Homeಕರ್ನಾಟಕಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

ಬೀದರ್ ಬಿಜೆಪಿಯಲ್ಲಿ ಭಿನ್ನಮತ: ಭಗವಂತ ಖೂಬಾಗೆ ಟಿಕೆಟ್‌ ನೀಡದಂತೆ ವಿಜಯೇಂದ್ರ ಕಾಲಿಗೆ ಬಿದ್ದ ಪ್ರಭು ಚವ್ಹಾಣ್!

- Advertisement -
- Advertisement -

ಬೀದರ್ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಸೋಮವಾರ ನಡೆದ ಜಿಲ್ಲಾ​ ಬಿಜೆಪಿ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಉತ್ತಮ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ಪ್ರಭು ಚವ್ಹಾಣ್ ವೇದಿಕೆಯಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾಲಿಗೆ ಬಿದ್ದಿದ್ದಾರೆ. ಈ ಮೂಲಕ ಹಾಲಿ ಸಂಸದ ಭಗವಂತ ಖೂಬಾಗೆ ಟಿಕೆಟ್ ನೀಡದಂತೆ ಪರೋಕ್ಷವಾಗಿ ಮನವಿ ಮಾಡಿದ್ದಾರೆ.

ವಿಜಯೇಂದ್ರ ಸೇರಿದಂತೆ ಬಿಜೆಪಿ ರಾಜ್ಯ ಮತ್ತು ಜಿಲ್ಲಾ ನಾಯಕರು ವೇದಿಕೆಯಲ್ಲಿ ಕುಳಿತಿದ್ದ ವೇಳೆ, ಭಾಷಣ ಪೀಠದಿಂದ ನೇರವಾಗಿ ಬಂದು ಪ್ರಭು ಚವ್ಹಾಣ್ ಸಾಷ್ಟಾಂಗವೆರಗಿದ್ದಾರೆ. ದಯವಿಟ್ಟು ಸಾಮಾನ್ಯ ಕಾರ್ಯಕರ್ತನಿಗೆ, ಉತ್ತಮ ಅಭ್ಯರ್ಥಿಗೆ ಈ ಬಾರಿಯ ಬೀದರ್‌ ಲೋಕಸಭೆ ಕ್ಷೇತ್ರದ ಟಿಕೆಟ್‌ ಕೊಡಿ ಎಂದು ಮನವಿ ಮಾಡಿದ್ದಾರೆ. ಇದು ನನ್ನ ಅಭಿಪ್ರಾಯ ಅಲ್ಲ, ಸಮಸ್ತ ಕಾರ್ಯಕರ್ತರ ಅಭಿಪ್ರಾಯ ಎಂದಿದ್ದಾರೆ. ಈ ವೇಳೆ ಪಕ್ಕದಲ್ಲೇ ಭಗವಂತ ಖೂಬಾ ಕುಳಿತಿದ್ದರು.

 

View this post on Instagram

 

A post shared by eedina.com (@eedinanews)

ಕೊಪ್ಪಳ ಸಂಸದ ಸಂಗಣ್ಣ ಕರಡಿ ಹಾಗೂ ಕೇಂದ್ರ ಸಚಿವರೂ ಆಗಿರುವ ಬೀದರ್ ಸಂಸದ ಭಗವಂತ ಖೂಬಾ ಅವರಿಗೆ ಮರು ಟಿಕೆಟ್ ನೀಡುವುದನ್ನು ವಿರೋಧಿಸುತ್ತಿರುವ ಪಕ್ಷದ ಮುಖಂಡರೊಂದಿಗೆ ಚರ್ಚಿಸಲು ಇತ್ತೀಚೆಗೆ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲಾಗಿತ್ತು.

ಈ ಸಭೆಯಲ್ಲಿ ಕರಡಿ ಸಂಗಣ್ಣ ಅವರಿಗೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಮತ್ತೆ ಟಿಕೆಟ್ ನೀಡುವುದನ್ನು ಪಕ್ಷದ ಪದಾಧಿಕಾರಿಗಳು ವಿರೋಧಿಸಿದ್ದರು. ಖೂಬಾ ಸಂಸದರಾಗಿರುವ ಬೀದರ್‌ನಲ್ಲಿ ಆರು ವಿಧಾನಸಭಾ ಕ್ಷೇತ್ರಗಳ ಪೈಕಿ ನಾಲ್ಕರಲ್ಲಿ ಬಿಜೆಪಿ ಗೆದ್ದಿದೆ. ಆದರೂ, ಬಿಜೆಪಿ ಶಾಸಕರು ಖೂಬಾಗೆ ಟಿಕೆಟ್ ನೀಡುವುದನ್ನು ವಿರೋಧಿಸಿದ್ದಾರೆ.

ಭಗವಂತ ಖೂಬಾ ಬಿಜೆಪಿ ಪಕ್ಷದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮಯದಲ್ಲಿ ನಮ್ಮ ಭವಿಷ್ಯ ಹಾಳುಮಾಡುವ ಪ್ರಯತ್ನ ನಡೆಸಿದ್ದರು ಎಂದು ಶಾಸಕರು ಗಂಭೀರ ಆರೋಪ ಮಾಡಿದ್ದರು. ಸಭೆಯಲ್ಲಿ ಖೂಬಾ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದ ಮಾಜಿ ಸಚಿವ ಪ್ರಭು ಚವ್ಹಾಣ್‌ಗೆ ಶರಣು ಸಲಗರ ಕೂಡ ಬೆಂಬಲವಾಗಿ ಮಾತನಾಡಿ ಖೂಬಾ ಅವರಿಗೆ ಟಿಕೆಟ್ ನೀಡದಂತೆ ಆಗ್ರಹಿಸಿದ್ದರು.

