Homeಕರ್ನಾಟಕಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

- Advertisement -
- Advertisement -

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಪ್ರಜಾಪ್ರಭುತ್ವದ ಸಾವಿಗೆ ಈ ಟಿಕೆಟ್ ನೀಡಿರುವುದು ಮುನ್ನಡಿಯಾಗಿದೆ. ಕೋರೊನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. 40 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ. ಆದರೂ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಒಬ್ಬ ಸಾಮಾನ್ಯ ವ್ಯಕ್ತಿ ಮೇಲೆ ಸೋತ ವ್ಯಕ್ತಿಗೆ, ಟ್ಯೂಷನ್ ಟೀಚರ್ ವಿರುದ್ಧ ಸೋತ ವ್ಯಕ್ತಿಗೆ ಏಕೆ ಟಿಕೆಟ್ ನೀಡಿದರು ಎನ್ನುವುದೇ ಆಶ್ವರ್ಯ. ರಾಜ್ಯದ ಕೆಲವು ಬಿಜೆಪಿ ನಾಯಕರಿಗೆ ಸಹಾಯ ಮಾಡಿರುವ ಕಾರಣ ಟಿಕೆಟ್ ದೊರೆತಿದೆ. ಹಿರಿಯ ನಾಯಕರಿಗೆ ಸೂರ್ಯ ನಮಸ್ಕಾರ, ಶವಾಸನ, ಕಪಾಲಿಪಾತಿ, ಧೀರ್ಘ ದಂಡ ನಮಸ್ಕಾರ ಈ ರೀತಿಯ ಸೇವೆಯನ್ನು ಮಾಡಿರುವ ಕಾರಣ ಟಿಕೆಟ್ ಸಿಕ್ಕಿರಬಹುದು ಎಂದು ಹೇಳಿದ್ದಾರೆ.

ಸಾಮಾನ್ಯ ಮನುಷ್ಯನಾದ ನಾನು ನನ್ನ ಎಲ್ಲಾ ವ್ಯವಹಾರ, ಗಳಿಕೆ, ಖರ್ಚು ಸೇರಿದಂತೆ ನನ್ನ ಸಂಪೂರ್ಣ ಆದಾಯದ ಬಗ್ಗೆ ನಾಳೆಯೇ ಲೆಕ್ಕ ನೀಡಲು ಸಿದ್ದನಿದ್ದೇನೆ. ನೀವು ನನ್ನ ಮೇಲೆ ಐಟಿ, ಇಡಿ ಬಿಡುವ ಪ್ರಮೇಯವೇ ಬೇಡ. ನೀವು ಪ್ರಾಮಾಣಿಕರಾಗಿದ್ದರೆ ನಿಮ್ಮ ಆದಾಯದ ಮೂಲವನ್ನು ಘೋಷಣೆ ಮಾಡುತ್ತೀರಾ. ನಿಮಗೆ ಆ ಧೈರ್ಯ ಇದೆಯೇ? ಸಂಸತ್ತು ಘನತೆಯನ್ನು ಹೊಂದಿರುವ ಸ್ಥಳ, ಅಲ್ಲಿಗೆ ನಿಮ್ಮನ್ನು ನಾವು ಹೋಗಲು ಬಿಡುವುದಿಲ್ಲ. ಇಡೀ ಕೇಂದ್ರ ಸರ್ಕಾರವೇ ಬಂದು ನಿಂತುಕೊಂಡರೂ ಸುಧಾಕರ್ ಅವರು ಸಂಸತ್ತಿನ ಮೆಟ್ಟಿಲನ್ನು ತುಳಿಯಲು ಬಿಡುವುದಿಲ್ಲ. ಇದು ಆಕ್ರೋಶದ ಮಾತಲ್ಲ ಮಧ್ಯಮ ವರ್ಗದ ಹುಡುಗನೊಬ್ಬನ ಮಾತು. ಸಾರ್ವಜನಿಕ ಜೀವನದಲ್ಲಿ ನಿಮ್ಮನ್ನು ನೂರಾರು ಜನ ತೆಗಳುತ್ತಾರೆ, ಹೊಗಳುತ್ತಾರೆ ಆದನ್ನು ಸ್ವೀಕರಿಸುವ ಮನೋಭಾವ ಇರಬೇಕು. ನನಗೂ ಸಹ ಅನೇಕ ಜನ ಕೆಟ್ಟದಾಗಿ ಬೈಯ್ಯುತ್ತಾರೆ. ಆದರೆ ನಾನು ಅದನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಮೇಲೆ 22 ಪ್ರಕರಣ ದಾಖಲಿಸಿದರು. 