Homeಮುಖಪುಟದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದ ದೆಹಲಿಯ ಪ್ರಗತಿ ಮೈದಾನ ಸುರಂಗ ಮಾರ್ಗ: ವರ್ಷದ ಹಿಂದೆ ಪ್ರಧಾನಿ...

ದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದ ದೆಹಲಿಯ ಪ್ರಗತಿ ಮೈದಾನ ಸುರಂಗ ಮಾರ್ಗ: ವರ್ಷದ ಹಿಂದೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಯೋಜನೆ

- Advertisement -
- Advertisement -

ಕಾಮಗಾರಿಯ ವಿಳಂಬ ಮತ್ತು ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ದೆಹಲಿಯ ಪ್ರಗತಿ ಮೈದಾನದ ಸುರಂಗ ಮಾರ್ಗದಲ್ಲಿ ದೊಡ್ಡ ಮಟ್ಟದ ಬಿರುಕು ಕಾಣಿಸಿಕೊಂಡಿದ್ದು, ಸುರಂಗದ ಕೂಲಂಕುಷ ಪರೀಕ್ಷೆಯ ಅಗತ್ಯವಿದೆ ಎಂದು ದೆಹಲಿಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಯ ಹಿರಿಯ ಅಧಿಕಾರಿಯೊಬ್ಬರು ಫೆಬ್ರವರಿ 6,2024 ಮಂಗಳವಾರ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಪ್ರಸ್ತುತ ಸುರಂಗ ಮಾರ್ಗವು ಪ್ರಯಾಣಿಕರಿಗೆ ಸುರಕ್ಷಿತವಾಗಿಲ್ಲ. ಅದು ದುರಸ್ತಿ ಮಾಡಲಾಗದ ಸ್ಥಿತಿಯಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾಗಿ ಹಿಂದೂ ವರದಿ ಹೇಳಿದೆ. ಈ ವರದಿ ಕಳೆದ ಎರಡು ದಿನಗಳಿಂದ ದೇಶದಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ.

ಅತ್ಯಂತ ಮಹತ್ವಾಕಾಂಕ್ಷೆಯ ಪ್ರಗತಿ ಮೈದಾನ ಸುರಂಗ ಮಾರ್ಗ ಯೋಜನೆಯನ್ನು ₹777ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿತ್ತು. ಜೂನ್ 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ದೇಶದ ಮಾಧ್ಯಮಗಳು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು.

1.3 ಕಿಮೀ ಉದ್ದದ ಸುರಂಗ ಮತ್ತು ಅದನ್ನು ಸಂಪರ್ಕಿಸುವ ಐದು ಅಂಡರ್‌ಪಾಸ್‌ಗಳು ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಪ್ರಾಜೆಕ್ಟ್‌ನ ಭಾಗವಾಗಿದೆ. ಇದು ನಗರದ ಪೂರ್ವ ಭಾಗಗಳು, ನೋಯ್ಡಾ ಮತ್ತು ಗಾಜಿಯಾಬಾದ್‌ನ ಸ್ಯಾಟ್‌ಲೈಟ್‌ ಪಟ್ಟಣಗಳೊಂದಿಗೆ ಮಧ್ಯ ದೆಹಲಿಯ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ.

ಸುರಂಗ ಮಾರ್ಗ ಉದ್ಘಾಟನೆಗೊಂಡ ಕೆಲವೇ ತಿಂಗಳ ಬಳಿಕ, ಕಳೆದ ವರ್ಷ ದೆಹಲಿಯಲ್ಲಿ ಮಳೆಯಾಗಿತ್ತು. ಆಗ ಸುರಂಗದಲ್ಲಿ ನೀರು ತುಂಬಿದ್ದರಿಂದ ಮಾರ್ಗವನ್ನು ಮುಚ್ಚಲಾಗಿತ್ತು.

