Homeಕರ್ನಾಟಕಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

ಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

- Advertisement -
- Advertisement -

ಬೀದರ್ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸೋಮವಾರ ನಡೆದ ಜಿಲ್ಲಾ​ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಉತ್ತಮ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಪ್ರಭು ಚವ್ಹಾಣ್ ವೇದಿಕೆಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದಿದ್ದಾರೆ. ಈ ಮೂಲಕ ಹಾಲಿ ಸಂಸದ ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಪರೋಕ್ಷವಾಗಿ ಮನವಿ ಮಾಡಿದ್ದಾರೆ.

ವಿಜಯೇಂದ್ರ ಸೇರಿದಂತೆ ಬಿಜೆಪಿ ರಾಜ್ಯ ಮತ್ತು ಜಿಲ್ಲಾ ನಾಯಕರು ವೇದಿಕೆಯಲ್ಲಿ ಕುಳಿತಿದ್ದ ವೇಳೆ, ಭಾಷಣ ಪೀಠದಿಂದ ನೇರವಾಗಿ ಬಂದು ಪ್ರಭು ಚವ್ಹಾಣ್ ಸಾಷ್ಟಾಂಗವೆರಗಿದ್ದಾರೆ. ದಯವಿಟ್ಟು ಸಾಮಾನ್ಯ ಕಾರ್ಯಕರ್ತನಿಗೆ, ಉತ್ತಮ ಅಭ್ಯರ್ಥಿಗೆ ಈ ಬಾರಿಯ ಬೀದರ್‌ ಲೋಕಸಭೆ ಕ್ಷೇತ್ರದ ಟಿಕೆಟ್‌ ಕೊಡಿ ಎಂದು ಮನವಿ ಮಾಡಿದ್ದಾರೆ. ಇದು ನನ್ನ ಅಭಿಪ್ರಾಯ ಅಲ್ಲ, ಸಮಸ್ತ ಕಾರ್ಯಕರ್ತರ ಅಭಿಪ್ರಾಯ ಎಂದಿದ್ದಾರೆ. ಈ ವೇಳೆ ಪಕ್ಕದಲ್ಲೇ ಭಗವಂತ ಖೂಬಾ ಕುಳಿತಿದ್ದರು.

 

View this post on Instagram

 

A post shared by eedina.com (@eedinanews)

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಕೇಂದ್ರ ಸಚಿವರೂ ಆಗಿರುವ ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ಮುಖಂಡರೊಂದಿಗೆ ಚರ್ಚಿಸಲು ಇತ್ತೀಚೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು.

ಈ ಸಭೆಯಲ್ಲಿ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮತ್ತೆ ಟಿಕೆಟ್ ನೀಡುವುದನ್ನು ಪಕ್ಷದ ಪದಾಧಿಕಾರಿಗಳು ವಿರೋಧಿಸಿದ್ದರು. ಖೂಬಾ ಸಂಸದರಾಗಿರುವ ಬೀದರ್‌ನಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಗೆದ್ದಿದೆ. ಆದರೂ, ಬಿಜೆಪಿ ಶಾಸಕರು ಖೂಬಾಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದಾರೆ.

ಭಗವಂತ ಖೂಬಾ ಬಿಜೆಪಿ ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದರು. ಸಭೆಯಲ್ಲಿ ಖೂಬಾ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶರಣು ಸಲಗರ ಕೂಡ ಬೆಂಬಲವಾಗಿ ಮಾತನಾಡಿ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು.

ಈ ವೇಳೆ ಶಾಸಕರ ಮೇಲೆ ಕೋಪಗೊಂಡ ಖೂಬಾ, ಟಿಕೆಟ್‌ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿ ಸಭೆಯಿಂದ ಹೊರ ನಡೆದಿದ್ದರು. ಖೂಬಾ ಹೊರ ಹೋದ ಮೇಲೆ, ಈ ಬಾರಿ ಯಾರಿಗೆ ಟಿಕೆಟ್‌ ನೀಡಬೇಕೆಂದು ವಿಜಯೇಂದ್ರ ಶಾಸಕರನ್ನು ಪ್ರಶ್ನಿಸಿದ್ದಾರೆ. ಆಗ, ಯಾರಿಗೆ ಬೇಕಾದರು ಕೊಡಿ, ಆದರೆ ಖೂಬಾಗೆ ಮತ್ತೆ ಟಿಕೆಟ್‌ ಕೊಟ್ಟರೆ ನಾವು ಅವರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಶಾಸಕರು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಖೂಬಾ ವಿರುದ್ದ ಗಂಭೀರ ಆರೋಪ ಮಾಡಿದ್ದರು ಚವ್ಹಾಣ್ :

ಭಗವಂತ್‌ ಖೂಬಾ ಮತ್ತು ಪ್ರಭು ಚವ್ಹಾಣ್ ನಡುವಿನ ಕಿತ್ತಾಟ ಇಂದು ನಿನ್ನೆಯದಲ್ಲ. ಕಳೆದ ಒಂದು ವರ್ಷದಿಂದ ಈ ಇಬ್ಬರು ನಾಯಕರ ನಡುವೆ ಮುನಿಸಿದೆ. ಕಳೆದ ಆಗಸ್ಟ್‌ನಲ್ಲಿ ಬೀದರ್‌ನ ಔರಾದ್‌ ಪಟ್ಟಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖೂಬಾ ವಿರುದ್ದ ವಾಗ್ದಾಳಿ ನಡೆಸಿದ್ದ ಚವ್ಹಾಣ್, “ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ, ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಎಂದು ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಖೂಬಾ, ಪ್ರಭು ಚವ್ಹಾಣ್ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ವರಿಷ್ಠರು ಅನುಮತಿ ನೀಡಿದರೆ ಅವರ ವಿರುದ್ಧ 100 ಕೋಟಿ ರೂಪಾಯಿ ಮಾನಹಾನಿ ಕೇಸ್ ದಾಖಲಿಸುವೆ ಎಂದು ಹೇಳಿದ್ದರು.

ಪದ್ಮಾಕರ್ ಪಾಟೀಲ್​ಗೆ ಟಿಕೆಟ್ ನೀಡುವಂತೆ ಸಲಗರ್‌ ಮನವಿ

ಪ್ರಭು ಚವ್ಹಾಣ್ ಒಂದು ಕಡೆಯಾದರೆ ಶಾಸಕ ಶರಣು ಸಲಗರ್ ಮತ್ತೊಂದು ಕಡೆ ಖೂಬಾ ವಿರುದ್ದ ತಿರುಗಿ ಬಿದ್ದಿದ್ದಾರೆ. ಮರಾಠಾ ಸಮುದಾಯದ ಪದ್ಮಾಕರ್ ಪಾಟೀಲ್ ಕಳೆದ 25 ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ, ಮಾಜಿ‌ ಜಿಪಂ ಅಧ್ಯಕ್ಷರಾಗಿ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಟಿಕೆಟ್‌ ನೀಡಿದ್ರೆ ನಮ್ಮ ಬೆಂಬಲ ಇದೆ ಎಂದು ಸಲಗರ್ ಈ ಹಿಂದೆ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು.

ಇದನ್ನೂ : ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...