Homeಮುಖಪುಟದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದ ದೆಹಲಿಯ ಪ್ರಗತಿ ಮೈದಾನ ಸುರಂಗ ಮಾರ್ಗ: ವರ್ಷದ ಹಿಂದೆ ಪ್ರಧಾನಿ...

ದುರಸ್ಥಿ ಮಾಡಲಾಗದ ಸ್ಥಿತಿಗೆ ತಲುಪಿದ ದೆಹಲಿಯ ಪ್ರಗತಿ ಮೈದಾನ ಸುರಂಗ ಮಾರ್ಗ: ವರ್ಷದ ಹಿಂದೆ ಪ್ರಧಾನಿ ಮೋದಿ ಉದ್ಘಾಟಿಸಿದ್ದ ಯೋಜನೆ

- Advertisement -
- Advertisement -

ಕಾಮಗಾರಿಯ ವಿಳಂಬ ಮತ್ತು ನಿರ್ವಹಣೆಯಲ್ಲಿನ ನಿರ್ಲಕ್ಷ್ಯದಿಂದ ದೆಹಲಿಯ ಪ್ರಗತಿ ಮೈದಾನದ ಸುರಂಗ ಮಾರ್ಗದಲ್ಲಿ ದೊಡ್ಡ ಮಟ್ಟದ ಬಿರುಕು ಕಾಣಿಸಿಕೊಂಡಿದ್ದು, ಸುರಂಗದ ಕೂಲಂಕುಷ ಪರೀಕ್ಷೆಯ ಅಗತ್ಯವಿದೆ ಎಂದು ದೆಹಲಿಯ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಯ ಹಿರಿಯ ಅಧಿಕಾರಿಯೊಬ್ಬರು ಫೆಬ್ರವರಿ 6,2024 ಮಂಗಳವಾರ ಹೇಳಿರುವುದಾಗಿ ದಿ ಹಿಂದೂ ವರದಿ ಮಾಡಿದೆ.

ಪ್ರಸ್ತುತ ಸುರಂಗ ಮಾರ್ಗವು ಪ್ರಯಾಣಿಕರಿಗೆ ಸುರಕ್ಷಿತವಾಗಿಲ್ಲ. ಅದು ದುರಸ್ತಿ ಮಾಡಲಾಗದ ಸ್ಥಿತಿಯಲ್ಲಿದೆ ಎಂದು ಅಧಿಕಾರಿ ತಿಳಿಸಿದ್ದಾಗಿ ಹಿಂದೂ ವರದಿ ಹೇಳಿದೆ. ಈ ವರದಿ ಕಳೆದ ಎರಡು ದಿನಗಳಿಂದ ದೇಶದಲ್ಲಿ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿದೆ.

ಅತ್ಯಂತ ಮಹತ್ವಾಕಾಂಕ್ಷೆಯ ಪ್ರಗತಿ ಮೈದಾನ ಸುರಂಗ ಮಾರ್ಗ ಯೋಜನೆಯನ್ನು ₹777ಕೋಟಿ ವೆಚ್ಚದಲ್ಲಿ ಪೂರ್ಣಗೊಳಿಸಲಾಗಿತ್ತು. ಜೂನ್ 2022ರಲ್ಲಿ ಪ್ರಧಾನಿ ನರೇಂದ್ರ ಮೋದಿ ಇದನ್ನು ಉದ್ಘಾಟಿಸಿದ್ದರು. ಉದ್ಘಾಟನಾ ಕಾರ್ಯಕ್ರಮವನ್ನು ದೇಶದ ಮಾಧ್ಯಮಗಳು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿತ್ತು.

1.3 ಕಿಮೀ ಉದ್ದದ ಸುರಂಗ ಮತ್ತು ಅದನ್ನು ಸಂಪರ್ಕಿಸುವ ಐದು ಅಂಡರ್‌ಪಾಸ್‌ಗಳು ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಪ್ರಾಜೆಕ್ಟ್‌ನ ಭಾಗವಾಗಿದೆ. ಇದು ನಗರದ ಪೂರ್ವ ಭಾಗಗಳು, ನೋಯ್ಡಾ ಮತ್ತು ಗಾಜಿಯಾಬಾದ್‌ನ ಸ್ಯಾಟ್‌ಲೈಟ್‌ ಪಟ್ಟಣಗಳೊಂದಿಗೆ ಮಧ್ಯ ದೆಹಲಿಯ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ.

ಸುರಂಗ ಮಾರ್ಗ ಉದ್ಘಾಟನೆಗೊಂಡ ಕೆಲವೇ ತಿಂಗಳ ಬಳಿಕ, ಕಳೆದ ವರ್ಷ ದೆಹಲಿಯಲ್ಲಿ ಮಳೆಯಾಗಿತ್ತು. ಆಗ ಸುರಂಗದಲ್ಲಿ ನೀರು ತುಂಬಿದ್ದರಿಂದ ಮಾರ್ಗವನ್ನು ಮುಚ್ಚಲಾಗಿತ್ತು.

