Homeಮುಖಪುಟಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

ಪ್ರಗತಿ ಮೈದಾನದ ಸುರಂಗ ಸೋರಿಕೆ ಪ್ರಕರಣ: ದುರಸ್ತಿಗೂ ಮುನ್ನ ಕೂಲಂಕುಷ ಪರೀಕ್ಷೆ ಅಗತ್ಯವಿದೆ ಎಂದ ತಜ್ಞರು

- Advertisement -
- Advertisement -

‘ಪ್ರಗತಿ ಮೈದಾನದ ಸುರಂಗವನ್ನು ದುರಸ್ತಿಗೊಳಿಸಲು ಸಾಧ್ಯವಾಗುತ್ತಿಲ್ಲ; ಕಾಮಗಾರಿ ಕುರಿತು ಕೂಲಂಕುಷ ಪರೀಕ್ಷೆಯ ಅಗತ್ಯವಿದೆ’ ಎಂದು ದೆಹಲಿ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ. ಕಾಮಗಾರಿ ವಿಳಂಬ ಹಾಗೂ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ್ದರಿಂದ ಸುರಂಗ ಬಿರುಕು ಬಿಟ್ಟಿದೆ ಎಂದು ಪಿಡಬ್ಲ್ಯುಡಿ ಅಧಿಕಾರಿ ತಿಳಿಸಿದ್ದಾರೆ. ಇನ್ನು ಮುಂದೆ ಪ್ರಯಾಣಿಕರಿಗೆ ಈ ಮಾರ್ಗವು ಸುರಕ್ಷಿತವಲ್ಲ ಮತ್ತು ಸಂಪೂರ್ಣ ನವೀಕರಣವಿಲ್ಲದೆ ಅದನ್ನು ದುರಸ್ತಿ ಮಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

ದೆಹಲಿ ಸರ್ಕಾರದ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ₹777 ಕೋಟಿ ವೆಚ್ಚದ ಸುರಂಗದಲ್ಲಿ ಕಳಪೆ ಕಾಮಗಾರಿ ಆರೋಪದ ಮೇಲೆ ‘ಲಾರ್ಸೆನ್ ಮತ್ತು ಟೂಬ್ರೊ’ಗೆ ಕಂಪನಿಗೆ ನೋಟಿಸ್ ನೀಡಿದೆ. ಇಲಾಖೆಯು ಎಲ್ ಅಂಡ್ ಟಿಯಿಂದ ₹500 ಕೋಟಿಯನ್ನು “ಟೋಕನ್ ಮೊತ್ತ” ವಾಗಿ ಬೇಡಿಕೆಯಿಟ್ಟಿದ್ದು, ನಿರ್ಮಾಣ ಸಂಸ್ಥೆಯಿಂದ ಇದೇ ಮೊತ್ತದ ಪ್ರತಿಹಕ್ಕನ್ನು ಪ್ರೇರೇಪಿಸಿದೆ. ಲೋಕೋಪಯೋಗಿ ಇಲಾಖೆ ಕೂಡ ಕಂಪನಿಗೆ ಕೂಡಲೇ ದುರಸ್ತಿ ಕಾರ್ಯ ಆರಂಭಿಸುವಂತೆ ಸೂಚಿಸಿದೆ.

ತಾನು ನಿರ್ಮಿಸಿದ ಸುರಂಗದ ಸೋರಿಕೆ ಮತ್ತು ಬಿರುಕುಗಳ ಬಗ್ಗೆ ಮಾತನಾಡಿದ ಎಲ್‌ ಅಂಡ್ ಟಿ ವಕ್ತಾರರು, “ಪಿಡಬ್ಲ್ಯೂಡಿ ನಮ್ಮ ಗೌರವಾನ್ವಿತ ಗ್ರಾಹಕ; ನಾವು ಅವರೊಂದಿಗೆ ಹಲವು ವರ್ಷಗಳಿಂದ ಕೆಲಸ ಮಾಡಿದ್ದೇವೆ. ಕಂಪನಿಯು ₹500 ಕೋಟಿಯ ಕ್ಲೈಮ್ ಅನ್ನು ಇಲಾಖೆ ಯಾಕೆ ಸಲ್ಲಿಸಿದೆ ಎಂದು ತಿಳಿಸಲು ಬಯಸುತ್ತದೆ’ ಎಂದು ಹೇಳಿದ್ದಾರೆ.

