Homeಮುಖಪುಟಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

ಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

- Advertisement -
- Advertisement -

‘ಪ್ರಗತಿ ಮೈದಾನದ ಸುರಂಗವನ್ನು ದುರಸ್ತಿಗೊಳಿಸಲು ಸಾಧ್ಯವಾಗುತ್ತಿಲ್ಲ; ಕಾಮಗಾರಿ ಕುರಿತು ಕೂಲಂಕುಷ ಪರೀಕ್ಷೆಯ ಅಗತ್ಯವಿದೆ’ ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ. ಕಾಮಗಾರಿ ವಿಳಂಬ ಹಾಗೂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಸುರಂಗ ಬಿರುಕು ಬಿಟ್ಟಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿ ತಿಳಿಸಿದ್ದಾರೆ. ಇನ್ನು ಮುಂದೆ ಪ್ರಯಾಣಿಕರಿಗೆ ಈ ಮಾರ್ಗವು ಸುರಕ್ಷಿತವಲ್ಲ ಮತ್ತು ಸಂಪೂರ್ಣ ನವೀಕರಣವಿಲ್ಲದೆ ಅದನ್ನು ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ₹777 ಕೋಟಿ ವೆಚ್ಚದ ಸುರಂಗದಲ್ಲಿ ಕಳಪೆ ಕಾಮಗಾರಿ ಆರೋಪದ ಮೇಲೆ ‘ಲಾರ್ಸೆನ್ ಮತ್ತು ಟೂಬ್ರೊ’ಗೆ ಕಂಪನಿಗೆ ನೋಟಿಸ್ ನೀಡಿದೆ. ಇಲಾಖೆಯು ಎಲ್ ಅಂಡ್ ಟಿಯಿಂದ ₹500 ಕೋಟಿಯನ್ನು “ಟೋಕನ್ ಮೊತ್ತ” ವಾಗಿ ಬೇಡಿಕೆಯಿಟ್ಟಿದ್ದು, ನಿರ್ಮಾಣ ಸಂಸ್ಥೆಯಿಂದ ಇದೇ ಮೊತ್ತದ ಪ್ರತಿಹಕ್ಕನ್ನು ಪ್ರೇರೇಪಿಸಿದೆ. ಲೋಕೋಪಯೋಗಿ ಇಲಾಖೆ ಕೂಡ ಕಂಪನಿಗೆ ಕೂಡಲೇ ದುರಸ್ತಿ ಕಾರ್ಯ ಆರಂಭಿಸುವಂತೆ ಸೂಚಿಸಿದೆ.

ತಾನು ನಿರ್ಮಿಸಿದ ಸುರಂಗದ ಸೋರಿಕೆ ಮತ್ತು ಬಿರುಕುಗಳ ಬಗ್ಗೆ ಮಾತನಾಡಿದ ಎಲ್‌ ಅಂಡ್ ಟಿ ವಕ್ತಾರರು, “ಪಿಡಬ್ಲ್ಯೂಡಿ ನಮ್ಮ ಗೌರವಾನ್ವಿತ ಗ್ರಾಹಕ; ನಾವು ಅವರೊಂದಿಗೆ ಹಲವು ವರ್ಷಗಳಿಂದ ಕೆಲಸ ಮಾಡಿದ್ದೇವೆ. ಕಂಪನಿಯು ₹500 ಕೋಟಿಯ ಕ್ಲೈಮ್ ಅನ್ನು ಇಲಾಖೆ ಯಾಕೆ ಸಲ್ಲಿಸಿದೆ ಎಂದು ತಿಳಿಸಲು ಬಯಸುತ್ತದೆ’ ಎಂದು ಹೇಳಿದ್ದಾರೆ.