“ನಗರದಲ್ಲಿ ಸಾಧಾರಣದಿಂದ ಹೆಚ್ಚಿನ ಮಳೆಯಾದಾಗಲೆಲ್ಲ ಸುರಂಗವು ಜಲಾವೃತವಾಗಿತ್ತು. ಸುರಂಗದೊಳಗೆ ಆಗಾಗ ಸಣ್ಣ ಮಟ್ಟದ ಸೋರಿಕೆಗಳನ್ನು ನಾವು ದುರಸ್ಥಿ ಮಾಡಿದ್ದೇವೆ. ಆದರೆ, ಈಗ ಸಮಸ್ಯೆ ದೊಡ್ಡದಾಗಿದೆ. ಕಳೆದ ಎರಡು ತಿಂಗಳಿನಿಂದ ಸುರಂಗದ ನಿರ್ವಹಣೆಯ ಹೊಣೆ ಹೊತ್ತ ಎಲ್‌&ಟಿ ಕಂಪನಿಯನ್ನು ನಾವು ಎಷ್ಟೇ ಬಾರಿ ಸಂಪರ್ಕಿಸಿದರೂ ಅವರು ಅದನ್ನು ದುರಸ್ಥಿ ಮಾಡಿಲ್ಲ” ಎಂದು ಮತ್ತೊಬ್ಬ ಪಿಡಬ್ಲ್ಯುಡಿ ಇಲಾಖೆ ಅಧಿಕಾರಿ ಹೇಳಿದ್ದಾಗಿ ದಿ ಹಿಂದೂ ತಿಳಿಸಿದೆ.

ಫೆಬ್ರವರಿ 3ರಂದು ಪಿಡಬ್ಲ್ಯುಡಿ ಎಲ್‌&ಟಿ ಕಂಪನಿಗೆ ಶೋಕಾಸ್ ನೋಟಿಸ್ ನೀಡಿದ್ದು,-ಕನಿಷ್ಠ ₹500 ಕೋಟಿ ಟೋಕನ್ ಮೊತ್ತವನ್ನು ಠೇವಣಿ ಇಡಲು ಮತ್ತು ಸುರಂಗದ ದೋಷಯುಕ್ತ ವಿನ್ಯಾಸವನ್ನು ಸರಿಪಡಿಸುವುದರ ಜೊತೆಗೆ ದುರಸ್ತಿ ಕಾರ್ಯವನ್ನು ಪ್ರಾರಂಭಿಸಲು ಕೇಳಿದೆ.

ನೋಟಿಸ್‌ನಲ್ಲಿ, ಸುರಂಗ ನಿರ್ಮಾಣವನ್ನು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕಂಪನಿ ವಿಫಲವಾಗಿದೆ ಎಂದು ಪಿಡಬ್ಲ್ಯೂಡಿ ತಿಳಿಸಿದೆ. ಯೋಜನೆಯ ಟೆಂಡರ್ ಅನ್ನು 2017ರಲ್ಲಿ ಕರೆಯಲಾಗಿತ್ತು. 2019 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತು. ಆದರೆ, 2022ರಲ್ಲಿ ಯೋಜನೆ ಉದ್ಘಾಟನೆಗೊಂಡಿದೆ ಎಂದು ಪಿಡಬ್ಲ್ಯುಡಿ ಹೇಳಿದೆ.

ನಿರ್ಮಾಣ ಕಾರ್ಯದ ಗುಣಮಟ್ಟದಲ್ಲಿ ರಾಜಿಯಾಗುವುದಿಲ್ಲ ಎಂಬ ತಿಳುವಳಿಕೆಗೆ ಒಳಪಟ್ಟು ಕಂಪನಿಗೆ ಕಾಲಮಿತಿಯಲ್ಲಿ ರಿಯಾಯಿತಿ ಒದಗಿಸಲಾಗಿತ್ತು. ಆದರೆ, ಭೈರೋನ್ ಮಾರ್ಗ್ ಬಳಿಯ ಅಂಡರ್ ಪಾಸ್ ನಂ.5ರ ವಿನ್ಯಾಸದಲ್ಲಿನ ದೋಷಗಳಿಂದಾಗಿ ಸುರಂಗಕ್ಕೆ ಗರಿಷ್ಠ ಹಾನಿಯಾಗಿದೆ ಎಂದು ಪಿಡಬ್ಲ್ಯುಡಿ ತಿಳಿಸಿದೆ.

