Homeಮುಖಪುಟಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

ಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

- Advertisement -
- Advertisement -

‘ಪ್ರಗತಿ ಮೈದಾನದ ಸುರಂಗವನ್ನು ದುರಸ್ತಿಗೊಳಿಸಲು ಸಾಧ್ಯವಾಗುತ್ತಿಲ್ಲ; ಕಾಮಗಾರಿ ಕುರಿತು ಕೂಲಂಕುಷ ಪರೀಕ್ಷೆಯ ಅಗತ್ಯವಿದೆ’ ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ. ಕಾಮಗಾರಿ ವಿಳಂಬ ಹಾಗೂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಸುರಂಗ ಬಿರುಕು ಬಿಟ್ಟಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿ ತಿಳಿಸಿದ್ದಾರೆ. ಇನ್ನು ಮುಂದೆ ಪ್ರಯಾಣಿಕರಿಗೆ ಈ ಮಾರ್ಗವು ಸುರಕ್ಷಿತವಲ್ಲ ಮತ್ತು ಸಂಪೂರ್ಣ ನವೀಕರಣವಿಲ್ಲದೆ ಅದನ್ನು ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ₹777 ಕೋಟಿ ವೆಚ್ಚದ ಸುರಂಗದಲ್ಲಿ ಕಳಪೆ ಕಾಮಗಾರಿ ಆರೋಪದ ಮೇಲೆ ‘ಲಾರ್ಸೆನ್ ಮತ್ತು ಟೂಬ್ರೊ’ಗೆ ಕಂಪನಿಗೆ ನೋಟಿಸ್ ನೀಡಿದೆ. ಇಲಾಖೆಯು ಎಲ್ ಅಂಡ್ ಟಿಯಿಂದ ₹500 ಕೋಟಿಯನ್ನು “ಟೋಕನ್ ಮೊತ್ತ” ವಾಗಿ ಬೇಡಿಕೆಯಿಟ್ಟಿದ್ದು, ನಿರ್ಮಾಣ ಸಂಸ್ಥೆಯಿಂದ ಇದೇ ಮೊತ್ತದ ಪ್ರತಿಹಕ್ಕನ್ನು ಪ್ರೇರೇಪಿಸಿದೆ. ಲೋಕೋಪಯೋಗಿ ಇಲಾಖೆ ಕೂಡ ಕಂಪನಿಗೆ ಕೂಡಲೇ ದುರಸ್ತಿ ಕಾರ್ಯ ಆರಂಭಿಸುವಂತೆ ಸೂಚಿಸಿದೆ.

ತಾನು ನಿರ್ಮಿಸಿದ ಸುರಂಗದ ಸೋರಿಕೆ ಮತ್ತು ಬಿರುಕುಗಳ ಬಗ್ಗೆ ಮಾತನಾಡಿದ ಎಲ್‌ ಅಂಡ್ ಟಿ ವಕ್ತಾರರು, “ಪಿಡಬ್ಲ್ಯೂಡಿ ನಮ್ಮ ಗೌರವಾನ್ವಿತ ಗ್ರಾಹಕ; ನಾವು ಅವರೊಂದಿಗೆ ಹಲವು ವರ್ಷಗಳಿಂದ ಕೆಲಸ ಮಾಡಿದ್ದೇವೆ. ಕಂಪನಿಯು ₹500 ಕೋಟಿಯ ಕ್ಲೈಮ್ ಅನ್ನು ಇಲಾಖೆ ಯಾಕೆ ಸಲ್ಲಿಸಿದೆ ಎಂದು ತಿಳಿಸಲು ಬಯಸುತ್ತದೆ’ ಎಂದು ಹೇಳಿದ್ದಾರೆ.

