಡಿದ್ದು, ಕಳೆದ ವರ್ಷ ಮುಂಬೈನಲ್ಲಿ ಭಾರಿ ವಿದ್ಯುತ್ ಕಡಿತ ಉಂಟಾಗಿದ್ದಕ್ಕೆ ಈ ಆನ್‌ಲೈನ್ ಒಳನುಗ್ಗುವಿಕೆ ಕಾರಣವಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾಸಚೂಸೆಟ್ಸ್ ಮೂಲದ ರೆಕಾರ್ಡೆಡ್ ಫ್ಯೂಚರ್, ವಿವಿಧ ದೇಶ/ರಾಜ್ಯಗಳ ಅಂತರ್ಜಾಲದ ಬಳಕೆಯನ್ನು ಅಧ್ಯಯನ ಮಾಡುತ್ತದೆ. ಅದು ತನ್ನ ಇತ್ತೀಚಿನ ವರದಿಯಲ್ಲಿ ಚೀನಾ-ಸಂಬಂಧಿತ ಬೆದರಿಕೆ ಚಟುವಟಿಕೆ ಗುಂಪು ರೆಡ್‌ಇಕೋ ಭಾರತೀಯ ವಿದ್ಯುತ್ ವಲಯವನ್ನು ಗುರಿಯಾಗಿಸಿಕೊಂಡು ನಡೆಸಿದ ಅಭಿಯಾನವನ್ನು ವಿವರಿಸಿದೆ.

ದೊಡ್ಡ-ಪ್ರಮಾಣದ ಸ್ವಯಂಚಾಲಿತ ನೆಟ್‌ವರ್ಕ್ ಸಂಚಾರ ವಿಶ್ಲೇಷಣೆ ಮತ್ತು ತಜ್ಞರ ವಿಶ್ಲೇಷಣೆಯ ಸಂಯೋಜನೆಯ ಮೂಲಕ ಚಟುವಟಿಕೆಯನ್ನು ಗುರುತಿಸಲಾಗಿದೆ.

ಅಕ್ಟೋಬರ್ 12 ರಂದು, ಮುಂಬೈನಲ್ಲಿ ಗ್ರಿಡ್ ವೈಫಲ್ಯದಿಂದಾಗಿ ಭಾರಿ ವಿದ್ಯುತ್ ಕಡಿತವಾಗಿತ್ತು. ಹಳಿಗಳಲ್ಲಿ ರೈಲುಗಳನ್ನು ನಿಲ್ಲಿಸುವುದು, ಕೊವಿಡ್ -19 ಸಾಂಕ್ರಾಮಿಕದ ಮಧ್ಯೆ ಮನೆಯಿಂದ ಕೆಲಸ ಮಾಡುವವರಿಗೆ ಅಡ್ಡಿಯುಂಟು ಮಾಡುವುದು ಮತ್ತು ಬಳಲುತ್ತಿದ್ದ ಆರ್ಥಿಕ ಚಟುವಟಿಕೆಯನ್ನು ತೀವ್ರವಾಗಿ ಮುಗ್ಗರಿಸುವಂತೆ ಮಾಡುವುದು ಆನ್‌ಲೈನ್ ದಾಳಿಯ ಗುರಿಯಾಗಿತ್ತು ಎನ್ನಲಾಗಿದೆ.

ಅಂದು ಅಗತ್ಯ ಸೇವೆಗಳಿಗಾಗಿ ವಿದ್ಯುತ್ ಸರಬರಾಜು ಪುನರಾರಂಭಗೊಳ್ಳಲು ಎರಡು ಗಂಟೆ ಬೇಕಾಯಿತು, ಈ ಘಟನೆಯ ತನಿಖೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶಿಸಿದ್ದರು.

ತನ್ನ ವರದಿಯಲ್ಲಿ, ರೆಕಾರ್ಡೆಡ್ ಫ್ಯೂಚರ್ ಕಂಪನಿಯು, ಶಂಕಿತ ಒಳನುಗ್ಗುವಿಕೆಗಳನ್ನು ಪ್ರಕಟಿಸುವ ಮೊದಲು, ಪರಿಹಾರ ವ್ಯವಸ್ಥೆಯನ್ನು ಬೆಂಬಲಿಸಲು ಸೂಕ್ತ ಭಾರತೀಯ ಸರ್ಕಾರಿ ಇಲಾಖೆಗಳಿಗೆ ಸೂಚಿಸಿದೆ.

