Homeಅಂತರಾಷ್ಟ್ರೀಯಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

ಭಾರತದ ಪವರ್‌ಗ್ರಿಡ್‌ಗಳು ಚೀನಾ ಹ್ಯಾಕರ್‌ಗಳ ಟಾರ್ಗೆಟ್!

- Advertisement -
- Advertisement -

ಭಾರತ ಮತ್ತು ಚೀನಾ ನಡುವಿನ ಗಡಿ ಉದ್ವಿಗ್ನತೆಯ ವಿವಾದದ ಮಧ್ಯೆ, ಚೀನಾದ ಸರ್ಕಾರ-ಸಂಬಂಧಿತ ಹ್ಯಾಕರ್‌ಗಳ ಗುಂಪು ಮಾಲ್‌ವೇರ್ ಮೂಲಕ ಭಾರತದ ನಿರ್ಣಾಯಕ ಪವರ್ ಗ್ರಿಡ್ ವ್ಯವಸ್ಥೆಯನ್ನು ಗುರಿಯಾಗಿಸಿಕೊಂಡಿದೆ ಎಂದು ಅಮೆರಿಕದ ಕಂಪನಿಯೊಂದು ತನ್ನ ಇತ್ತೀಚಿನ ಅಧ್ಯಯನದಲ್ಲಿ ಹೇಳಿಕೊಂಡಿದ್ದು, ಕಳೆದ ವರ್ಷ ಮುಂಬೈನಲ್ಲಿ ಭಾರಿ ವಿದ್ಯುತ್ ಕಡಿತ ಉಂಟಾಗಿದ್ದಕ್ಕೆ ಈ ಆನ್‌ಲೈನ್ ಒಳನುಗ್ಗುವಿಕೆ ಕಾರಣವಾಗಿದೆಯೇ ಎಂಬ ಅನುಮಾನವನ್ನು ಹುಟ್ಟುಹಾಕಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಮ್ಯಾಸಚೂಸೆಟ್ಸ್ ಮೂಲದ ರೆಕಾರ್ಡೆಡ್ ಫ್ಯೂಚರ್, ವಿವಿಧ ದೇಶ/ರಾಜ್ಯಗಳ ಅಂತರ್ಜಾಲದ ಬಳಕೆಯನ್ನು ಅಧ್ಯಯನ ಮಾಡುತ್ತದೆ. ಅದು ತನ್ನ ಇತ್ತೀಚಿನ ವರದಿಯಲ್ಲಿ ಚೀನಾ-ಸಂಬಂಧಿತ ಬೆದರಿಕೆ ಚಟುವಟಿಕೆ ಗುಂಪು ರೆಡ್‌ಇಕೋ ಭಾರತೀಯ ವಿದ್ಯುತ್ ವಲಯವನ್ನು ಗುರಿಯಾಗಿಸಿಕೊಂಡು ನಡೆಸಿದ ಅಭಿಯಾನವನ್ನು ವಿವರಿಸಿದೆ.

ದೊಡ್ಡ-ಪ್ರಮಾಣದ ಸ್ವಯಂಚಾಲಿತ ನೆಟ್‌ವರ್ಕ್ ಸಂಚಾರ ವಿಶ್ಲೇಷಣೆ ಮತ್ತು ತಜ್ಞರ ವಿಶ್ಲೇಷಣೆಯ ಸಂಯೋಜನೆಯ ಮೂಲಕ ಚಟುವಟಿಕೆಯನ್ನು ಗುರುತಿಸಲಾಗಿದೆ.