“ನಗರದಲ್ಲಿ ಸಾಧಾರಣದಿಂದ ಹೆಚ್ಚಿನ ಮಳೆಯಾದಾಗಲೆಲ್ಲ ಸುರಂಗವು ಜಲಾವೃತವಾಗಿತ್ತು. ಸುರಂಗದೊಳಗೆ ಆಗಾಗ ಸಣ್ಣ ಮಟ್ಟದ ಸೋರಿಕೆಗಳನ್ನು ನಾವು ದುರಸ್ಥಿ ಮಾಡಿದ್ದೇವೆ. ಆದರೆ, ಈಗ ಸಮಸ್ಯೆ ದೊಡ್ಡದಾಗಿದೆ. ಕಳೆದ ಎರಡು ತಿಂಗಳಿನಿಂದ ಸುರಂಗದ ನಿರ್ವಹಣೆಯ ಹೊಣೆ ಹೊತ್ತ ಎಲ್‌&ಟಿ ಕಂಪನಿಯನ್ನು ನಾವು ಎಷ್ಟೇ ಬಾರಿ ಸಂಪರ್ಕಿಸಿದರೂ ಅವರು ಅದನ್ನು ದುರಸ್ಥಿ ಮಾಡಿಲ್ಲ” ಎಂದು ಮತ್ತೊಬ್ಬ ಪಿಡಬ್ಲ್ಯುಡಿ ಇಲಾಖೆ ಅಧಿಕಾರಿ ಹೇಳಿದ್ದಾಗಿ ದಿ ಹಿಂದೂ ತಿಳಿಸಿದೆ.

ಫೆಬ್ರವರಿ 3ರಂದು ಪಿಡಬ್ಲ್ಯುಡಿ ಎಲ್‌&ಟಿ ಕಂಪನಿಗೆ ಶೋಕಾಸ್ ನೋಟಿಸ್ ನೀಡಿದ್ದು,-ಕನಿಷ್ಠ ₹500 ಕೋಟಿ ಟೋಕನ್ ಮೊತ್ತವನ್ನು ಠೇವಣಿ ಇಡಲು ಮತ್ತು ಸುರಂಗದ ದೋಷಯುಕ್ತ ವಿನ್ಯಾಸವನ್ನು ಸರಿಪಡಿಸುವುದರ ಜೊತೆಗೆ ದುರಸ್ತಿ ಕಾರ್ಯವನ್ನು ಪ್ರಾರಂಭಿಸಲು ಕೇಳಿದೆ.

ನೋಟಿಸ್‌ನಲ್ಲಿ, ಸುರಂಗ ನಿರ್ಮಾಣವನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕಂಪನಿ ವಿಫಲವಾಗಿದೆ ಎಂದು ಪಿಡಬ್ಲ್ಯೂಡಿ ತಿಳಿಸಿದೆ. ಯೋಜನೆಯ ಟೆಂಡರ್ ಅನ್ನು 2017ರಲ್ಲಿ ಕರೆಯಲಾಗಿತ್ತು. 2019 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತು. ಆದರೆ, 2022ರಲ್ಲಿ ಯೋಜನೆ ಉದ್ಘಾಟನೆಗೊಂಡಿದೆ ಎಂದು ಪಿಡಬ್ಲ್ಯುಡಿ ಹೇಳಿದೆ.

ನಿರ್ಮಾಣ ಕಾರ್ಯದ ಗುಣಮಟ್ಟದಲ್ಲಿ ರಾಜಿಯಾಗುವುದಿಲ್ಲ ಎಂಬ ತಿಳುವಳಿಕೆಗೆ ಒಳಪಟ್ಟು ಕಂಪನಿಗೆ ಕಾಲಮಿತಿಯಲ್ಲಿ ರಿಯಾಯಿತಿ ಒದಗಿಸಲಾಗಿತ್ತು. ಆದರೆ, ಭೈರೋನ್ ಮಾರ್ಗ್ ಬಳಿಯ ಅಂಡರ್ ಪಾಸ್ ನಂ.5ರ ವಿನ್ಯಾಸದಲ್ಲಿನ ದೋಷಗಳಿಂದಾಗಿ ಸುರಂಗಕ್ಕೆ ಗರಿಷ್ಠ ಹಾನಿಯಾಗಿದೆ ಎಂದು ಪಿಡಬ್ಲ್ಯುಡಿ ತಿಳಿಸಿದೆ.

ಆರ್ಥಿಕ ಮತ್ತು ಪ್ರತಿಷ್ಠೆ ನಷ್ಟಕ್ಕೆ ಸಂಬಂಧಿಸಿದಂತೆ ಕಂಪನಿಯ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬ ಬಗ್ಗೆ ಫೆಬ್ರವರಿ 18 ರೊಳಗೆ ಪ್ರತಿಕ್ರಿಯಿಸುವಂತೆ ಎಲ್‌&ಟಿಗೆ ಪಿಡಬ್ಲ್ಯುಡಿ ಕೇಳಿದೆ. 100 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಸಮಯ ಬಾಳಿಕೆ ಬರುವ ಖಾತ್ರಿ ನೀಡಿದ್ದ ಕಾಮಗಾರಿಯ ದುರಸ್ತಿ ಮತ್ತು ನಿರ್ವಹಣೆಯ ಜವಾಬ್ದಾರಿಯಿಂದ ತಪ್ಪಿಸಿಕೊಂಡರೆ ಕಂಪನಿಯು ಸಿವಿಲ್ ಮತ್ತು ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಹೊಣೆಗಾರನಾಗಿರುತ್ತಾನೆ ಎಂದು ಪಿಡಬ್ಲ್ಯುಡಿ ತನ್ನ ನೋಟಿಸ್‌ನಲ್ಲಿ ಎಚ್ಚರಿಸಿದೆ.

