Homeಮುಖಪುಟಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

ಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

- Advertisement -
- Advertisement -

‘ಪ್ರಗತಿ ಮೈದಾನದ ಸುರಂಗವನ್ನು ದುರಸ್ತಿಗೊಳಿಸಲು ಸಾಧ್ಯವಾಗುತ್ತಿಲ್ಲ; ಕಾಮಗಾರಿ ಕುರಿತು ಕೂಲಂಕುಷ ಪರೀಕ್ಷೆಯ ಅಗತ್ಯವಿದೆ’ ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ. ಕಾಮಗಾರಿ ವಿಳಂಬ ಹಾಗೂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಸುರಂಗ ಬಿರುಕು ಬಿಟ್ಟಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿ ತಿಳಿಸಿದ್ದಾರೆ. ಇನ್ನು ಮುಂದೆ ಪ್ರಯಾಣಿಕರಿಗೆ ಈ ಮಾರ್ಗವು ಸುರಕ್ಷಿತವಲ್ಲ ಮತ್ತು ಸಂಪೂರ್ಣ ನವೀಕರಣವಿಲ್ಲದೆ ಅದನ್ನು ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ₹777 ಕೋಟಿ ವೆಚ್ಚದ ಸುರಂಗದಲ್ಲಿ ಕಳಪೆ ಕಾಮಗಾರಿ ಆರೋಪದ ಮೇಲೆ ‘ಲಾರ್ಸೆನ್ ಮತ್ತು ಟೂಬ್ರೊ’ಗೆ ಕಂಪನಿಗೆ ನೋಟಿಸ್ ನೀಡಿದೆ. ಇಲಾಖೆಯು ಎಲ್ ಅಂಡ್ ಟಿಯಿಂದ ₹500 ಕೋಟಿಯನ್ನು “ಟೋಕನ್ ಮೊತ್ತ” ವಾಗಿ ಬೇಡಿಕೆಯಿಟ್ಟಿದ್ದು, ನಿರ್ಮಾಣ ಸಂಸ್ಥೆಯಿಂದ ಇದೇ ಮೊತ್ತದ ಪ್ರತಿಹಕ್ಕನ್ನು ಪ್ರೇರೇಪಿಸಿದೆ. ಲೋಕೋಪಯೋಗಿ ಇಲಾಖೆ ಕೂಡ ಕಂಪನಿಗೆ ಕೂಡಲೇ ದುರಸ್ತಿ ಕಾರ್ಯ ಆರಂಭಿಸುವಂತೆ ಸೂಚಿಸಿದೆ.

ತಾನು ನಿರ್ಮಿಸಿದ ಸುರಂಗದ ಸೋರಿಕೆ ಮತ್ತು ಬಿರುಕುಗಳ ಬಗ್ಗೆ ಮಾತನಾಡಿದ ಎಲ್‌ ಅಂಡ್ ಟಿ ವಕ್ತಾರರು, “ಪಿಡಬ್ಲ್ಯೂಡಿ ನಮ್ಮ ಗೌರವಾನ್ವಿತ ಗ್ರಾಹಕ; ನಾವು ಅವರೊಂದಿಗೆ ಹಲವು ವರ್ಷಗಳಿಂದ ಕೆಲಸ ಮಾಡಿದ್ದೇವೆ. ಕಂಪನಿಯು ₹500 ಕೋಟಿಯ ಕ್ಲೈಮ್ ಅನ್ನು ಇಲಾಖೆ ಯಾಕೆ ಸಲ್ಲಿಸಿದೆ ಎಂದು ತಿಳಿಸಲು ಬಯಸುತ್ತದೆ’ ಎಂದು ಹೇಳಿದ್ದಾರೆ.