ಅಕ್ಟೋಬರ್ 12 ರಂದು, ಮುಂಬೈನಲ್ಲಿ ಗ್ರಿಡ್ ವೈಫಲ್ಯದಿಂದಾಗಿ ಭಾರಿ ವಿದ್ಯುತ್ ಕಡಿತವಾಗಿತ್ತು. ಹಳಿಗಳಲ್ಲಿ ರೈಲುಗಳನ್ನು ನಿಲ್ಲಿಸುವುದು, ಕೊವಿಡ್ -19 ಸಾಂಕ್ರಾಮಿಕದ ಮಧ್ಯೆ ಮನೆಯಿಂದ ಕೆಲಸ ಮಾಡುವವರಿಗೆ ಅಡ್ಡಿಯುಂಟು ಮಾಡುವುದು ಮತ್ತು ಬಳಲುತ್ತಿದ್ದ ಆರ್ಥಿಕ ಚಟುವಟಿಕೆಯನ್ನು ತೀವ್ರವಾಗಿ ಮುಗ್ಗರಿಸುವಂತೆ ಮಾಡುವುದು ಆನ್‌ಲೈನ್ ದಾಳಿಯ ಗುರಿಯಾಗಿತ್ತು ಎನ್ನಲಾಗಿದೆ.

ಅಂದು ಅಗತ್ಯ ಸೇವೆಗಳಿಗಾಗಿ ವಿದ್ಯುತ್ ಸರಬರಾಜು ಪುನರಾರಂಭಗೊಳ್ಳಲು ಎರಡು ಗಂಟೆ ಬೇಕಾಯಿತು, ಈ ಘಟನೆಯ ತನಿಖೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಆದೇಶಿಸಿದ್ದರು.

ತನ್ನ ವರದಿಯಲ್ಲಿ, ರೆಕಾರ್ಡೆಡ್ ಫ್ಯೂಚರ್ ಕಂಪನಿಯು, ಶಂಕಿತ ಒಳನುಗ್ಗುವಿಕೆಗಳನ್ನು ಪ್ರಕಟಿಸುವ ಮೊದಲು, ಪರಿಹಾರ ವ್ಯವಸ್ಥೆಯನ್ನು ಬೆಂಬಲಿಸಲು ಸೂಕ್ತ ಭಾರತೀಯ ಸರ್ಕಾರಿ ಇಲಾಖೆಗಳಿಗೆ ಸೂಚಿಸಿದೆ.

ಯುಎಸ್ ಕಂಪನಿಯ ಅಧ್ಯಯನಕ್ಕೆ ಭಾರತ ಸರ್ಕಾರದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲ.
2020 ರ ಆರಂಭದಿಂದಲೂ, ರೆಕಾರ್ಡೆಡ್ ಫ್ಯೂಚರ್‌ನ ಇನ್‌ಸಿಕ್ಟ್ ಗ್ರೂಪ್, ಚೀನಾ ಸರ್ಕಾರ ಪ್ರಾಯೋಜಿತ ಗುಂಪಿನಿಂದ ಭಾರತೀಯ ಸಂಸ್ಥೆಗಳ ವಿರುದ್ಧ ಶಂಕಿತ ಉದ್ದೇಶಿತ ಒಳನುಗ್ಗುವಿಕೆ ಚಟುವಟಿಕೆಯಲ್ಲಿ ಹೆಚ್ಚಳವನ್ನು ಗಮನಿಸಿದೆ.

ನ್ಯೂಯಾರ್ಕ್ ಟೈಮ್ಸ್ ತನ್ನ ವರದಿಯಲ್ಲಿ, ಈ ಸಂಶೋಧನೆಯು ಮುಂಬೈ ನಿಲುಗಡೆಗೆ ಬೀಜಿಂಗ್‌ನಿಂದ ಬಂದ ಸಂದೇಶವಾಗಿರಬಹುದು, ಭಾರತವು ತನ್ನ ಗಡಿ ಹಕ್ಕುಗಳನ್ನು ತೀವ್ರವಾಗಿ ಪ್ರಸ್ತಾಪಿಸಿದರೆ ಏನಾಗಬಹುದು ಎಂಬ ಪ್ರಶ್ನೆಯನ್ನು ಇದು ಹುಟ್ಟುಹಾಕಿದೆ ಎಂದು ಹೇಳಿದೆ.

