Homeಕರ್ನಾಟಕಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

- Advertisement -
- Advertisement -

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಪ್ರಜಾಪ್ರಭುತ್ವದ ಸಾವಿಗೆ ಈ ಟಿಕೆಟ್ ನೀಡಿರುವುದು ಮುನ್ನಡಿಯಾಗಿದೆ. ಕೋರೊನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. 40 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ. ಆದರೂ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಒಬ್ಬ ಸಾಮಾನ್ಯ ವ್ಯಕ್ತಿ ಮೇಲೆ ಸೋತ ವ್ಯಕ್ತಿಗೆ, ಟ್ಯೂಷನ್ ಟೀಚರ್ ವಿರುದ್ಧ ಸೋತ ವ್ಯಕ್ತಿಗೆ ಏಕೆ ಟಿಕೆಟ್ ನೀಡಿದರು ಎನ್ನುವುದೇ ಆಶ್ವರ್ಯ. ರಾಜ್ಯದ ಕೆಲವು ಬಿಜೆಪಿ ನಾಯಕರಿಗೆ ಸಹಾಯ ಮಾಡಿರುವ ಕಾರಣ ಟಿಕೆಟ್ ದೊರೆತಿದೆ. ಹಿರಿಯ ನಾಯಕರಿಗೆ ಸೂರ್ಯ ನಮಸ್ಕಾರ, ಶವಾಸನ, ಕಪಾಲಿಪಾತಿ, ಧೀರ್ಘ ದಂಡ ನಮಸ್ಕಾರ ಈ ರೀತಿಯ ಸೇವೆಯನ್ನು ಮಾಡಿರುವ ಕಾರಣ ಟಿಕೆಟ್ ಸಿಕ್ಕಿರಬಹುದು ಎಂದು ಹೇಳಿದ್ದಾರೆ.

ಸಾಮಾನ್ಯ ಮನುಷ್ಯನಾದ ನಾನು ನನ್ನ ಎಲ್ಲಾ ವ್ಯವಹಾರ, ಗಳಿಕೆ, ಖರ್ಚು ಸೇರಿದಂತೆ ನನ್ನ ಸಂಪೂರ್ಣ ಆದಾಯದ ಬಗ್ಗೆ ನಾಳೆಯೇ ಲೆಕ್ಕ ನೀಡಲು ಸಿದ್ದನಿದ್ದೇನೆ. ನೀವು ನನ್ನ ಮೇಲೆ ಐಟಿ, ಇಡಿ ಬಿಡುವ ಪ್ರಮೇಯವೇ ಬೇಡ. ನೀವು ಪ್ರಾಮಾಣಿಕರಾಗಿದ್ದರೆ ನಿಮ್ಮ ಆದಾಯದ ಮೂಲವನ್ನು ಘೋಷಣೆ ಮಾಡುತ್ತೀರಾ. ನಿಮಗೆ ಆ ಧೈರ್ಯ ಇದೆಯೇ? ಸಂಸತ್ತು ಘನತೆಯನ್ನು ಹೊಂದಿರುವ ಸ್ಥಳ, ಅಲ್ಲಿಗೆ ನಿಮ್ಮನ್ನು ನಾವು ಹೋಗಲು ಬಿಡುವುದಿಲ್ಲ. ಇಡೀ ಕೇಂದ್ರ ಸರ್ಕಾರವೇ ಬಂದು ನಿಂತುಕೊಂಡರೂ ಸುಧಾಕರ್ ಅವರು ಸಂಸತ್ತಿನ ಮೆಟ್ಟಿಲನ್ನು ತುಳಿಯಲು ಬಿಡುವುದಿಲ್ಲ. ಇದು ಆಕ್ರೋಶದ ಮಾತಲ್ಲ ಮಧ್ಯಮ ವರ್ಗದ ಹುಡುಗನೊಬ್ಬನ ಮಾತು. ಸಾರ್ವಜನಿಕ ಜೀವನದಲ್ಲಿ ನಿಮ್ಮನ್ನು ನೂರಾರು ಜನ ತೆಗಳುತ್ತಾರೆ, ಹೊಗಳುತ್ತಾರೆ ಆದನ್ನು ಸ್ವೀಕರಿಸುವ ಮನೋಭಾವ ಇರಬೇಕು. ನನಗೂ ಸಹ ಅನೇಕ ಜನ ಕೆಟ್ಟದಾಗಿ ಬೈಯ್ಯುತ್ತಾರೆ. ಆದರೆ ನಾನು ಅದನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಮೇಲೆ 22 ಪ್ರಕರಣ ದಾಖಲಿಸಿದರು. 