ಒಂದು ವರ್ಷದ ಹಿಂದೆ ನಿರ್ಮಿಸಲಾದ ಸುರಂಗದ ಗೋಡೆಗಳಿಂದ ನೀರು ಸೋರುವ ಮೂಲಕ ಸಮಸ್ಯೆ ಕಾಣಿಸಿಕೊಂಡಿದೆ. ರಸ್ತೆಯ ಮಧ್ಯದಿಂದ ನೀರು ಹುಕ್ಕುತ್ತಿದ್ದು, ನೀರು ನುಗ್ಗಿದ್ದರಿಂದ ಸುರಂಗದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಸುರಂಗದ ರಸ್ತೆಯಲ್ಲಿಯೂ ಸಹ ಭಾರೀ ಬಿರುಕುಗಳು ಕಾಣಿಸಿಕೊಂಡಿದೆ ಎಂದು ಎನ್‌ಡಿಟಿವಿಯ ಗ್ರೌಂಡ್ ರಿಪೋರ್ಟ್ ತೋರಿಸಿದೆ. ಹಲವೆಡೆ ನೀರು ಸೋರಿಕೆಯಾಗಿರುವುದರಿಂದ ಸುರಂಗ ಮಾರ್ಗ ಬಳಕೆಯು ಜನರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ನಗರ ಯೋಜನಾ ತಜ್ಞ ಅರ್ಚಿತ್ ಸಿಂಗ್ ಮಾತನಾಡಿ, ‘ಜಲನಿರೋಧಕ ಸಮಸ್ಯೆ ಕಾಣಿಸಿಕೊಂಡಿದೆ, ಮಣ್ಣು ಪರೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ತೋರುತ್ತದೆ. ಮೊದಲನೆಯದಾಗಿ, ಈ ಸುರಂಗದ ಬಳಕೆಯನ್ನು ನಿಲ್ಲಿಸಬೇಕು. ಸರ್ಕಾರವು ಸಮಿತಿ ರೂಪಿಸಬೇಕು; ಭೌಗೋಳಿಕ ತಜ್ಞರು, ವಾಸ್ತುಶಿಲ್ಪಿಗಳು, ಸುರಂಗ ಎಂಜಿನಿಯರ್‌ಗಳು ಮತ್ತು ಎಂಜಿನಿಯರ್‌ಗಳ ತಂಡವು ಸೋರಿಕೆಗೆ ಕಾರಣ ಮತ್ತು ಬಿರುಕುಗಳಿಗೆ ಕಾರಣಗಳನ್ನು ಕಂಡುಹಿಡಿಯಬೇಕು. ಸುರಂಗವನ್ನು ದುರಸ್ತಿ ಮಾಡಬಹುದೇ ಅಥವಾ ಏನು ಮಾಡಬೇಕು ಎಂದು ಕಂಡುಹಿಡಿಯಬೇಕು’ ಎಂದಿದ್ದಾರೆ.

ಸುರಂಗ ಮತ್ತು ಐದು ಅಂಡರ್‌ಪಾಸ್‌ಗಳು ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಪ್ರಾಜೆಕ್ಟ್ ಅನ್ನು ರೂಪಿಸುತ್ತವೆ. ಇದು ನಗರದ ಪೂರ್ವ ಭಾಗಗಳು ಮತ್ತು ಹತ್ತಿರದ ನಗರಗಳಾದ ನೋಯ್ಡಾ ಮತ್ತು ಗಾಜಿಯಾಬಾದ್‌ನೊಂದಿಗೆ ಮಧ್ಯ ದೆಹಲಿಯ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ. 2022ರಲ್ಲಿ ಉದ್ಘಾಟನೆಗೊಂಡ 1.3 ಕಿಮೀ ಸುರಂಗವು ಕಳೆದ ವರ್ಷ ಪ್ರವಾಹದ ಸಮಯದಲ್ಲಿ ಅನೇಕ ಬಾರಿ ಬಂದ್ ಮಾಡಬೇಕಾಯಿತು.

ಸರಂಗ ಸೋರಿಕೆಯ ಬಗ್ಗೆ ಮಾತನಾಡಿರುವ ದೆಹಲಿ ಅಧಿಕಾರಿಯೊಬ್ಬರು, ‘ಎಲ್ಲ ಭೂಗತ ಸುರಂಗಗಳಲ್ಲಿ ಸೋರಿಕೆ ಸಾಮಾನ್ಯ. ಅದರ ನಿರ್ವಹಣೆಯನ್ನು ವಹಿಸಿಕೊಟ್ಟಿರುವ ಎಲ್ & ಟಿ ಕಂಪನಿಯು ಕಳೆದ ಎರಡು ತಿಂಗಳಿನಿಂದ ಹಲವಾರು ಬಾರಿ ದುರಸ್ತಿ ಕಾರ್ಯವನ್ನು ಕೈಗೊಳ್ಳದ ಕಾರಣ ಸಮಸ್ಯೆ ಕಾಣಿಸಿಕೊಂಡಿದೆ. ಎಂದರು.

ಇದನ್ನೂ ಓದಿ; ಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...