Homeಕರ್ನಾಟಕಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

ಡಾ.ಕೆ.ಸುಧಾಕರ್‌ಗೆ ಬಿಜೆಪಿ ಟಿಕೆಟ್‌ ನೀಡಿರುವುದು ಪ್ರಜಾಪ್ರಭುತ್ವದ ಸಾವಿಗೆ ಮುನ್ನಡಿ: ಪ್ರದೀಪ್ ಈಶ್ವರ್ ವಾಗ್ದಾಳಿ

- Advertisement -
- Advertisement -

ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಬಿಜೆಪಿಯವರು ಲೋಕಸಭೆ ಟಿಕೆಟ್ ನೀಡಿದ್ದಾರೆ. ಪ್ರಜಾಪ್ರಭುತ್ವದ ಸಾವಿಗೆ ಈ ಟಿಕೆಟ್ ನೀಡಿರುವುದು ಮುನ್ನಡಿಯಾಗಿದೆ. ಕೋರೊನಾ ಸಮಯದಲ್ಲಿ 2200 ಕೋಟಿ ಹಗರಣ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. 40 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿಯ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ. ಆದರೂ ಬಿಜೆಪಿ ಅವರಿಗೆ ಟಿಕೆಟ್ ನೀಡಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ಒಬ್ಬ ಸಾಮಾನ್ಯ ವ್ಯಕ್ತಿ ಮೇಲೆ ಸೋತ ವ್ಯಕ್ತಿಗೆ, ಟ್ಯೂಷನ್ ಟೀಚರ್ ವಿರುದ್ಧ ಸೋತ ವ್ಯಕ್ತಿಗೆ ಏಕೆ ಟಿಕೆಟ್ ನೀಡಿದರು ಎನ್ನುವುದೇ ಆಶ್ವರ್ಯ. ರಾಜ್ಯದ ಕೆಲವು ಬಿಜೆಪಿ ನಾಯಕರಿಗೆ ಸಹಾಯ ಮಾಡಿರುವ ಕಾರಣ ಟಿಕೆಟ್ ದೊರೆತಿದೆ. ಹಿರಿಯ ನಾಯಕರಿಗೆ ಸೂರ್ಯ ನಮಸ್ಕಾರ, ಶವಾಸನ, ಕಪಾಲಿಪಾತಿ, ಧೀರ್ಘ ದಂಡ ನಮಸ್ಕಾರ ಈ ರೀತಿಯ ಸೇವೆಯನ್ನು ಮಾಡಿರುವ ಕಾರಣ ಟಿಕೆಟ್ ಸಿಕ್ಕಿರಬಹುದು ಎಂದು ಹೇಳಿದ್ದಾರೆ.

ಸಾಮಾನ್ಯ ಮನುಷ್ಯನಾದ ನಾನು ನನ್ನ ಎಲ್ಲಾ ವ್ಯವಹಾರ, ಗಳಿಕೆ, ಖರ್ಚು ಸೇರಿದಂತೆ ನನ್ನ ಸಂಪೂರ್ಣ ಆದಾಯದ ಬಗ್ಗೆ ನಾಳೆಯೇ ಲೆಕ್ಕ ನೀಡಲು ಸಿದ್ದನಿದ್ದೇನೆ. ನೀವು ನನ್ನ ಮೇಲೆ ಐಟಿ, ಇಡಿ ಬಿಡುವ ಪ್ರಮೇಯವೇ ಬೇಡ. ನೀವು ಪ್ರಾಮಾಣಿಕರಾಗಿದ್ದರೆ ನಿಮ್ಮ ಆದಾಯದ ಮೂಲವನ್ನು ಘೋಷಣೆ ಮಾಡುತ್ತೀರಾ. ನಿಮಗೆ ಆ ಧೈರ್ಯ ಇದೆಯೇ? ಸಂಸತ್ತು ಘನತೆಯನ್ನು ಹೊಂದಿರುವ ಸ್ಥಳ, ಅಲ್ಲಿಗೆ ನಿಮ್ಮನ್ನು ನಾವು ಹೋಗಲು ಬಿಡುವುದಿಲ್ಲ. ಇಡೀ ಕೇಂದ್ರ ಸರ್ಕಾರವೇ ಬಂದು ನಿಂತುಕೊಂಡರೂ ಸುಧಾಕರ್ ಅವರು ಸಂಸತ್ತಿನ ಮೆಟ್ಟಿಲನ್ನು ತುಳಿಯಲು ಬಿಡುವುದಿಲ್ಲ. ಇದು ಆಕ್ರೋಶದ ಮಾತಲ್ಲ ಮಧ್ಯಮ ವರ್ಗದ ಹುಡುಗನೊಬ್ಬನ ಮಾತು. ಸಾರ್ವಜನಿಕ ಜೀವನದಲ್ಲಿ ನಿಮ್ಮನ್ನು ನೂರಾರು ಜನ ತೆಗಳುತ್ತಾರೆ, ಹೊಗಳುತ್ತಾರೆ ಆದನ್ನು ಸ್ವೀಕರಿಸುವ ಮನೋಭಾವ ಇರಬೇಕು. ನನಗೂ ಸಹ ಅನೇಕ ಜನ ಕೆಟ್ಟದಾಗಿ ಬೈಯ್ಯುತ್ತಾರೆ. ಆದರೆ ನಾನು ಅದನ್ನು ಸ್ಪೂರ್ತಿಯಾಗಿ ತೆಗೆದುಕೊಳ್ಳುತ್ತೇನೆ. ನನ್ನ ಮೇಲೆ 22 ಪ್ರಕರಣ ದಾಖಲಿಸಿದರು. 10 ಸಾವಿರ ಜನ ಬಂದು ನನ್ನನ್ನು ಬಿಡುಗಡೆ ಮಾಡಿಸಿದರು. ನನ್ನ ಮೇಲೆ ಇಲ್ಲ ಸಲ್ಲದ ಕೇಸ್ಗಳನ್ನು ಹಾಕಿಸಿದರು. ನಾನು ಜೈಲಿನಲ್ಲೇ ಉಪವಾಸ ಸತ್ಯಾಗ್ರಹ ಮಾಡಿ ಬೇಲ್ ದೊರೆಯುವಂತೆ ಮಾಡಿಕೊಳ್ಳುತ್ತೇನೆ. ಕಾನೂನನ್ನು ತಮಗೆ ಬೇಕಾದಂತೆ ಬಳಸಿಕೊಳ್ಳುವ ವ್ಯಕ್ತಿ ಅಚಾನಕ್ ಆಗಿ ಗೆದ್ದರೆ ಎಂದು ಸಾಂದರ್ಬಿಕವಾಗಿ ಹೇಳುತ್ತಿದ್ದೇನೆ. ಈ ವ್ಯಕ್ತಿ ಗೆಲ್ಲಲ್ಲ, ಗೆಲ್ಲಬಾರದು ಎಂದು ಹೇಳಿದ್ದಾರೆ.

ಸುಧಾಕರ್ ಅವರು ಗೆದ್ದರೆ ಕೇಂದ್ರದ ಬಿಜೆಪಿಯ ಮಂತ್ರಿಗಳಿಗೂ ಇವರು ಒಂದಷ್ಟು ಆಸನಗಳನ್ನು ಕಲಿಸುತ್ತಾರೆ. ಒಂದಷ್ಟು ಜನರ ಆತ್ಮ ಸಂತೋಷ, ಆತ್ಮ ತೃಪ್ತಿಗೆ ಕೆಲಸ ಮಾಡುತ್ತಾರೆ. ಇದಾದ ನಂತರ ರಾಜ್ಯದಲ್ಲಿ ವಿಜಯೇಂದ್ರ ಸೇರಿದಂತೆ ಯಾರೂ ಇರುವುದಿಲ್ಲ. ಸುಧಾಕರ್ ಅವರು ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ. ಅದಕ್ಕೆ ನಾನು ಹೇಳಿದೆ ಮಾನ ಇದ್ದವರು ನಷ್ಟವಾಗಿದೆ ಎಂದು ಕೇಸ್ ಹಾಕಬೇಕು ಇವರು ಏಕೆ ಹಾಕಿದರು? ಅವರಿಗೆ ಮಾನ ಇದೆ ಎಂದು ಸಾಬೀತು ಮಾಡಲಿ ನಾನು ಹೇಳಿದಂತೆ ಕೇಳುತ್ತೇನೆ.

