Homeಮುಖಪುಟಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

ಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

- Advertisement -
- Advertisement -

‘ಪ್ರಗತಿ ಮೈದಾನದ ಸುರಂಗವನ್ನು ದುರಸ್ತಿಗೊಳಿಸಲು ಸಾಧ್ಯವಾಗುತ್ತಿಲ್ಲ; ಕಾಮಗಾರಿ ಕುರಿತು ಕೂಲಂಕುಷ ಪರೀಕ್ಷೆಯ ಅಗತ್ಯವಿದೆ’ ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ. ಕಾಮಗಾರಿ ವಿಳಂಬ ಹಾಗೂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಸುರಂಗ ಬಿರುಕು ಬಿಟ್ಟಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿ ತಿಳಿಸಿದ್ದಾರೆ. ಇನ್ನು ಮುಂದೆ ಪ್ರಯಾಣಿಕರಿಗೆ ಈ ಮಾರ್ಗವು ಸುರಕ್ಷಿತವಲ್ಲ ಮತ್ತು ಸಂಪೂರ್ಣ ನವೀಕರಣವಿಲ್ಲದೆ ಅದನ್ನು ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ₹777 ಕೋಟಿ ವೆಚ್ಚದ ಸುರಂಗದಲ್ಲಿ ಕಳಪೆ ಕಾಮಗಾರಿ ಆರೋಪದ ಮೇಲೆ ‘ಲಾರ್ಸೆನ್ ಮತ್ತು ಟೂಬ್ರೊ’ಗೆ ಕಂಪನಿಗೆ ನೋಟಿಸ್ ನೀಡಿದೆ. ಇಲಾಖೆಯು ಎಲ್ ಅಂಡ್ ಟಿಯಿಂದ ₹500 ಕೋಟಿಯನ್ನು “ಟೋಕನ್ ಮೊತ್ತ” ವಾಗಿ ಬೇಡಿಕೆಯಿಟ್ಟಿದ್ದು, ನಿರ್ಮಾಣ ಸಂಸ್ಥೆಯಿಂದ ಇದೇ ಮೊತ್ತದ ಪ್ರತಿಹಕ್ಕನ್ನು ಪ್ರೇರೇಪಿಸಿದೆ. ಲೋಕೋಪಯೋಗಿ ಇಲಾಖೆ ಕೂಡ ಕಂಪನಿಗೆ ಕೂಡಲೇ ದುರಸ್ತಿ ಕಾರ್ಯ ಆರಂಭಿಸುವಂತೆ ಸೂಚಿಸಿದೆ.

ತಾನು ನಿರ್ಮಿಸಿದ ಸುರಂಗದ ಸೋರಿಕೆ ಮತ್ತು ಬಿರುಕುಗಳ ಬಗ್ಗೆ ಮಾತನಾಡಿದ ಎಲ್‌ ಅಂಡ್ ಟಿ ವಕ್ತಾರರು, “ಪಿಡಬ್ಲ್ಯೂಡಿ ನಮ್ಮ ಗೌರವಾನ್ವಿತ ಗ್ರಾಹಕ; ನಾವು ಅವರೊಂದಿಗೆ ಹಲವು ವರ್ಷಗಳಿಂದ ಕೆಲಸ ಮಾಡಿದ್ದೇವೆ. ಕಂಪನಿಯು ₹500 ಕೋಟಿಯ ಕ್ಲೈಮ್ ಅನ್ನು ಇಲಾಖೆ ಯಾಕೆ ಸಲ್ಲಿಸಿದೆ ಎಂದು ತಿಳಿಸಲು ಬಯಸುತ್ತದೆ’ ಎಂದು ಹೇಳಿದ್ದಾರೆ.