ಸುರಂಗದೊಳಗೆ ನಿರಂತರ ಸೋರಿಕೆ, ಕಾಂಕ್ರೀಟ್‌ನಲ್ಲಿ ಬಿರುಕುಗಳು, ಅತಿಯಾದ ನೀರು ಹರಿಯುವುದು ಮತ್ತು ಒಳಚರಂಡಿ ವ್ಯವಸ್ಥೆಯಲ್ಲಿ ಅಸಮರ್ಪಕ ಕಾರ್ಯ ಸೇರಿದಂತೆ 12 ಸಮಸ್ಯೆಗಳನ್ನು ಪಿಡಬ್ಲ್ಯುಡಿ ಇಲಾಖೆ ಗುರುತಿಸಿದೆ. ನಾವು ಎಲ್‌&ಟಿ ಸಂಸ್ಥೆಯನ್ನು ಸಂಪರ್ಕಿಸಿದಾಗ ಅದರ ವಕ್ತಾರರು ದೆಹಲಿ ಪಿಡಬ್ಲ್ಯುಡಿ ನಮ್ಮ ‘ಗೌರವಾನ್ವಿತ ಗ್ರಾಹಕ’. ಅದರೊಂದಿಗೆ ದೀರ್ಘ ವರ್ಷಗಳ ಒಡನಾಟವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿಯಲ್ಲಿ ಹೇಳಿದೆ.

ಜೂನ್ 19,2022ರಂದು ಪ್ರಧಾನಿ ನರೇಂದ್ರ ಮೋದಿ ಪ್ರಗತಿ ಮೈದಾನ್‌ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯ ಮುಖ್ಯ ಸುರಂಗ ಮತ್ತು ಅಂಡರ್‌ಪಾಸ್‌ಗಳನ್ನು ಉದ್ಘಾಟಿಸಿದ್ದರು. ಬಳಿಕ ಸುರಂಗದಲ್ಲಿ ನಡೆದಾಡಿದ್ದ ಪ್ರಧಾನಿ, ಅಲ್ಲೇ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಯೊಂದನ್ನು ಎತ್ತಿ ಕಸದ ಬುಟ್ಟಿಗೆ ಹಾಕಿದ್ದರು. ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಪ್ರಧಾನಿ ಮೋದಿ ಕಸ ಹೆಕ್ಕಿ ಸ್ವಚ್ಚತೆಯ ಅರಿವು ಮೂಡಿಸಿದ್ದಾರೆ ಎಂದು ಮಾಧ್ಯಮಗಳು ಕೊಂಡಾಡಿತ್ತು. ಆದರೆ, ಪ್ರಧಾನಿ ಬರುವ ಮಾರ್ಗದಲ್ಲಿ ಸಾಮಾನ್ಯವಾಗಿ ಸ್ವಚ್ಚತೆ ಕಾಪಾಡಲಾಗುತ್ತದೆ. ಒಂದು ಕಸವೂ ಅಲ್ಲಿ ಇರದಂತೆ ನೋಡಿಕೊಳ್ಳಲಾಗುತ್ತದೆ. ಹಾಗಿದ್ದರೂ, ಹೊಸ ಮಾರ್ಗದಲ್ಲಿ ಹೇಗಪ್ಪ ಒಂದೇ ಒಂದು ಪ್ಲಾಸ್ಟಿಕ್ ಬಾಟಲಿ ಸಿಕ್ಕಿತು. ಇದೆಲ್ಲ ಪ್ರಚಾರದ ಸ್ಟಂಟ್ ಎಂದು ಸಾರ್ವಜನಿಕರು ಮಾತನಾಡಿಕೊಂಡಿದ್ದರು.

After G20 Fanfare, Pragati Maidan Tunnel Now Seen as 'Potential Threat to  Passengers': Report

ಇದನ್ನೂ ಓದಿ : ಮೋದಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಕಾಂಗ್ರೆಸ್‌: ‘ಶ್ವೇತಪತ್ರ’ ಕ್ಕೆ ಪ್ರತಿಯಾಗಿ ‘ಕಪ್ಪು ಪತ್ರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...