ಕೆ. ಸುಧಾಕರ್ ವಿಚಿತ್ರವಾದ ರಾಜಕಾರಣಿ. ಬಿಜೆಪಿಯ ಕೆಲವು ನಾಯಕರು ಹೇಳಿದರು ಸುಧಾಕರ್ ತುಂಬಾ ಕ್ರಿಮಿನಲ್ ಮನುಷ್ಯ ನಿನ್ನ ಅವನು ಬಿಡುವುದಿಲ್ಲ ಎಂದು, ಆದರೆ ನಾನೇ ಅವರನ್ನು ಬಿಡುವುದಿಲ್ಲ ಎಂದು ಹೇಳಿದ್ದೇನೆ. ಸುಧಾಕರ್ ಅವರು ಮಾಡಿದ ಭ್ರಷ್ಟಾಚಾರದ ವಿರುದ್ದ ನನ್ನ ಹೋರಾಟ. ಒಂದೇ ಒಂದು ಗಟ್ಟಿ ನಿರ್ಧಾರ ತೆಗೆದುಕೊಳ್ಳದ ವ್ಯಕ್ತಿ. ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಭಾಗದ ಯುವಕರು, ಜನತೆ ನನ್ನ ಮಾತನ್ನು ಗಮನವಿಟ್ಟು ಕೇಳಬೇಕು. ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಪಕ್ಷ ಯಾರಿಗೆ ಟಿಕೆಟ್ ನೀಡಿದರು ನೀವು ಬೆಂಬಲ ನೀಡಬೇಕು. ಸುಧಾಕರ್ ಗೆದ್ದರೆ ಜನಸಾಮಾನ್ಯರಿಗೆ ತೊಂದರೆಯಾಗುತ್ತದೆ. ಆತ ಭ್ರಷ್ಟಾಚಾರಿ ಎಂದು ಅವರ ಪಕ್ಷದ ಯಲಹಂಕ ಶಾಸಕ ವಿಶ್ವನಾಥ್ ಹೇಳಿದ್ದಾರೆ. ಅವರ ಅಹಂಕಾರದ ಬಗ್ಗೆ ಅವರ ಪಕ್ಷದ ಜನರೇ ಮಾತನಾಡುತ್ತಾರೆ. ನೀವು ನನ್ನ ವಿರುದ್ದ ಧೈರ್ಯವಾಗಿ ಮಾತನಾಡಿ ನಾನು ಕೋರ್ಟಿಗೆ ಹೋಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಸಹಿಸಿಕೊಳ್ಳುವ ಶಕ್ತಿ ಇದ್ದರೆ ಮಾತ್ರ ರಾಜಕಾರಣಕ್ಕೆ ಬರಬೇಕು. ಮೆಡಿಕಲ್ ಕಾಲೇಜು, ಕ್ರಷರ್ ಸೇರಿದಂತೆ ಅನೇಕ ವಿಚಾರದಲ್ಲಿ ಕಿಕ್ ಬ್ಯಾಕ್ ಪಡೆದ ಆರೋಪವಿದೆ. ನೀವು ಸಾರ್ವಜನಿಕ ಚರ್ಚೆಗೆ ಬರುವಿರಾ?ನಾನು 10 ಆಂಬ್ಯುಲೆನ್ಸ್ ಗಳನ್ನು ಉಚಿತವಾಗಿ ಜನರ ಸೇವೆಗೆ ಬಿಟ್ಟಿದ್ದೇನೆ. ತಾವು ಆರೋಗ್ಯ ಸಚಿವರಾಗಿದ್ದವರು ಏನು ಕೆಲಸ ಮಾಡಿದ್ದೀರಾ ಹೇಳಿ? ಉತ್ಸವ ಮಾಡಿ ಎಲ್ಲಾ ಸೂಪರ್ ಸ್ಟಾರ್ಗಳನ್ನು ಕರೆದುಕೊಂಡು ಬಂದಿರಿ, ಆದರೆ ಸಾಮಾನ್ಯ ಹುಡುಗನ ವಿರುದ್ದ ಸೋತು ಹೋದಿರಿ. ಸೆಲೆಬ್ರಿಟಿ ಬಂದರೆ ಮತ ಹಾಕುವ ಕಾಲ ಹೋಯಿತು ಎಂದು ಹೇಳಿದ್ದಾರೆ.