ಒಂದು ವರ್ಷದ ಹಿಂದೆ ನಿರ್ಮಿಸಲಾದ ಸುರಂಗದ ಗೋಡೆಗಳಿಂದ ನೀರು ಸೋರುವ ಮೂಲಕ ಸಮಸ್ಯೆ ಕಾಣಿಸಿಕೊಂಡಿದೆ. ರಸ್ತೆಯ ಮಧ್ಯದಿಂದ ನೀರು ಹುಕ್ಕುತ್ತಿದ್ದು, ನೀರು ನುಗ್ಗಿದ್ದರಿಂದ ಸುರಂಗದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಸುರಂಗದ ರಸ್ತೆಯಲ್ಲಿಯೂ ಸಹ ಭಾರೀ ಬಿರುಕುಗಳು ಕಾಣಿಸಿಕೊಂಡಿದೆ ಎಂದು ಎನ್‌ಡಿಟಿವಿಯ ಗ್ರೌಂಡ್ ರಿಪೋರ್ಟ್ ತೋರಿಸಿದೆ. ಹಲವೆಡೆ ನೀರು ಸೋರಿಕೆಯಾಗಿರುವುದರಿಂದ ಸುರಂಗ ಮಾರ್ಗ ಬಳಕೆಯು ಜನರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ನಗರ ಯೋಜನಾ ತಜ್ಞ ಅರ್ಚಿತ್ ಸಿಂಗ್ ಮಾತನಾಡಿ, ‘ಜಲನಿರೋಧಕ ಸಮಸ್ಯೆ ಕಾಣಿಸಿಕೊಂಡಿದೆ, ಮಣ್ಣು ಪರೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ತೋರುತ್ತದೆ. ಮೊದಲನೆಯದಾಗಿ, ಈ ಸುರಂಗದ ಬಳಕೆಯನ್ನು ನಿಲ್ಲಿಸಬೇಕು. ಸರ್ಕಾರವು ಸಮಿತಿ ರೂಪಿಸಬೇಕು; ಭೌಗೋಳಿಕ ತಜ್ಞರು, ವಾಸ್ತುಶಿಲ್ಪಿಗಳು, ಸುರಂಗ ಎಂಜಿನಿಯರ್‌ಗಳು ಮತ್ತು ಎಂಜಿನಿಯರ್‌ಗಳ ತಂಡವು ಸೋರಿಕೆಗೆ ಕಾರಣ ಮತ್ತು ಬಿರುಕುಗಳಿಗೆ ಕಾರಣಗಳನ್ನು ಕಂಡುಹಿಡಿಯಬೇಕು. ಸುರಂಗವನ್ನು ದುರಸ್ತಿ ಮಾಡಬಹುದೇ ಅಥವಾ ಏನು ಮಾಡಬೇಕು ಎಂದು ಕಂಡುಹಿಡಿಯಬೇಕು’ ಎಂದಿದ್ದಾರೆ.

ಸುರಂಗ ಮತ್ತು ಐದು ಅಂಡರ್‌ಪಾಸ್‌ಗಳು ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಪ್ರಾಜೆಕ್ಟ್ ಅನ್ನು ರೂಪಿಸುತ್ತವೆ. ಇದು ನಗರದ ಪೂರ್ವ ಭಾಗಗಳು ಮತ್ತು ಹತ್ತಿರದ ನಗರಗಳಾದ ನೋಯ್ಡಾ ಮತ್ತು ಗಾಜಿಯಾಬಾದ್‌ನೊಂದಿಗೆ ಮಧ್ಯ ದೆಹಲಿಯ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ. 2022ರಲ್ಲಿ ಉದ್ಘಾಟನೆಗೊಂಡ 1.3 ಕಿಮೀ ಸುರಂಗವು ಕಳೆದ ವರ್ಷ ಪ್ರವಾಹದ ಸಮಯದಲ್ಲಿ ಅನೇಕ ಬಾರಿ ಬಂದ್ ಮಾಡಬೇಕಾಯಿತು.

ಸರಂಗ ಸೋರಿಕೆಯ ಬಗ್ಗೆ ಮಾತನಾಡಿರುವ ದೆಹಲಿ ಅಧಿಕಾರಿಯೊಬ್ಬರು, ‘ಎಲ್ಲ ಭೂಗತ ಸುರಂಗಗಳಲ್ಲಿ ಸೋರಿಕೆ ಸಾಮಾನ್ಯ. ಅದರ ನಿರ್ವಹಣೆಯನ್ನು ವಹಿಸಿಕೊಟ್ಟಿರುವ ಎಲ್ & ಟಿ ಕಂಪನಿಯು ಕಳೆದ ಎರಡು ತಿಂಗಳಿನಿಂದ ಹಲವಾರು ಬಾರಿ ದುರಸ್ತಿ ಕಾರ್ಯವನ್ನು ಕೈಗೊಳ್ಳದ ಕಾರಣ ಸಮಸ್ಯೆ ಕಾಣಿಸಿಕೊಂಡಿದೆ. ಎಂದರು.

ಇದನ್ನೂ ಓದಿ; ಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...