ಒಂದು ವರ್ಷದ ಹಿಂದೆ ನಿರ್ಮಿಸಲಾದ ಸುರಂಗದ ಗೋಡೆಗಳಿಂದ ನೀರು ಸೋರುವ ಮೂಲಕ ಸಮಸ್ಯೆ ಕಾಣಿಸಿಕೊಂಡಿದೆ. ರಸ್ತೆಯ ಮಧ್ಯದಿಂದ ನೀರು ಹುಕ್ಕುತ್ತಿದ್ದು, ನೀರು ನುಗ್ಗಿದ್ದರಿಂದ ಸುರಂಗದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಸುರಂಗದ ರಸ್ತೆಯಲ್ಲಿಯೂ ಸಹ ಭಾರೀ ಬಿರುಕುಗಳು ಕಾಣಿಸಿಕೊಂಡಿದೆ ಎಂದು ಎನ್‌ಡಿಟಿವಿಯ ಗ್ರೌಂಡ್ ರಿಪೋರ್ಟ್ ತೋರಿಸಿದೆ. ಹಲವೆಡೆ ನೀರು ಸೋರಿಕೆಯಾಗಿರುವುದರಿಂದ ಸುರಂಗ ಮಾರ್ಗ ಬಳಕೆಯು ಜನರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ನಗರ ಯೋಜನಾ ತಜ್ಞ ಅರ್ಚಿತ್ ಸಿಂಗ್ ಮಾತನಾಡಿ, ‘ಜಲನಿರೋಧಕ ಸಮಸ್ಯೆ ಕಾಣಿಸಿಕೊಂಡಿದೆ, ಮಣ್ಣು ಪರೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ತೋರುತ್ತದೆ. ಮೊದಲನೆಯದಾಗಿ, ಈ ಸುರಂಗದ ಬಳಕೆಯನ್ನು ನಿಲ್ಲಿಸಬೇಕು. ಸರ್ಕಾರವು ಸಮಿತಿ ರೂಪಿಸಬೇಕು; ಭೌಗೋಳಿಕ ತಜ್ಞರು, ವಾಸ್ತುಶಿಲ್ಪಿಗಳು, ಸುರಂಗ ಎಂಜಿನಿಯರ್‌ಗಳು ಮತ್ತು ಎಂಜಿನಿಯರ್‌ಗಳ ತಂಡವು ಸೋರಿಕೆಗೆ ಕಾರಣ ಮತ್ತು ಬಿರುಕುಗಳಿಗೆ ಕಾರಣಗಳನ್ನು ಕಂಡುಹಿಡಿಯಬೇಕು. ಸುರಂಗವನ್ನು ದುರಸ್ತಿ ಮಾಡಬಹುದೇ ಅಥವಾ ಏನು ಮಾಡಬೇಕು ಎಂದು ಕಂಡುಹಿಡಿಯಬೇಕು’ ಎಂದಿದ್ದಾರೆ.

ಸುರಂಗ ಮತ್ತು ಐದು ಅಂಡರ್‌ಪಾಸ್‌ಗಳು ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಪ್ರಾಜೆಕ್ಟ್ ಅನ್ನು ರೂಪಿಸುತ್ತವೆ. ಇದು ನಗರದ ಪೂರ್ವ ಭಾಗಗಳು ಮತ್ತು ಹತ್ತಿರದ ನಗರಗಳಾದ ನೋಯ್ಡಾ ಮತ್ತು ಗಾಜಿಯಾಬಾದ್‌ನೊಂದಿಗೆ ಮಧ್ಯ ದೆಹಲಿಯ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ. 2022ರಲ್ಲಿ ಉದ್ಘಾಟನೆಗೊಂಡ 1.3 ಕಿಮೀ ಸುರಂಗವು ಕಳೆದ ವರ್ಷ ಪ್ರವಾಹದ ಸಮಯದಲ್ಲಿ ಅನೇಕ ಬಾರಿ ಬಂದ್ ಮಾಡಬೇಕಾಯಿತು.

ಸರಂಗ ಸೋರಿಕೆಯ ಬಗ್ಗೆ ಮಾತನಾಡಿರುವ ದೆಹಲಿ ಅಧಿಕಾರಿಯೊಬ್ಬರು, ‘ಎಲ್ಲ ಭೂಗತ ಸುರಂಗಗಳಲ್ಲಿ ಸೋರಿಕೆ ಸಾಮಾನ್ಯ. ಅದರ ನಿರ್ವಹಣೆಯನ್ನು ವಹಿಸಿಕೊಟ್ಟಿರುವ ಎಲ್ & ಟಿ ಕಂಪನಿಯು ಕಳೆದ ಎರಡು ತಿಂಗಳಿನಿಂದ ಹಲವಾರು ಬಾರಿ ದುರಸ್ತಿ ಕಾರ್ಯವನ್ನು ಕೈಗೊಳ್ಳದ ಕಾರಣ ಸಮಸ್ಯೆ ಕಾಣಿಸಿಕೊಂಡಿದೆ. ಎಂದರು.

ಇದನ್ನೂ ಓದಿ; ಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...