ಸುಧಾಕರ್ ಅವರು ಕುರಿ ಮೇಯಲಿ ಎಂದು ಬಿಟ್ಟಿದ್ದೇನೆ, ಅಲ್ಲಿಯ ತನಕ ನಾವು ಕಡಲೇಕಾಯಿ ತಿನ್ನುತ್ತಾ ಕುಳಿತಿರುತ್ತೇವೆಯೇ? ಕೊರೋನಾ ತನಿಖೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ತನಿಖೆಯಿಂದ ತಪ್ಪಿಸಿಕೊಳ್ಳಲು ಯಾರ, ಯಾರ ಕಾಲಿಗೆ ಬಿದ್ದು ಕಾಪಾಡಿ ಎಂದು ಕೇಳಿಕೊಂಡಿದ್ದೀರಿ ನೆನಪಿದೆಯೇ? ನೀವು ನನಗೆ ತೊಂದರೆ ನೀಡಿದಾಗ ಎದೆಯಲ್ಲಿ ಬಚ್ಚಿಟ್ಟುಕೊಂಡಿದ್ದ ಭಾದೆ, ನೋವು, ಕಣ್ಣೀರು ಹೊರಗೆ ಬಂದ ಕಾರಣ ನಾನು ಶಾಸಕನಾದೆ. ಸುಧಾಕರ್ ಕಾಂಗ್ರೆಸ್‌ಗೆ ತೊಂದರೆಯಲ್ಲ, ಬಿಜೆಪಿಗೆ ತೊಂದರೆ, ಇವರು ಕೋವಿಡ್ ಹಗರಣ ಮಾಡಿದ ಕಾರಣ ಬಿಜೆಪಿ ಸೋಲು ಕಂಡಿತು. 40 ರೂಪಾಯಿ ಮಾಸ್ಕ್‌ನ್ನು 400 ರೂಪಾಯಿಗೆ ಬಿಲ್ ಮಾಡಿದ ವ್ಯಕ್ತಿ ಈತ. ಒಂದಲ್ಲ ಒಂದು ದಿನ ನನ್ನ ಮೇಲೆ ಐಟಿ, ಇಡಿ ದಾಳಿ ಮಾಡಿಸುತ್ತೀರಾ ಎಂದು ನನಗೆ ಗೊತ್ತಿದೆ. ಒಂದೇ ಒಂದು ರೂಪಾಯಿ ಲಂಚ ತೆಗೆದುಕೊಂಡಿಲ್ಲ ಎಂದು ಭೋಗನಂದೀಶ್ವರ ದೇವಸ್ಥಾನದಲ್ಲಿ ಆಣೆ ಮಾಡುತ್ತೇನೆ. ಅವರು ಕೊರೋನಾ ಸಮಯದಲ್ಲಿ ಲಂಚ ತೆಗೆದುಕೊಂಡಿಲ್ಲ ಎಂದು ಪ್ರಮಾಣ ಮಾಡಲಿ. ಆಗ ನಿಮ್ಮ ವಿರುದ್ದ ಮಾತನಾಡುವುದನ್ನೇ ನಿಲ್ಲಿಸುತ್ತೇನೆ. ಆದಾಯದ ಮೂಲ ಕೇಳಿದರೆ ಎಲ್ಲರಿಗೂ ಬೈಯ್ಯುತ್ತಾರೆ. ಜ್ಯೋತಿಷಿಗಳು ಅವರಿಗೆ ಹೇಳಿದ್ದಾರಂತೆ ಮೂರು ಬಾರಿ ಸೋಲುತ್ತೀರಿ ಎಂದು. ಈಗ ಒಂದು ಬಾರಿ ಮುಂದೆ ನನ್ನ ಮೇಲೆ ಎರಡು ಬಾರಿ ಸೋಲುತ್ತಾರೆ. ಇನ್ನು ಒಂದು ತಿಂಗಳು ನನಗೂ, ಸುಧಾಕರ್ ಅವರಿಗೆ ನಿರಂತರ ಯುದ್ದ ನಡೆಯುತ್ತದೆ. ನಾವು ಚಿಕ್ಕಬಳ್ಳಾಪುರ ಲೋಕಸಭೆಯಲ್ಲಿ ಗೆದ್ದೇ ಗೆಲ್ಲುತ್ತೇವೆ. ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿ ಎಂದಿಗೂ ನಾಯಕ ಎಂದು ಒಪ್ಪಿಕೊಂಡಿಲ್ಲ. ದಯವಿಟ್ಟು ಗೀತಾ ಶಿವರಾಜ್ ಕುಮಾರ್ ಅವರ ಬಗ್ಗೆ ಮಾತನಾಡಬೇಡಿ. ನೀವು ನಾಯಕರಾಗಿದ್ದರೆ ನಿಮಗೆ ಮತ್ತು ಮಗನಿಗೆ ಟಿಕೆಟ್ ತಪ್ಪಿಸುತ್ತಿರಲಿಲ್ಲ. ಇಂಡಿಯಾದಲ್ಲಿ ಇರುವ ಅನೇಕ ಮೂಲಭೂತ ಸೌಕರ್ಯಗಳನ್ನು ತಂದಿದ್ದು ಕಾಂಗ್ರೆಸ್ ಪಕ್ಷ. ಆಸ್ಪತ್ರೆ, ಸರ್ಕಾರಿ ಶಾಲೆ, ರಸ್ತೆ ಎಲ್ಲಾ ತಂದಿದ್ದು ಕಾಂಗ್ರೆಸ್. ಕೇವಲ ತಾರಸಿ ಹಾಕಿ 10 ವರ್ಷದಲ್ಲಿ ನಾವೇ ಮಾಡಿದ್ದೇವೆ ಎಂದು ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು ಇಂದಿರಾ ಗಾಂಧಿ ಅವರನ್ನು ದುರ್ಗೆ ಎಂದು ಕರೆದಿದ್ದಾರೆ. 2013ರಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಮಲ ಭಾರತ್ ಅಭಿಯಾನ ತಂದರೆ ಬಿಜೆಪಿಯವರು ಅದನ್ನೇ ಸ್ವಚ್ಚ ಭಾರತ್ ಎನ್ನುತ್ತಾರೆ. ಭೇಟಿ ಬಚಾವೋ, ನಗರ ಮನೆ ನಿರ್ಮಾಣ ಯೋಜನೆ, ಜನೌಷಧಿ ಯೋಜನೆ, ಈ- ಆಡಳಿತ ಯೋಜನೆಗಳನ್ನು ಹೆಸರು ಬದಲಾಯಿಸಿ ಜನರ ಮುಂದೆ ತಂದಿದ್ದಾರೆ. 60 ಲಕ್ಷ ಸಣ್ಣ ಕೈಗಾರಿಕೆಗಳನ್ನು ಮುಚ್ಚಿ ಹಾಕಿದ್ದು ಬಿಜೆಪಿ. ಬಿಜೆಪಿಯವರು ಯಾವುದೇ ಚರ್ಚೆಗೆ ಬರುವುದಿಲ್ಲ, ಕಷ್ಟಕ್ಕೆ ಬರುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ತಕ್ಷಣ ಕದನ ವಿರಾಮಕ್ಕೆ ಆಗ್ರಹಿಸಿ ವಿಶ್ವ ಸಂಸ್ಥೆಯಲ್ಲಿ ನಿರ್ಣಯ ಅಂಗೀಕಾರ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...