ಈ ವೇಳೆ ಶಾಸಕರ ಮೇಲೆ ಕೋಪಗೊಂಡ ಖೂಬಾ, ಟಿಕೆಟ್‌ ಕೊಡುವುದು ಹೈಕಮಾಂಡ್‌ಗೆ ಬಿಟ್ಟ ವಿಚಾರ ಎಂದು ಹೇಳಿ ಸಭೆಯಿಂದ ಹೊರ ನಡೆದಿದ್ದರು. ಖೂಬಾ ಹೊರ ಹೋದ ಮೇಲೆ, ಈ ಬಾರಿ ಯಾರಿಗೆ ಟಿಕೆಟ್‌ ನೀಡಬೇಕೆಂದು ವಿಜಯೇಂದ್ರ ಶಾಸಕರನ್ನು ಪ್ರಶ್ನಿಸಿದ್ದಾರೆ. ಆಗ, ಯಾರಿಗೆ ಬೇಕಾದರು ಕೊಡಿ, ಆದರೆ ಖೂಬಾಗೆ ಮತ್ತೆ ಟಿಕೆಟ್‌ ಕೊಟ್ಟರೆ ನಾವು ಅವರ ಪರವಾಗಿ ಕೆಲಸ ಮಾಡುವುದಿಲ್ಲ ಎಂದು ಶಾಸಕರು ಹೇಳಿದ್ದಾಗಿ ವರದಿಗಳು ತಿಳಿಸಿವೆ.

ಖೂಬಾ ವಿರುದ್ದ ಗಂಭೀರ ಆರೋಪ ಮಾಡಿದ್ದರು ಚವ್ಹಾಣ್ :

ಭಗವಂತ್‌ ಖೂಬಾ ಮತ್ತು ಪ್ರಭು ಚವ್ಹಾಣ್ ನಡುವಿನ ಕಿತ್ತಾಟ ಇಂದು ನಿನ್ನೆಯದಲ್ಲ. ಕಳೆದ ಒಂದು ವರ್ಷದಿಂದ ಈ ಇಬ್ಬರು ನಾಯಕರ ನಡುವೆ ಮುನಿಸಿದೆ. ಕಳೆದ ಆಗಸ್ಟ್‌ನಲ್ಲಿ ಬೀದರ್‌ನ ಔರಾದ್‌ ಪಟ್ಟಣದಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಖೂಬಾ ವಿರುದ್ದ ವಾಗ್ದಾಳಿ ನಡೆಸಿದ್ದ ಚವ್ಹಾಣ್, “ಕೇಂದ್ರ ಸಚಿವ ಭಗವಂತ ಖೂಬಾ ನನ್ನನ್ನು ಸೋಲಿಸಲು ಸಾಕಷ್ಟು ಪ್ರಯತ್ನ ಮಾಡಿದ್ದರು. ಆದರೆ, ಅವರ ಪ್ರಯತ್ನ ವಿಫಲವಾಗಿದ್ದರಿಂದ ಈಗ ತಾನು ಸಾಕಿದ ಗೂಂಡಾಗಳಿಂದ ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಎಂದು ಗಂಭೀರ ಆರೋಪ ಮಾಡಿದ್ದರು.

ಇದಕ್ಕೆ ತಿರುಗೇಟು ನೀಡಿದ್ದ ಖೂಬಾ, ಪ್ರಭು ಚವ್ಹಾಣ್ ಮಾಡಿರುವ ಆರೋಪಗಳಲ್ಲಿ ಹುರುಳಿಲ್ಲ. ವರಿಷ್ಠರು ಅನುಮತಿ ನೀಡಿದರೆ ಅವರ ವಿರುದ್ಧ 100 ಕೋಟಿ ರೂಪಾಯಿ ಮಾನಹಾನಿ ಕೇಸ್ ದಾಖಲಿಸುವೆ ಎಂದು ಹೇಳಿದ್ದರು.

ಪದ್ಮಾಕರ್ ಪಾಟೀಲ್​ಗೆ ಟಿಕೆಟ್ ನೀಡುವಂತೆ ಸಲಗರ್‌ ಮನವಿ

ಪ್ರಭು ಚವ್ಹಾಣ್ ಒಂದು ಕಡೆಯಾದರೆ ಶಾಸಕ ಶರಣು ಸಲಗರ್ ಮತ್ತೊಂದು ಕಡೆ ಖೂಬಾ ವಿರುದ್ದ ತಿರುಗಿ ಬಿದ್ದಿದ್ದಾರೆ. ಮರಾಠಾ ಸಮುದಾಯದ ಪದ್ಮಾಕರ್ ಪಾಟೀಲ್ ಕಳೆದ 25 ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ, ಮಾಜಿ‌ ಜಿಪಂ ಅಧ್ಯಕ್ಷರಾಗಿ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಟಿಕೆಟ್‌ ನೀಡಿದ್ರೆ ನಮ್ಮ ಬೆಂಬಲ ಇದೆ ಎಂದು ಸಲಗರ್ ಈ ಹಿಂದೆ ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದರು.

ಇದನ್ನೂ : ಮೈಸೂರು: ಅಂಬೇಡ್ಕರ್‌ ನಾಮಫಲಕ ಅಳವಡಿಕೆ ವಿಚಾರದಲ್ಲಿ ಘರ್ಷಣೆ: 30ಕ್ಕೂ ಅಧಿಕ ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...