Homeಕರ್ನಾಟಕಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

ಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

- Advertisement -
- Advertisement -

ಬೀದರ್ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸೋಮವಾರ ನಡೆದ ಜಿಲ್ಲಾ​ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಉತ್ತಮ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಪ್ರಭು ಚವ್ಹಾಣ್ ವೇದಿಕೆಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದಿದ್ದಾರೆ. ಈ ಮೂಲಕ ಹಾಲಿ ಸಂಸದ ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಪರೋಕ್ಷವಾಗಿ ಮನವಿ ಮಾಡಿದ್ದಾರೆ.

ವಿಜಯೇಂದ್ರ ಸೇರಿದಂತೆ ಬಿಜೆಪಿ ರಾಜ್ಯ ಮತ್ತು ಜಿಲ್ಲಾ ನಾಯಕರು ವೇದಿಕೆಯಲ್ಲಿ ಕುಳಿತಿದ್ದ ವೇಳೆ, ಭಾಷಣ ಪೀಠದಿಂದ ನೇರವಾಗಿ ಬಂದು ಪ್ರಭು ಚವ್ಹಾಣ್ ಸಾಷ್ಟಾಂಗವೆರಗಿದ್ದಾರೆ. ದಯವಿಟ್ಟು ಸಾಮಾನ್ಯ ಕಾರ್ಯಕರ್ತನಿಗೆ, ಉತ್ತಮ ಅಭ್ಯರ್ಥಿಗೆ ಈ ಬಾರಿಯ ಬೀದರ್‌ ಲೋಕಸಭೆ ಕ್ಷೇತ್ರದ ಟಿಕೆಟ್‌ ಕೊಡಿ ಎಂದು ಮನವಿ ಮಾಡಿದ್ದಾರೆ. ಇದು ನನ್ನ ಅಭಿಪ್ರಾಯ ಅಲ್ಲ, ಸಮಸ್ತ ಕಾರ್ಯಕರ್ತರ ಅಭಿಪ್ರಾಯ ಎಂದಿದ್ದಾರೆ. ಈ ವೇಳೆ ಪಕ್ಕದಲ್ಲೇ ಭಗವಂತ ಖೂಬಾ ಕುಳಿತಿದ್ದರು.

 

View this post on Instagram

 

A post shared by eedina.com (@eedinanews)

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಕೇಂದ್ರ ಸಚಿವರೂ ಆಗಿರುವ ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ಮುಖಂಡರೊಂದಿಗೆ ಚರ್ಚಿಸಲು ಇತ್ತೀಚೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು.

ಈ ಸಭೆಯಲ್ಲಿ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮತ್ತೆ ಟಿಕೆಟ್ ನೀಡುವುದನ್ನು ಪಕ್ಷದ ಪದಾಧಿಕಾರಿಗಳು ವಿರೋಧಿಸಿದ್ದರು. ಖೂಬಾ ಸಂಸದರಾಗಿರುವ ಬೀದರ್‌ನಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಗೆದ್ದಿದೆ. ಆದರೂ, ಬಿಜೆಪಿ ಶಾಸಕರು ಖೂಬಾಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದಾರೆ.

ಭಗವಂತ ಖೂಬಾ ಬಿಜೆಪಿ ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದರು. ಸಭೆಯಲ್ಲಿ ಖೂಬಾ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶರಣು ಸಲಗರ ಕೂಡ ಬೆಂಬಲವಾಗಿ ಮಾತನಾಡಿ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು.

ಈ ವೇಳೆ ಶಾಸಕರ ಮೇಲೆ ಕೋಪಗೊಂಡ ಖೂಬಾ, ಟಿಕೆಟ್‌ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿ ಸಭೆಯಿಂದ ಹೊರ ನಡೆದಿದ್ದರು. ಖೂಬಾ ಹೊರ ಹೋದ ಮೇಲೆ, ಈ ಬಾರಿ ಯಾರಿಗೆ ಟಿಕೆಟ್‌ ನೀಡಬೇಕೆಂದು ವಿಜಯೇಂದ್ರ ಶಾಸಕರನ್ನು ಪ್ರಶ್ನಿಸಿದ್ದಾರೆ. ಆಗ, ಯಾರಿಗೆ ಬೇಕಾದರು ಕೊಡಿ, ಆದರೆ ಖೂಬಾಗೆ ಮತ್ತೆ ಟಿಕೆಟ್‌ ಕೊಟ್ಟರೆ ನಾವು ಅವರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಶಾಸಕರು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಖೂಬಾ ವಿರುದ್ದ ಗಂಭೀರ ಆರೋಪ ಮಾಡಿದ್ದರು ಚವ್ಹಾಣ್ :

ಭಗವಂತ್‌ ಖೂಬಾ ಮತ್ತು ಪ್ರಭು ಚವ್ಹಾಣ್ ನಡುವಿನ ಕಿತ್ತಾಟ ಇಂದು ನಿನ್ನೆಯದಲ್ಲ. ಕಳೆದ ಒಂದು ವರ್ಷದಿಂದ ಈ ಇಬ್ಬರು ನಾಯಕರ ನಡುವೆ ಮುನಿಸಿದೆ. ಕಳೆದ ಆಗಸ್ಟ್‌ನಲ್ಲಿ ಬೀದರ್‌ನ ಔರಾದ್‌ ಪಟ್ಟಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖೂಬಾ ವಿರುದ್ದ ವಾಗ್ದಾಳಿ ನಡೆಸಿದ್ದ ಚವ್ಹಾಣ್, “ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ, ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಎಂದು ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಖೂಬಾ, ಪ್ರಭು ಚವ್ಹಾಣ್ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ವರಿಷ್ಠರು ಅನುಮತಿ ನೀಡಿದರೆ ಅವರ ವಿರುದ್ಧ 100 ಕೋಟಿ ರೂಪಾಯಿ ಮಾನಹಾನಿ ಕೇಸ್ ದಾಖಲಿಸುವೆ ಎಂದು ಹೇಳಿದ್ದರು.

ಪದ್ಮಾಕರ್ ಪಾಟೀಲ್​ಗೆ ಟಿಕೆಟ್ ನೀಡುವಂತೆ ಸಲಗರ್‌ ಮನವಿ

ಪ್ರಭು ಚವ್ಹಾಣ್ ಒಂದು ಕಡೆಯಾದರೆ ಶಾಸಕ ಶರಣು ಸಲಗರ್ ಮತ್ತೊಂದು ಕಡೆ ಖೂಬಾ ವಿರುದ್ದ ತಿರುಗಿ ಬಿದ್ದಿದ್ದಾರೆ. ಮರಾಠಾ ಸಮುದಾಯದ ಪದ್ಮಾಕರ್ ಪಾಟೀಲ್ ಕಳೆದ 25 ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ, ಮಾಜಿ‌ ಜಿಪಂ ಅಧ್ಯಕ್ಷರಾಗಿ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಟಿಕೆಟ್‌ ನೀಡಿದ್ರೆ ನಮ್ಮ ಬೆಂಬಲ ಇದೆ ಎಂದು ಸಲಗರ್ ಈ ಹಿಂದೆ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು.

ಇದನ್ನೂ : ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...