10 ಸಾವಿರ ಜನ ಬಂದು ನನ್ನನ್ನು ಬಿಡುಗಡೆ ಮಾಡಿಸಿದರು. ನನ್ನ ಮೇಲೆ ಇಲ್ಲ ಸಲ್ಲದ ಕೇಸ್ಗಳನ್ನು ಹಾಕಿಸಿದರು. ನಾನು ಜೈಲಿನಲ್ಲೇ ಉಪವಾಸ ಸತ್ಯಾಗ್ರಹ ಮಾಡಿ ಬೇಲ್ ದೊರೆಯುವಂತೆ ಮಾಡಿಕೊಳ್ಳುತ್ತೇನೆ. ಕಾನೂನನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುವ ವ್ಯಕ್ತಿ ಅಚಾನಕ್ ಆಗಿ ಗೆದ್ದರೆ ಎಂದು ಸಾಂದರ್ಬಿಕವಾಗಿ ಹೇಳುತ್ತಿದ್ದೇನೆ. ಈ ವ್ಯಕ್ತಿ ಗೆಲ್ಲಲ್ಲ, ಗೆಲ್ಲಬಾರದು ಎಂದು ಹೇಳಿದ್ದಾರೆ.

ಸುಧಾಕರ್ ಅವರು ಗೆದ್ದರೆ ಕೇಂದ್ರದ ಬಿಜೆಪಿಯ ಮಂತ್ರಿಗಳಿಗೂ ಇವರು ಒಂದಷ್ಟು ಆಸನಗಳನ್ನು ಕಲಿಸುತ್ತಾರೆ. ಒಂದಷ್ಟು ಜನರ ಆತ್ಮ ಸಂತೋಷ, ಆತ್ಮ ತೃಪ್ತಿಗೆ ಕೆಲಸ ಮಾಡುತ್ತಾರೆ. ಇದಾದ ನಂತರ ರಾಜ್ಯದಲ್ಲಿ ವಿಜಯೇಂದ್ರ ಸೇರಿದಂತೆ ಯಾರೂ ಇರುವುದಿಲ್ಲ. ಸುಧಾಕರ್ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಅದಕ್ಕೆ ನಾನು ಹೇಳಿದೆ ಮಾನ ಇದ್ದವರು ನಷ್ಟವಾಗಿದೆ ಎಂದು ಕೇಸ್ ಹಾಕಬೇಕು ಇವರು ಏಕೆ ಹಾಕಿದರು? ಅವರಿಗೆ ಮಾನ ಇದೆ ಎಂದು ಸಾಬೀತು ಮಾಡಲಿ ನಾನು ಹೇಳಿದಂತೆ ಕೇಳುತ್ತೇನೆ.

ಕೆ. ಸುಧಾಕರ್ ವಿಚಿತ್ರವಾದ ರಾಜಕಾರಣಿ. ಬಿಜೆಪಿಯ ಕೆಲವು ನಾಯಕರು ಹೇಳಿದರು ಸುಧಾಕರ್ ತುಂಬಾ ಕ್ರಿಮಿನಲ್ ಮನುಷ್ಯ ನಿನ್ನ ಅವನು ಬಿಡುವುದಿಲ್ಲ ಎಂದು, ಆದರೆ ನಾನೇ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದೇನೆ. ಸುಧಾಕರ್ ಅವರು ಮಾಡಿದ ಭ್ರಷ್ಟಾಚಾರದ ವಿರುದ್ದ ನನ್ನ ಹೋರಾಟ. ಒಂದೇ ಒಂದು ಗಟ್ಟಿ ನಿರ್ಧಾರ ತೆಗೆದುಕೊಳ್ಳದ ವ್ಯಕ್ತಿ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಭಾಗದ ಯುವಕರು, ಜನತೆ ನನ್ನ ಮಾತನ್ನು ಗಮನವಿಟ್ಟು ಕೇಳಬೇಕು. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಿದರು ನೀವು ಬೆಂಬಲ ನೀಡಬೇಕು. ಸುಧಾಕರ್ ಗೆದ್ದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಆತ ಭ್ರಷ್ಟಾಚಾರಿ ಎಂದು ಅವರ ಪಕ್ಷದ ಯಲಹಂಕ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಅವರ ಅಹಂಕಾರದ ಬಗ್ಗೆ ಅವರ ಪಕ್ಷದ ಜನರೇ ಮಾತನಾಡುತ್ತಾರೆ. ನೀವು ನನ್ನ ವಿರುದ್ದ ಧೈರ್ಯವಾಗಿ ಮಾತನಾಡಿ ನಾನು ಕೋರ್ಟಿಗೆ ಹೋಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸಹಿಸಿಕೊಳ್ಳುವ ಶಕ್ತಿ ಇದ್ದರೆ ಮಾತ್ರ ರಾಜಕಾರಣಕ್ಕೆ ಬರಬೇಕು. ಮೆಡಿಕಲ್ ಕಾಲೇಜು, ಕ್ರಷರ್ ಸೇರಿದಂತೆ ಅನೇಕ ವಿಚಾರದಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪವಿದೆ. ನೀವು ಸಾರ್ವಜನಿಕ ಚರ್ಚೆಗೆ ಬರುವಿರಾ?ನಾನು 10 ಆಂಬ್ಯುಲೆನ್ಸ್ ಗಳನ್ನು ಉಚಿತವಾಗಿ ಜನರ ಸೇವೆಗೆ ಬಿಟ್ಟಿದ್ದೇನೆ. ತಾವು ಆರೋಗ್ಯ ಸಚಿವರಾಗಿದ್ದವರು ಏನು ಕೆಲಸ ಮಾಡಿದ್ದೀರಾ ಹೇಳಿ? ಉತ್ಸವ ಮಾಡಿ ಎಲ್ಲಾ ಸೂಪರ್ ಸ್ಟಾರ್ಗಳನ್ನು ಕರೆದುಕೊಂಡು ಬಂದಿರಿ, ಆದರೆ ಸಾಮಾನ್ಯ ಹುಡುಗನ ವಿರುದ್ದ ಸೋತು ಹೋದಿರಿ. ಸೆಲೆಬ್ರಿಟಿ ಬಂದರೆ ಮತ ಹಾಕುವ ಕಾಲ ಹೋಯಿತು ಎಂದು ಹೇಳಿದ್ದಾರೆ.

ಸುಧಾಕರ್ ಅವರು ಕುರಿ ಮೇಯಲಿ ಎಂದು ಬಿಟ್ಟಿದ್ದೇನೆ, ಅಲ್ಲಿಯ ತನಕ ನಾವು ಕಡಲೇಕಾಯಿ ತಿನ್ನುತ್ತಾ ಕುಳಿತಿರುತ್ತೇವೆಯೇ? ಕೊರೋನಾ ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ತನಿಖೆಯಿಂದ ತಪ್ಪಿಸಿಕೊಳ್ಳಲು ಯಾರ, ಯಾರ ಕಾಲಿಗೆ ಬಿದ್ದು ಕಾಪಾಡಿ ಎಂದು ಕೇಳಿಕೊಂಡಿದ್ದೀರಿ ನೆನಪಿದೆಯೇ? ನೀವು ನನಗೆ ತೊಂದರೆ ನೀಡಿದಾಗ ಎದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಭಾದೆ, ನೋವು, ಕಣ್ಣೀರು ಹೊರಗೆ ಬಂದ ಕಾರಣ ನಾನು ಶಾಸಕನಾದೆ. ಸುಧಾಕರ್ ಕಾಂಗ್ರೆಸ್‌ಗೆ ತೊಂದರೆಯಲ್ಲ, ಬಿಜೆಪಿಗೆ ತೊಂದರೆ, ಇವರು ಕೋವಿಡ್ ಹಗರಣ ಮಾಡಿದ ಕಾರಣ ಬಿಜೆಪಿ ಸೋಲು ಕಂಡಿತು. 