ಒಂದು ವರ್ಷದ ಹಿಂದೆ ನಿರ್ಮಿಸಲಾದ ಸುರಂಗದ ಗೋಡೆಗಳಿಂದ ನೀರು ಸೋರುವ ಮೂಲಕ ಸಮಸ್ಯೆ ಕಾಣಿಸಿಕೊಂಡಿದೆ. ರಸ್ತೆಯ ಮಧ್ಯದಿಂದ ನೀರು ಹುಕ್ಕುತ್ತಿದ್ದು, ನೀರು ನುಗ್ಗಿದ್ದರಿಂದ ಸುರಂಗದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಸುರಂಗದ ರಸ್ತೆಯಲ್ಲಿಯೂ ಸಹ ಭಾರೀ ಬಿರುಕುಗಳು ಕಾಣಿಸಿಕೊಂಡಿದೆ ಎಂದು ಎನ್‌ಡಿಟಿವಿಯ ಗ್ರೌಂಡ್ ರಿಪೋರ್ಟ್ ತೋರಿಸಿದೆ. ಹಲವೆಡೆ ನೀರು ಸೋರಿಕೆಯಾಗಿರುವುದರಿಂದ ಸುರಂಗ ಮಾರ್ಗ ಬಳಕೆಯು ಜನರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ನಗರ ಯೋಜನಾ ತಜ್ಞ ಅರ್ಚಿತ್ ಸಿಂಗ್ ಮಾತನಾಡಿ, ‘ಜಲನಿರೋಧಕ ಸಮಸ್ಯೆ ಕಾಣಿಸಿಕೊಂಡಿದೆ, ಮಣ್ಣು ಪರೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ತೋರುತ್ತದೆ. ಮೊದಲನೆಯದಾಗಿ, ಈ ಸುರಂಗದ ಬಳಕೆಯನ್ನು ನಿಲ್ಲಿಸಬೇಕು. ಸರ್ಕಾರವು ಸಮಿತಿ ರೂಪಿಸಬೇಕು; ಭೌಗೋಳಿಕ ತಜ್ಞರು, ವಾಸ್ತುಶಿಲ್ಪಿಗಳು, ಸುರಂಗ ಎಂಜಿನಿಯರ್‌ಗಳು ಮತ್ತು ಎಂಜಿನಿಯರ್‌ಗಳ ತಂಡವು ಸೋರಿಕೆಗೆ ಕಾರಣ ಮತ್ತು ಬಿರುಕುಗಳಿಗೆ ಕಾರಣಗಳನ್ನು ಕಂಡುಹಿಡಿಯಬೇಕು. ಸುರಂಗವನ್ನು ದುರಸ್ತಿ ಮಾಡಬಹುದೇ ಅಥವಾ ಏನು ಮಾಡಬೇಕು ಎಂದು ಕಂಡುಹಿಡಿಯಬೇಕು’ ಎಂದಿದ್ದಾರೆ.

ಸುರಂಗ ಮತ್ತು ಐದು ಅಂಡರ್‌ಪಾಸ್‌ಗಳು ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಪ್ರಾಜೆಕ್ಟ್ ಅನ್ನು ರೂಪಿಸುತ್ತವೆ. ಇದು ನಗರದ ಪೂರ್ವ ಭಾಗಗಳು ಮತ್ತು ಹತ್ತಿರದ ನಗರಗಳಾದ ನೋಯ್ಡಾ ಮತ್ತು ಗಾಜಿಯಾಬಾದ್‌ನೊಂದಿಗೆ ಮಧ್ಯ ದೆಹಲಿಯ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ. 2022ರಲ್ಲಿ ಉದ್ಘಾಟನೆಗೊಂಡ 1.3 ಕಿಮೀ ಸುರಂಗವು ಕಳೆದ ವರ್ಷ ಪ್ರವಾಹದ ಸಮಯದಲ್ಲಿ ಅನೇಕ ಬಾರಿ ಬಂದ್ ಮಾಡಬೇಕಾಯಿತು.

ಸರಂಗ ಸೋರಿಕೆಯ ಬಗ್ಗೆ ಮಾತನಾಡಿರುವ ದೆಹಲಿ ಅಧಿಕಾರಿಯೊಬ್ಬರು, ‘ಎಲ್ಲ ಭೂಗತ ಸುರಂಗಗಳಲ್ಲಿ ಸೋರಿಕೆ ಸಾಮಾನ್ಯ. ಅದರ ನಿರ್ವಹಣೆಯನ್ನು ವಹಿಸಿಕೊಟ್ಟಿರುವ ಎಲ್ & ಟಿ ಕಂಪನಿಯು ಕಳೆದ ಎರಡು ತಿಂಗಳಿನಿಂದ ಹಲವಾರು ಬಾರಿ ದುರಸ್ತಿ ಕಾರ್ಯವನ್ನು ಕೈಗೊಳ್ಳದ ಕಾರಣ ಸಮಸ್ಯೆ ಕಾಣಿಸಿಕೊಂಡಿದೆ. ಎಂದರು.

ಇದನ್ನೂ ಓದಿ; ಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...