10 ಸಾವಿರ ಜನ ಬಂದು ನನ್ನನ್ನು ಬಿಡುಗಡೆ ಮಾಡಿಸಿದರು. ನನ್ನ ಮೇಲೆ ಇಲ್ಲ ಸಲ್ಲದ ಕೇಸ್ಗಳನ್ನು ಹಾಕಿಸಿದರು. ನಾನು ಜೈಲಿನಲ್ಲೇ ಉಪವಾಸ ಸತ್ಯಾಗ್ರಹ ಮಾಡಿ ಬೇಲ್ ದೊರೆಯುವಂತೆ ಮಾಡಿಕೊಳ್ಳುತ್ತೇನೆ. ಕಾನೂನನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುವ ವ್ಯಕ್ತಿ ಅಚಾನಕ್ ಆಗಿ ಗೆದ್ದರೆ ಎಂದು ಸಾಂದರ್ಬಿಕವಾಗಿ ಹೇಳುತ್ತಿದ್ದೇನೆ. ಈ ವ್ಯಕ್ತಿ ಗೆಲ್ಲಲ್ಲ, ಗೆಲ್ಲಬಾರದು ಎಂದು ಹೇಳಿದ್ದಾರೆ.

ಸುಧಾಕರ್ ಅವರು ಗೆದ್ದರೆ ಕೇಂದ್ರದ ಬಿಜೆಪಿಯ ಮಂತ್ರಿಗಳಿಗೂ ಇವರು ಒಂದಷ್ಟು ಆಸನಗಳನ್ನು ಕಲಿಸುತ್ತಾರೆ. ಒಂದಷ್ಟು ಜನರ ಆತ್ಮ ಸಂತೋಷ, ಆತ್ಮ ತೃಪ್ತಿಗೆ ಕೆಲಸ ಮಾಡುತ್ತಾರೆ. ಇದಾದ ನಂತರ ರಾಜ್ಯದಲ್ಲಿ ವಿಜಯೇಂದ್ರ ಸೇರಿದಂತೆ ಯಾರೂ ಇರುವುದಿಲ್ಲ. ಸುಧಾಕರ್ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಅದಕ್ಕೆ ನಾನು ಹೇಳಿದೆ ಮಾನ ಇದ್ದವರು ನಷ್ಟವಾಗಿದೆ ಎಂದು ಕೇಸ್ ಹಾಕಬೇಕು ಇವರು ಏಕೆ ಹಾಕಿದರು? ಅವರಿಗೆ ಮಾನ ಇದೆ ಎಂದು ಸಾಬೀತು ಮಾಡಲಿ ನಾನು ಹೇಳಿದಂತೆ ಕೇಳುತ್ತೇನೆ.

ಕೆ. ಸುಧಾಕರ್ ವಿಚಿತ್ರವಾದ ರಾಜಕಾರಣಿ. ಬಿಜೆಪಿಯ ಕೆಲವು ನಾಯಕರು ಹೇಳಿದರು ಸುಧಾಕರ್ ತುಂಬಾ ಕ್ರಿಮಿನಲ್ ಮನುಷ್ಯ ನಿನ್ನ ಅವನು ಬಿಡುವುದಿಲ್ಲ ಎಂದು, ಆದರೆ ನಾನೇ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದೇನೆ. ಸುಧಾಕರ್ ಅವರು ಮಾಡಿದ ಭ್ರಷ್ಟಾಚಾರದ ವಿರುದ್ದ ನನ್ನ ಹೋರಾಟ. ಒಂದೇ ಒಂದು ಗಟ್ಟಿ ನಿರ್ಧಾರ ತೆಗೆದುಕೊಳ್ಳದ ವ್ಯಕ್ತಿ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಭಾಗದ ಯುವಕರು, ಜನತೆ ನನ್ನ ಮಾತನ್ನು ಗಮನವಿಟ್ಟು ಕೇಳಬೇಕು. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಿದರು ನೀವು ಬೆಂಬಲ ನೀಡಬೇಕು. ಸುಧಾಕರ್ ಗೆದ್ದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಆತ ಭ್ರಷ್ಟಾಚಾರಿ ಎಂದು ಅವರ ಪಕ್ಷದ ಯಲಹಂಕ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಅವರ ಅಹಂಕಾರದ ಬಗ್ಗೆ ಅವರ ಪಕ್ಷದ ಜನರೇ ಮಾತನಾಡುತ್ತಾರೆ. ನೀವು ನನ್ನ ವಿರುದ್ದ ಧೈರ್ಯವಾಗಿ ಮಾತನಾಡಿ ನಾನು ಕೋರ್ಟಿಗೆ ಹೋಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸಹಿಸಿಕೊಳ್ಳುವ ಶಕ್ತಿ ಇದ್ದರೆ ಮಾತ್ರ ರಾಜಕಾರಣಕ್ಕೆ ಬರಬೇಕು. ಮೆಡಿಕಲ್ ಕಾಲೇಜು, ಕ್ರಷರ್ ಸೇರಿದಂತೆ ಅನೇಕ ವಿಚಾರದಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪವಿದೆ. ನೀವು ಸಾರ್ವಜನಿಕ ಚರ್ಚೆಗೆ ಬರುವಿರಾ?ನಾನು 10 ಆಂಬ್ಯುಲೆನ್ಸ್ ಗಳನ್ನು ಉಚಿತವಾಗಿ ಜನರ ಸೇವೆಗೆ ಬಿಟ್ಟಿದ್ದೇನೆ. ತಾವು ಆರೋಗ್ಯ ಸಚಿವರಾಗಿದ್ದವರು ಏನು ಕೆಲಸ ಮಾಡಿದ್ದೀರಾ ಹೇಳಿ? ಉತ್ಸವ ಮಾಡಿ ಎಲ್ಲಾ ಸೂಪರ್ ಸ್ಟಾರ್ಗಳನ್ನು ಕರೆದುಕೊಂಡು ಬಂದಿರಿ, ಆದರೆ ಸಾಮಾನ್ಯ ಹುಡುಗನ ವಿರುದ್ದ ಸೋತು ಹೋದಿರಿ. ಸೆಲೆಬ್ರಿಟಿ ಬಂದರೆ ಮತ ಹಾಕುವ ಕಾಲ ಹೋಯಿತು ಎಂದು ಹೇಳಿದ್ದಾರೆ.

ಸುಧಾಕರ್ ಅವರು ಕುರಿ ಮೇಯಲಿ ಎಂದು ಬಿಟ್ಟಿದ್ದೇನೆ, ಅಲ್ಲಿಯ ತನಕ ನಾವು ಕಡಲೇಕಾಯಿ ತಿನ್ನುತ್ತಾ ಕುಳಿತಿರುತ್ತೇವೆಯೇ? ಕೊರೋನಾ ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ತನಿಖೆಯಿಂದ ತಪ್ಪಿಸಿಕೊಳ್ಳಲು ಯಾರ, ಯಾರ ಕಾಲಿಗೆ ಬಿದ್ದು ಕಾಪಾಡಿ ಎಂದು ಕೇಳಿಕೊಂಡಿದ್ದೀರಿ ನೆನಪಿದೆಯೇ? ನೀವು ನನಗೆ ತೊಂದರೆ ನೀಡಿದಾಗ ಎದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಭಾದೆ, ನೋವು, ಕಣ್ಣೀರು ಹೊರಗೆ ಬಂದ ಕಾರಣ ನಾನು ಶಾಸಕನಾದೆ. ಸುಧಾಕರ್ ಕಾಂಗ್ರೆಸ್‌ಗೆ ತೊಂದರೆಯಲ್ಲ, ಬಿಜೆಪಿಗೆ ತೊಂದರೆ, ಇವರು ಕೋವಿಡ್ ಹಗರಣ ಮಾಡಿದ ಕಾರಣ ಬಿಜೆಪಿ ಸೋಲು ಕಂಡಿತು. 