Homeಕರ್ನಾಟಕಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

ಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

- Advertisement -
- Advertisement -

ಬೀದರ್ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸೋಮವಾರ ನಡೆದ ಜಿಲ್ಲಾ​ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಉತ್ತಮ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಪ್ರಭು ಚವ್ಹಾಣ್ ವೇದಿಕೆಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದಿದ್ದಾರೆ. ಈ ಮೂಲಕ ಹಾಲಿ ಸಂಸದ ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಪರೋಕ್ಷವಾಗಿ ಮನವಿ ಮಾಡಿದ್ದಾರೆ.

ವಿಜಯೇಂದ್ರ ಸೇರಿದಂತೆ ಬಿಜೆಪಿ ರಾಜ್ಯ ಮತ್ತು ಜಿಲ್ಲಾ ನಾಯಕರು ವೇದಿಕೆಯಲ್ಲಿ ಕುಳಿತಿದ್ದ ವೇಳೆ, ಭಾಷಣ ಪೀಠದಿಂದ ನೇರವಾಗಿ ಬಂದು ಪ್ರಭು ಚವ್ಹಾಣ್ ಸಾಷ್ಟಾಂಗವೆರಗಿದ್ದಾರೆ. ದಯವಿಟ್ಟು ಸಾಮಾನ್ಯ ಕಾರ್ಯಕರ್ತನಿಗೆ, ಉತ್ತಮ ಅಭ್ಯರ್ಥಿಗೆ ಈ ಬಾರಿಯ ಬೀದರ್‌ ಲೋಕಸಭೆ ಕ್ಷೇತ್ರದ ಟಿಕೆಟ್‌ ಕೊಡಿ ಎಂದು ಮನವಿ ಮಾಡಿದ್ದಾರೆ. ಇದು ನನ್ನ ಅಭಿಪ್ರಾಯ ಅಲ್ಲ, ಸಮಸ್ತ ಕಾರ್ಯಕರ್ತರ ಅಭಿಪ್ರಾಯ ಎಂದಿದ್ದಾರೆ. ಈ ವೇಳೆ ಪಕ್ಕದಲ್ಲೇ ಭಗವಂತ ಖೂಬಾ ಕುಳಿತಿದ್ದರು.

 

View this post on Instagram

 

A post shared by eedina.com (@eedinanews)

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಕೇಂದ್ರ ಸಚಿವರೂ ಆಗಿರುವ ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ಮುಖಂಡರೊಂದಿಗೆ ಚರ್ಚಿಸಲು ಇತ್ತೀಚೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು.

ಈ ಸಭೆಯಲ್ಲಿ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮತ್ತೆ ಟಿಕೆಟ್ ನೀಡುವುದನ್ನು ಪಕ್ಷದ ಪದಾಧಿಕಾರಿಗಳು ವಿರೋಧಿಸಿದ್ದರು. ಖೂಬಾ ಸಂಸದರಾಗಿರುವ ಬೀದರ್‌ನಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಗೆದ್ದಿದೆ. ಆದರೂ, ಬಿಜೆಪಿ ಶಾಸಕರು ಖೂಬಾಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದಾರೆ.

ಭಗವಂತ ಖೂಬಾ ಬಿಜೆಪಿ ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದರು. ಸಭೆಯಲ್ಲಿ ಖೂಬಾ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶರಣು ಸಲಗರ ಕೂಡ ಬೆಂಬಲವಾಗಿ ಮಾತನಾಡಿ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು.

ಈ ವೇಳೆ ಶಾಸಕರ ಮೇಲೆ ಕೋಪಗೊಂಡ ಖೂಬಾ, ಟಿಕೆಟ್‌ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿ ಸಭೆಯಿಂದ ಹೊರ ನಡೆದಿದ್ದರು. ಖೂಬಾ ಹೊರ ಹೋದ ಮೇಲೆ, ಈ ಬಾರಿ ಯಾರಿಗೆ ಟಿಕೆಟ್‌ ನೀಡಬೇಕೆಂದು ವಿಜಯೇಂದ್ರ ಶಾಸಕರನ್ನು ಪ್ರಶ್ನಿಸಿದ್ದಾರೆ. ಆಗ, ಯಾರಿಗೆ ಬೇಕಾದರು ಕೊಡಿ, ಆದರೆ ಖೂಬಾಗೆ ಮತ್ತೆ ಟಿಕೆಟ್‌ ಕೊಟ್ಟರೆ ನಾವು ಅವರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಶಾಸಕರು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಖೂಬಾ ವಿರುದ್ದ ಗಂಭೀರ ಆರೋಪ ಮಾಡಿದ್ದರು ಚವ್ಹಾಣ್ :

ಭಗವಂತ್‌ ಖೂಬಾ ಮತ್ತು ಪ್ರಭು ಚವ್ಹಾಣ್ ನಡುವಿನ ಕಿತ್ತಾಟ ಇಂದು ನಿನ್ನೆಯದಲ್ಲ. ಕಳೆದ ಒಂದು ವರ್ಷದಿಂದ ಈ ಇಬ್ಬರು ನಾಯಕರ ನಡುವೆ ಮುನಿಸಿದೆ. ಕಳೆದ ಆಗಸ್ಟ್‌ನಲ್ಲಿ ಬೀದರ್‌ನ ಔರಾದ್‌ ಪಟ್ಟಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖೂಬಾ ವಿರುದ್ದ ವಾಗ್ದಾಳಿ ನಡೆಸಿದ್ದ ಚವ್ಹಾಣ್, “ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ, ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಎಂದು ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಖೂಬಾ, ಪ್ರಭು ಚವ್ಹಾಣ್ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ವರಿಷ್ಠರು ಅನುಮತಿ ನೀಡಿದರೆ ಅವರ ವಿರುದ್ಧ 100 ಕೋಟಿ ರೂಪಾಯಿ ಮಾನಹಾನಿ ಕೇಸ್ ದಾಖಲಿಸುವೆ ಎಂದು ಹೇಳಿದ್ದರು.

ಪದ್ಮಾಕರ್ ಪಾಟೀಲ್​ಗೆ ಟಿಕೆಟ್ ನೀಡುವಂತೆ ಸಲಗರ್‌ ಮನವಿ

ಪ್ರಭು ಚವ್ಹಾಣ್ ಒಂದು ಕಡೆಯಾದರೆ ಶಾಸಕ ಶರಣು ಸಲಗರ್ ಮತ್ತೊಂದು ಕಡೆ ಖೂಬಾ ವಿರುದ್ದ ತಿರುಗಿ ಬಿದ್ದಿದ್ದಾರೆ. ಮರಾಠಾ ಸಮುದಾಯದ ಪದ್ಮಾಕರ್ ಪಾಟೀಲ್ ಕಳೆದ 25 ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ, ಮಾಜಿ‌ ಜಿಪಂ ಅಧ್ಯಕ್ಷರಾಗಿ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಟಿಕೆಟ್‌ ನೀಡಿದ್ರೆ ನಮ್ಮ ಬೆಂಬಲ ಇದೆ ಎಂದು ಸಲಗರ್ ಈ ಹಿಂದೆ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು.

ಇದನ್ನೂ : ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...