Homeಕರ್ನಾಟಕಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

ಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

- Advertisement -
- Advertisement -

ಬೀದರ್ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸೋಮವಾರ ನಡೆದ ಜಿಲ್ಲಾ​ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಉತ್ತಮ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಪ್ರಭು ಚವ್ಹಾಣ್ ವೇದಿಕೆಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದಿದ್ದಾರೆ. ಈ ಮೂಲಕ ಹಾಲಿ ಸಂಸದ ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಪರೋಕ್ಷವಾಗಿ ಮನವಿ ಮಾಡಿದ್ದಾರೆ.

ವಿಜಯೇಂದ್ರ ಸೇರಿದಂತೆ ಬಿಜೆಪಿ ರಾಜ್ಯ ಮತ್ತು ಜಿಲ್ಲಾ ನಾಯಕರು ವೇದಿಕೆಯಲ್ಲಿ ಕುಳಿತಿದ್ದ ವೇಳೆ, ಭಾಷಣ ಪೀಠದಿಂದ ನೇರವಾಗಿ ಬಂದು ಪ್ರಭು ಚವ್ಹಾಣ್ ಸಾಷ್ಟಾಂಗವೆರಗಿದ್ದಾರೆ. ದಯವಿಟ್ಟು ಸಾಮಾನ್ಯ ಕಾರ್ಯಕರ್ತನಿಗೆ, ಉತ್ತಮ ಅಭ್ಯರ್ಥಿಗೆ ಈ ಬಾರಿಯ ಬೀದರ್‌ ಲೋಕಸಭೆ ಕ್ಷೇತ್ರದ ಟಿಕೆಟ್‌ ಕೊಡಿ ಎಂದು ಮನವಿ ಮಾಡಿದ್ದಾರೆ. ಇದು ನನ್ನ ಅಭಿಪ್ರಾಯ ಅಲ್ಲ, ಸಮಸ್ತ ಕಾರ್ಯಕರ್ತರ ಅಭಿಪ್ರಾಯ ಎಂದಿದ್ದಾರೆ. ಈ ವೇಳೆ ಪಕ್ಕದಲ್ಲೇ ಭಗವಂತ ಖೂಬಾ ಕುಳಿತಿದ್ದರು.

 

View this post on Instagram

 

A post shared by eedina.com (@eedinanews)

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಕೇಂದ್ರ ಸಚಿವರೂ ಆಗಿರುವ ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ಮುಖಂಡರೊಂದಿಗೆ ಚರ್ಚಿಸಲು ಇತ್ತೀಚೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು.

ಈ ಸಭೆಯಲ್ಲಿ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮತ್ತೆ ಟಿಕೆಟ್ ನೀಡುವುದನ್ನು ಪಕ್ಷದ ಪದಾಧಿಕಾರಿಗಳು ವಿರೋಧಿಸಿದ್ದರು. ಖೂಬಾ ಸಂಸದರಾಗಿರುವ ಬೀದರ್‌ನಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಗೆದ್ದಿದೆ. ಆದರೂ, ಬಿಜೆಪಿ ಶಾಸಕರು ಖೂಬಾಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದಾರೆ.

ಭಗವಂತ ಖೂಬಾ ಬಿಜೆಪಿ ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದರು. ಸಭೆಯಲ್ಲಿ ಖೂಬಾ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶರಣು ಸಲಗರ ಕೂಡ ಬೆಂಬಲವಾಗಿ ಮಾತನಾಡಿ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು.

ಈ ವೇಳೆ ಶಾಸಕರ ಮೇಲೆ ಕೋಪಗೊಂಡ ಖೂಬಾ, ಟಿಕೆಟ್‌ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿ ಸಭೆಯಿಂದ ಹೊರ ನಡೆದಿದ್ದರು. ಖೂಬಾ ಹೊರ ಹೋದ ಮೇಲೆ, ಈ ಬಾರಿ ಯಾರಿಗೆ ಟಿಕೆಟ್‌ ನೀಡಬೇಕೆಂದು ವಿಜಯೇಂದ್ರ ಶಾಸಕರನ್ನು ಪ್ರಶ್ನಿಸಿದ್ದಾರೆ. ಆಗ, ಯಾರಿಗೆ ಬೇಕಾದರು ಕೊಡಿ, ಆದರೆ ಖೂಬಾಗೆ ಮತ್ತೆ ಟಿಕೆಟ್‌ ಕೊಟ್ಟರೆ ನಾವು ಅವರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಶಾಸಕರು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಖೂಬಾ ವಿರುದ್ದ ಗಂಭೀರ ಆರೋಪ ಮಾಡಿದ್ದರು ಚವ್ಹಾಣ್ :

ಭಗವಂತ್‌ ಖೂಬಾ ಮತ್ತು ಪ್ರಭು ಚವ್ಹಾಣ್ ನಡುವಿನ ಕಿತ್ತಾಟ ಇಂದು ನಿನ್ನೆಯದಲ್ಲ. ಕಳೆದ ಒಂದು ವರ್ಷದಿಂದ ಈ ಇಬ್ಬರು ನಾಯಕರ ನಡುವೆ ಮುನಿಸಿದೆ. ಕಳೆದ ಆಗಸ್ಟ್‌ನಲ್ಲಿ ಬೀದರ್‌ನ ಔರಾದ್‌ ಪಟ್ಟಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖೂಬಾ ವಿರುದ್ದ ವಾಗ್ದಾಳಿ ನಡೆಸಿದ್ದ ಚವ್ಹಾಣ್, “ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ, ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಎಂದು ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಖೂಬಾ, ಪ್ರಭು ಚವ್ಹಾಣ್ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ವರಿಷ್ಠರು ಅನುಮತಿ ನೀಡಿದರೆ ಅವರ ವಿರುದ್ಧ 100 ಕೋಟಿ ರೂಪಾಯಿ ಮಾನಹಾನಿ ಕೇಸ್ ದಾಖಲಿಸುವೆ ಎಂದು ಹೇಳಿದ್ದರು.

ಪದ್ಮಾಕರ್ ಪಾಟೀಲ್​ಗೆ ಟಿಕೆಟ್ ನೀಡುವಂತೆ ಸಲಗರ್‌ ಮನವಿ

ಪ್ರಭು ಚವ್ಹಾಣ್ ಒಂದು ಕಡೆಯಾದರೆ ಶಾಸಕ ಶರಣು ಸಲಗರ್ ಮತ್ತೊಂದು ಕಡೆ ಖೂಬಾ ವಿರುದ್ದ ತಿರುಗಿ ಬಿದ್ದಿದ್ದಾರೆ. ಮರಾಠಾ ಸಮುದಾಯದ ಪದ್ಮಾಕರ್ ಪಾಟೀಲ್ ಕಳೆದ 25 ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ, ಮಾಜಿ‌ ಜಿಪಂ ಅಧ್ಯಕ್ಷರಾಗಿ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಟಿಕೆಟ್‌ ನೀಡಿದ್ರೆ ನಮ್ಮ ಬೆಂಬಲ ಇದೆ ಎಂದು ಸಲಗರ್ ಈ ಹಿಂದೆ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು.

ಇದನ್ನೂ : ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...