ಆರ್ಥಿಕ ಮತ್ತು ಪ್ರತಿಷ್ಠೆ ನಷ್ಟಕ್ಕೆ ಸಂಬಂಧಿಸಿದಂತೆ ಕಂಪನಿಯ ವಿರುದ್ಧ ಏಕೆ ಕ್ರಮ ಕೈಗೊಳ್ಳಬಾರದು ಎಂಬ ಬಗ್ಗೆ ಫೆಬ್ರವರಿ 18 ರೊಳಗೆ ಪ್ರತಿಕ್ರಿಯಿಸುವಂತೆ ಎಲ್‌&ಟಿಗೆ ಪಿಡಬ್ಲ್ಯುಡಿ ಕೇಳಿದೆ. 100 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಸಮಯ ಬಾಳಿಕೆ ಬರುವ ಖಾತ್ರಿ ನೀಡಿದ್ದ ಕಾಮಗಾರಿಯ ದುರಸ್ತಿ ಮತ್ತು ನಿರ್ವಹಣೆಯ ಜವಾಬ್ದಾರಿಯಿಂದ ತಪ್ಪಿಸಿಕೊಂಡರೆ ಕಂಪನಿಯು ಸಿವಿಲ್ ಮತ್ತು ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಹೊಣೆಗಾರನಾಗಿರುತ್ತಾನೆ ಎಂದು ಪಿಡಬ್ಲ್ಯುಡಿ ತನ್ನ ನೋಟಿಸ್‌ನಲ್ಲಿ ಎಚ್ಚರಿಸಿದೆ.

ಸುರಂಗದೊಳಗೆ ನಿರಂತರ ಸೋರಿಕೆ, ಕಾಂಕ್ರೀಟ್‌ನಲ್ಲಿ ಬಿರುಕುಗಳು, ಅತಿಯಾದ ನೀರು ಹರಿಯುವುದು ಮತ್ತು ಒಳಚರಂಡಿ ವ್ಯವಸ್ಥೆಯಲ್ಲಿ ಅಸಮರ್ಪಕ ಕಾರ್ಯ ಸೇರಿದಂತೆ 12 ಸಮಸ್ಯೆಗಳನ್ನು ಪಿಡಬ್ಲ್ಯುಡಿ ಇಲಾಖೆ ಗುರುತಿಸಿದೆ. ನಾವು ಎಲ್‌&ಟಿ ಸಂಸ್ಥೆಯನ್ನು ಸಂಪರ್ಕಿಸಿದಾಗ ಅದರ ವಕ್ತಾರರು ದೆಹಲಿ ಪಿಡಬ್ಲ್ಯುಡಿ ನಮ್ಮ ‘ಗೌರವಾನ್ವಿತ ಗ್ರಾಹಕ’. ಅದರೊಂದಿಗೆ ದೀರ್ಘ ವರ್ಷಗಳ ಒಡನಾಟವನ್ನು ಹೊಂದಿರುವುದಾಗಿ ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿಯಲ್ಲಿ ಹೇಳಿದೆ.

ಜೂನ್ 19,2022ರಂದು ಪ್ರಧಾನಿ ನರೇಂದ್ರ ಮೋದಿ ಪ್ರಗತಿ ಮೈದಾನ್‌ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಯೋಜನೆಯ ಮುಖ್ಯ ಸುರಂಗ ಮತ್ತು ಅಂಡರ್‌ಪಾಸ್‌ಗಳನ್ನು ಉದ್ಘಾಟಿಸಿದ್ದರು. ಬಳಿಕ ಸುರಂಗದಲ್ಲಿ ನಡೆದಾಡಿದ್ದ ಪ್ರಧಾನಿ, ಅಲ್ಲೇ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಯೊಂದನ್ನು ಎತ್ತಿ ಕಸದ ಬುಟ್ಟಿಗೆ ಹಾಕಿದ್ದರು. ಈ ಕುರಿತು ವಿಡಿಯೋ ವೈರಲ್ ಆಗಿತ್ತು. ಪ್ರಧಾನಿ ಮೋದಿ ಕಸ ಹೆಕ್ಕಿ ಸ್ವಚ್ಚತೆಯ ಅರಿವು ಮೂಡಿಸಿದ್ದಾರೆ ಎಂದು ಮಾಧ್ಯಮಗಳು ಕೊಂಡಾಡಿತ್ತು. ಆದರೆ, ಪ್ರಧಾನಿ ಬರುವ ಮಾರ್ಗದಲ್ಲಿ ಸಾಮಾನ್ಯವಾಗಿ ಸ್ವಚ್ಚತೆ ಕಾಪಾಡಲಾಗುತ್ತದೆ. ಒಂದು ಕಸವೂ ಅಲ್ಲಿ ಇರದಂತೆ ನೋಡಿಕೊಳ್ಳಲಾಗುತ್ತದೆ. ಹಾಗಿದ್ದರೂ, ಹೊಸ ಮಾರ್ಗದಲ್ಲಿ ಹೇಗಪ್ಪ ಒಂದೇ ಒಂದು ಪ್ಲಾಸ್ಟಿಕ್ ಬಾಟಲಿ ಸಿಕ್ಕಿತು. ಇದೆಲ್ಲ ಪ್ರಚಾರದ ಸ್ಟಂಟ್ ಎಂದು ಸಾರ್ವಜನಿಕರು ಮಾತನಾಡಿಕೊಂಡಿದ್ದರು.

After G20 Fanfare, Pragati Maidan Tunnel Now Seen as 'Potential Threat to  Passengers': Report

ಇದನ್ನೂ ಓದಿ : ಮೋದಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಕಾಂಗ್ರೆಸ್‌: ‘ಶ್ವೇತಪತ್ರ’ ಕ್ಕೆ ಪ್ರತಿಯಾಗಿ ‘ಕಪ್ಪು ಪತ್ರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...