40 ರೂಪಾಯಿ ಮಾಸ್ಕ್‌ನ್ನು 400 ರೂಪಾಯಿಗೆ ಬಿಲ್ ಮಾಡಿದ ವ್ಯಕ್ತಿ ಈತ. ಒಂದಲ್ಲ ಒಂದು ದಿನ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸುತ್ತೀರಾ ಎಂದು ನನಗೆ ಗೊತ್ತಿದೆ. ಒಂದೇ ಒಂದು ರೂಪಾಯಿ ಲಂಚ ತೆಗೆದುಕೊಂಡಿಲ್ಲ ಎಂದು ಭೋಗನಂದೀಶ್ವರ ದೇವಸ್ಥಾನದಲ್ಲಿ ಆಣೆ ಮಾಡುತ್ತೇನೆ. ಅವರು ಕೊರೋನಾ ಸಮಯದಲ್ಲಿ ಲಂಚ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ. ಆಗ ನಿಮ್ಮ ವಿರುದ್ದ ಮಾತನಾಡುವುದನ್ನೇ ನಿಲ್ಲಿಸುತ್ತೇನೆ. ಆದಾಯದ ಮೂಲ ಕೇಳಿದರೆ ಎಲ್ಲರಿಗೂ ಬೈಯ್ಯುತ್ತಾರೆ. ಜ್ಯೋತಿಷಿಗಳು ಅವರಿಗೆ ಹೇಳಿದ್ದಾರಂತೆ ಮೂರು ಬಾರಿ ಸೋಲುತ್ತೀರಿ ಎಂದು. ಈಗ ಒಂದು ಬಾರಿ ಮುಂದೆ ನನ್ನ ಮೇಲೆ ಎರಡು ಬಾರಿ ಸೋಲುತ್ತಾರೆ. ಇನ್ನು ಒಂದು ತಿಂಗಳು ನನಗೂ, ಸುಧಾಕರ್ ಅವರಿಗೆ ನಿರಂತರ ಯುದ್ದ ನಡೆಯುತ್ತದೆ. ನಾವು ಚಿಕ್ಕಬಳ್ಳಾಪುರ ಲೋಕಸಭೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಎಂದಿಗೂ ನಾಯಕ ಎಂದು ಒಪ್ಪಿಕೊಂಡಿಲ್ಲ. ದಯವಿಟ್ಟು ಗೀತಾ ಶಿವರಾಜ್ ಕುಮಾರ್ ಅವರ ಬಗ್ಗೆ ಮಾತನಾಡಬೇಡಿ. ನೀವು ನಾಯಕರಾಗಿದ್ದರೆ ನಿಮಗೆ ಮತ್ತು ಮಗನಿಗೆ ಟಿಕೆಟ್ ತಪ್ಪಿಸುತ್ತಿರಲಿಲ್ಲ. ಇಂಡಿಯಾದಲ್ಲಿ ಇರುವ ಅನೇಕ ಮೂಲಭೂತ ಸೌಕರ್ಯಗಳನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಆಸ್ಪತ್ರೆ, ಸರ್ಕಾರಿ ಶಾಲೆ, ರಸ್ತೆ ಎಲ್ಲಾ ತಂದಿದ್ದು ಕಾಂಗ್ರೆಸ್. ಕೇವಲ ತಾರಸಿ ಹಾಕಿ 10 ವರ್ಷದಲ್ಲಿ ನಾವೇ ಮಾಡಿದ್ದೇವೆ ಎಂದು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಇಂದಿರಾ ಗಾಂಧಿ ಅವರನ್ನು ದುರ್ಗೆ ಎಂದು ಕರೆದಿದ್ದಾರೆ. 2013ರಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಮಲ ಭಾರತ್ ಅಭಿಯಾನ ತಂದರೆ ಬಿಜೆಪಿಯವರು ಅದನ್ನೇ ಸ್ವಚ್ಚ ಭಾರತ್ ಎನ್ನುತ್ತಾರೆ. ಭೇಟಿ ಬಚಾವೋ, ನಗರ ಮನೆ ನಿರ್ಮಾಣ ಯೋಜನೆ, ಜನೌಷಧಿ ಯೋಜನೆ, ಈ- ಆಡಳಿತ ಯೋಜನೆಗಳನ್ನು ಹೆಸರು ಬದಲಾಯಿಸಿ ಜನರ ಮುಂದೆ ತಂದಿದ್ದಾರೆ. 60 ಲಕ್ಷ ಸಣ್ಣ ಕೈಗಾರಿಕೆಗಳನ್ನು ಮುಚ್ಚಿ ಹಾಕಿದ್ದು ಬಿಜೆಪಿ. ಬಿಜೆಪಿಯವರು ಯಾವುದೇ ಚರ್ಚೆಗೆ ಬರುವುದಿಲ್ಲ, ಕಷ್ಟಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...