ರೆಕಾರ್ಡೆಡ್ ಕಂಪನಿ ಮಾಡಲಾದ ವರದಿಯ ಪ್ರಕಾರ, 2020 ರ ಮಧ್ಯದಿಂದ ಭಾರತದ ವಿವಿಧ ಪವರ್‌ಗ್ರಿಡ್‌ಗಳ ಮೇಲೆ ಈ ಆನ್‌ಲೈಬ್ ದಾಳಿ ನಡೆದಿದೆ ಎಂದು ಹೇಳಿದೆ.

ವಿದ್ಯುತ್ ಸರಬರಾಜು ಮತ್ತು ಬೇಡಿಕೆಯನ್ನು ಸಮತೋಲನಗೊಳಿಸುವ ವಿದ್ಯುತ್ ಗ್ರಿಡ್‌ನ ಕಾರ್ಯಾಚರಣೆಯ ಜವಾಬ್ದಾರಿಯುತ ಹತ್ತು ವಿಭಿನ್ನ ಭಾರತೀಯ ವಿದ್ಯುತ್ ವಲಯದ ಸಂಸ್ಥೆಗಳನ್ನು ಸಂಘಟಿತ ಅಭಿಯಾನದಲ್ಲಿ ಗುರಿಯಾಗಿ ಮಾಡಲಾಗಿದೆ.
ಗುರುತಿಸಲಾದ ಇತರ ಗುರಿಗಳಲ್ಲಿ ಎರಡು ಭಾರತೀಯ ಬಂದರುಗಳು ಸೇರಿವೆ ಎಂದು ಅದು ಹೇಳಿದೆ.

ಚೀನೀ ಸೈಬರ್ ಗೂಢಚರ್ಯೆ ಚಟುವಟಿಕೆಗೆ ಅನನ್ಯವಾಗಿಲ್ಲವಾದರೂ, ಪ್ಲಗ್‌ಎಕ್ಸ್ ಅನ್ನು ಚೀನಾ-ನೆಕ್ಸಸ್ ಗುಂಪುಗಳು ಹಲವು ವರ್ಷಗಳಿಂದ ಹೆಚ್ಚು ಬಳಸುತ್ತಿವೆ.

“2020 ರ ಉಳಿದ ಅವಧಿಯಲ್ಲಿ, ಚೀನಾದ ಸರ್ಕಾರಿ ಪ್ರಾಯೋಜಿತ ಬೆದರಿಕೆ ಚಟುವಟಿಕೆ ಗುಂಪುಗಳಿAದ ಭಾರತೀಯ ಸರ್ಕಾರಿ ಮತ್ತು ಖಾಸಗಿ ವಲಯದ ಸಂಸ್ಥೆಗಳ ಗುರಿಯತ್ತ ಹೆಚ್ಚಿನ ಗಮನವನ್ನು ನಾವು ಗುರುತಿಸಿದ್ದೇವೆ” ಎಂದು ವರದಿ ಹೇಳಿದೆ.

ಪಾಂಗೊಂಗ್ ಸರೋವರದ ಉತ್ತರ ಮತ್ತು ದಕ್ಷಿಣ ದಂಡೆಗಳ ಅತ್ಯಂತ ವಿವಾದಾತ್ಮಕ ಪ್ರದೇಶದಿಂದ ಸೈನ್ಯವನ್ನು ಹೊರ ತೆಗೆಯಲು ಉಭಯ ದೇಶಗಳು ಕಳೆದ ತಿಂಗಳು ಪರಸ್ಪರ ಒಪ್ಪಂದಕ್ಕೆ ಬಂದಿವೆ.


ಇದನ್ನೂ ಓದಿ: 8 ಹಂತಗಳಲ್ಲಿ ಪ.ಬಂಗಾಳ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿ ಸುಪ್ರೀಂನಲ್ಲಿ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...