40 ರೂಪಾಯಿ ಮಾಸ್ಕ್‌ನ್ನು 400 ರೂಪಾಯಿಗೆ ಬಿಲ್ ಮಾಡಿದ ವ್ಯಕ್ತಿ ಈತ. ಒಂದಲ್ಲ ಒಂದು ದಿನ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸುತ್ತೀರಾ ಎಂದು ನನಗೆ ಗೊತ್ತಿದೆ. ಒಂದೇ ಒಂದು ರೂಪಾಯಿ ಲಂಚ ತೆಗೆದುಕೊಂಡಿಲ್ಲ ಎಂದು ಭೋಗನಂದೀಶ್ವರ ದೇವಸ್ಥಾನದಲ್ಲಿ ಆಣೆ ಮಾಡುತ್ತೇನೆ. ಅವರು ಕೊರೋನಾ ಸಮಯದಲ್ಲಿ ಲಂಚ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ. ಆಗ ನಿಮ್ಮ ವಿರುದ್ದ ಮಾತನಾಡುವುದನ್ನೇ ನಿಲ್ಲಿಸುತ್ತೇನೆ. ಆದಾಯದ ಮೂಲ ಕೇಳಿದರೆ ಎಲ್ಲರಿಗೂ ಬೈಯ್ಯುತ್ತಾರೆ. ಜ್ಯೋತಿಷಿಗಳು ಅವರಿಗೆ ಹೇಳಿದ್ದಾರಂತೆ ಮೂರು ಬಾರಿ ಸೋಲುತ್ತೀರಿ ಎಂದು. ಈಗ ಒಂದು ಬಾರಿ ಮುಂದೆ ನನ್ನ ಮೇಲೆ ಎರಡು ಬಾರಿ ಸೋಲುತ್ತಾರೆ. ಇನ್ನು ಒಂದು ತಿಂಗಳು ನನಗೂ, ಸುಧಾಕರ್ ಅವರಿಗೆ ನಿರಂತರ ಯುದ್ದ ನಡೆಯುತ್ತದೆ. ನಾವು ಚಿಕ್ಕಬಳ್ಳಾಪುರ ಲೋಕಸಭೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಎಂದಿಗೂ ನಾಯಕ ಎಂದು ಒಪ್ಪಿಕೊಂಡಿಲ್ಲ. ದಯವಿಟ್ಟು ಗೀತಾ ಶಿವರಾಜ್ ಕುಮಾರ್ ಅವರ ಬಗ್ಗೆ ಮಾತನಾಡಬೇಡಿ. ನೀವು ನಾಯಕರಾಗಿದ್ದರೆ ನಿಮಗೆ ಮತ್ತು ಮಗನಿಗೆ ಟಿಕೆಟ್ ತಪ್ಪಿಸುತ್ತಿರಲಿಲ್ಲ. ಇಂಡಿಯಾದಲ್ಲಿ ಇರುವ ಅನೇಕ ಮೂಲಭೂತ ಸೌಕರ್ಯಗಳನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಆಸ್ಪತ್ರೆ, ಸರ್ಕಾರಿ ಶಾಲೆ, ರಸ್ತೆ ಎಲ್ಲಾ ತಂದಿದ್ದು ಕಾಂಗ್ರೆಸ್. ಕೇವಲ ತಾರಸಿ ಹಾಕಿ 10 ವರ್ಷದಲ್ಲಿ ನಾವೇ ಮಾಡಿದ್ದೇವೆ ಎಂದು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಇಂದಿರಾ ಗಾಂಧಿ ಅವರನ್ನು ದುರ್ಗೆ ಎಂದು ಕರೆದಿದ್ದಾರೆ. 2013ರಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಮಲ ಭಾರತ್ ಅಭಿಯಾನ ತಂದರೆ ಬಿಜೆಪಿಯವರು ಅದನ್ನೇ ಸ್ವಚ್ಚ ಭಾರತ್ ಎನ್ನುತ್ತಾರೆ. ಭೇಟಿ ಬಚಾವೋ, ನಗರ ಮನೆ ನಿರ್ಮಾಣ ಯೋಜನೆ, ಜನೌಷಧಿ ಯೋಜನೆ, ಈ- ಆಡಳಿತ ಯೋಜನೆಗಳನ್ನು ಹೆಸರು ಬದಲಾಯಿಸಿ ಜನರ ಮುಂದೆ ತಂದಿದ್ದಾರೆ. 60 ಲಕ್ಷ ಸಣ್ಣ ಕೈಗಾರಿಕೆಗಳನ್ನು ಮುಚ್ಚಿ ಹಾಕಿದ್ದು ಬಿಜೆಪಿ. ಬಿಜೆಪಿಯವರು ಯಾವುದೇ ಚರ್ಚೆಗೆ ಬರುವುದಿಲ್ಲ, ಕಷ್ಟಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...