ಯುಎಸ್ ಕಂಪನಿಯ ಅಧ್ಯಯನಕ್ಕೆ ಭಾರತ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
2020 ರ ಆರಂಭದಿಂದಲೂ, ರೆಕಾರ್ಡೆಡ್ ಫ್ಯೂಚರ್‌ನ ಇನ್‌ಸಿಕ್ಟ್ ಗ್ರೂಪ್, ಚೀನಾ ಸರ್ಕಾರ ಪ್ರಾಯೋಜಿತ ಗುಂಪಿನಿಂದ ಭಾರತೀಯ ಸಂಸ್ಥೆಗಳ ವಿರುದ್ಧ ಶಂಕಿತ ಉದ್ದೇಶಿತ ಒಳನುಗ್ಗುವಿಕೆ ಚಟುವಟಿಕೆಯಲ್ಲಿ ಹೆಚ್ಚಳವನ್ನು ಗಮನಿಸಿದೆ.

ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯಲ್ಲಿ, ಈ ಸಂಶೋಧನೆಯು ಮುಂಬೈ ನಿಲುಗಡೆಗೆ ಬೀಜಿಂಗ್‌ನಿಂದ ಬಂದ ಸಂದೇಶವಾಗಿರಬಹುದು, ಭಾರತವು ತನ್ನ ಗಡಿ ಹಕ್ಕುಗಳನ್ನು ತೀವ್ರವಾಗಿ ಪ್ರಸ್ತಾಪಿಸಿದರೆ ಏನಾಗಬಹುದು ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ ಎಂದು ಹೇಳಿದೆ.

ರೆಕಾರ್ಡೆಡ್ ಕಂಪನಿ ಮಾಡಲಾದ ವರದಿಯ ಪ್ರಕಾರ, 2020 ರ ಮಧ್ಯದಿಂದ ಭಾರತದ ವಿವಿಧ ಪವರ್‌ಗ್ರಿಡ್‌ಗಳ ಮೇಲೆ ಈ ಆನ್‌ಲೈಬ್ ದಾಳಿ ನಡೆದಿದೆ ಎಂದು ಹೇಳಿದೆ.

ವಿದ್ಯುತ್ ಸರಬರಾಜು ಮತ್ತು ಬೇಡಿಕೆಯನ್ನು ಸಮತೋಲನಗೊಳಿಸುವ ವಿದ್ಯುತ್ ಗ್ರಿಡ್‌ನ ಕಾರ್ಯಾಚರಣೆಯ ಜವಾಬ್ದಾರಿಯುತ ಹತ್ತು ವಿಭಿನ್ನ ಭಾರತೀಯ ವಿದ್ಯುತ್ ವಲಯದ ಸಂಸ್ಥೆಗಳನ್ನು ಸಂಘಟಿತ ಅಭಿಯಾನದಲ್ಲಿ ಗುರಿಯಾಗಿ ಮಾಡಲಾಗಿದೆ.
ಗುರುತಿಸಲಾದ ಇತರ ಗುರಿಗಳಲ್ಲಿ ಎರಡು ಭಾರತೀಯ ಬಂದರುಗಳು ಸೇರಿವೆ ಎಂದು ಅದು ಹೇಳಿದೆ.

ಚೀನೀ ಸೈಬರ್ ಗೂಢಚರ್ಯೆ ಚಟುವಟಿಕೆಗೆ ಅನನ್ಯವಾಗಿಲ್ಲವಾದರೂ, ಪ್ಲಗ್‌ಎಕ್ಸ್ ಅನ್ನು ಚೀನಾ-ನೆಕ್ಸಸ್ ಗುಂಪುಗಳು ಹಲವು ವರ್ಷಗಳಿಂದ ಹೆಚ್ಚು ಬಳಸುತ್ತಿವೆ.

“2020 ರ ಉಳಿದ ಅವಧಿಯಲ್ಲಿ, ಚೀನಾದ ಸರ್ಕಾರಿ ಪ್ರಾಯೋಜಿತ ಬೆದರಿಕೆ ಚಟುವಟಿಕೆ ಗುಂಪುಗಳಿAದ ಭಾರತೀಯ ಸರ್ಕಾರಿ ಮತ್ತು ಖಾಸಗಿ ವಲಯದ ಸಂಸ್ಥೆಗಳ ಗುರಿಯತ್ತ ಹೆಚ್ಚಿನ ಗಮನವನ್ನು ನಾವು ಗುರುತಿಸಿದ್ದೇವೆ” ಎಂದು ವರದಿ ಹೇಳಿದೆ.

ಪಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳ ಅತ್ಯಂತ ವಿವಾದಾತ್ಮಕ ಪ್ರದೇಶದಿಂದ ಸೈನ್ಯವನ್ನು ಹೊರ ತೆಗೆಯಲು ಉಭಯ ದೇಶಗಳು ಕಳೆದ ತಿಂಗಳು ಪರಸ್ಪರ ಒಪ್ಪಂದಕ್ಕೆ ಬಂದಿವೆ.


ಇದನ್ನೂ ಓದಿ: 8 ಹಂತಗಳಲ್ಲಿ ಪ.ಬಂಗಾಳ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...