ಒಂದು ವರ್ಷದ ಹಿಂದೆ ನಿರ್ಮಿಸಲಾದ ಸುರಂಗದ ಗೋಡೆಗಳಿಂದ ನೀರು ಸೋರುವ ಮೂಲಕ ಸಮಸ್ಯೆ ಕಾಣಿಸಿಕೊಂಡಿದೆ. ರಸ್ತೆಯ ಮಧ್ಯದಿಂದ ನೀರು ಹುಕ್ಕುತ್ತಿದ್ದು, ನೀರು ನುಗ್ಗಿದ್ದರಿಂದ ಸುರಂಗದ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ಸುರಂಗದ ರಸ್ತೆಯಲ್ಲಿಯೂ ಸಹ ಭಾರೀ ಬಿರುಕುಗಳು ಕಾಣಿಸಿಕೊಂಡಿದೆ ಎಂದು ಎನ್‌ಡಿಟಿವಿಯ ಗ್ರೌಂಡ್ ರಿಪೋರ್ಟ್ ತೋರಿಸಿದೆ. ಹಲವೆಡೆ ನೀರು ಸೋರಿಕೆಯಾಗಿರುವುದರಿಂದ ಸುರಂಗ ಮಾರ್ಗ ಬಳಕೆಯು ಜನರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ.

ನಗರ ಯೋಜನಾ ತಜ್ಞ ಅರ್ಚಿತ್ ಸಿಂಗ್ ಮಾತನಾಡಿ, ‘ಜಲನಿರೋಧಕ ಸಮಸ್ಯೆ ಕಾಣಿಸಿಕೊಂಡಿದೆ, ಮಣ್ಣು ಪರೀಕ್ಷೆ ಸರಿಯಾಗಿ ನಡೆದಿಲ್ಲ ಎಂದು ತೋರುತ್ತದೆ. ಮೊದಲನೆಯದಾಗಿ, ಈ ಸುರಂಗದ ಬಳಕೆಯನ್ನು ನಿಲ್ಲಿಸಬೇಕು. ಸರ್ಕಾರವು ಸಮಿತಿ ರೂಪಿಸಬೇಕು; ಭೌಗೋಳಿಕ ತಜ್ಞರು, ವಾಸ್ತುಶಿಲ್ಪಿಗಳು, ಸುರಂಗ ಎಂಜಿನಿಯರ್‌ಗಳು ಮತ್ತು ಎಂಜಿನಿಯರ್‌ಗಳ ತಂಡವು ಸೋರಿಕೆಗೆ ಕಾರಣ ಮತ್ತು ಬಿರುಕುಗಳಿಗೆ ಕಾರಣಗಳನ್ನು ಕಂಡುಹಿಡಿಯಬೇಕು. ಸುರಂಗವನ್ನು ದುರಸ್ತಿ ಮಾಡಬಹುದೇ ಅಥವಾ ಏನು ಮಾಡಬೇಕು ಎಂದು ಕಂಡುಹಿಡಿಯಬೇಕು’ ಎಂದಿದ್ದಾರೆ.

ಸುರಂಗ ಮತ್ತು ಐದು ಅಂಡರ್‌ಪಾಸ್‌ಗಳು ಪ್ರಗತಿ ಮೈದಾನ್ ಇಂಟಿಗ್ರೇಟೆಡ್ ಟ್ರಾನ್ಸಿಟ್ ಕಾರಿಡಾರ್ ಪ್ರಾಜೆಕ್ಟ್ ಅನ್ನು ರೂಪಿಸುತ್ತವೆ. ಇದು ನಗರದ ಪೂರ್ವ ಭಾಗಗಳು ಮತ್ತು ಹತ್ತಿರದ ನಗರಗಳಾದ ನೋಯ್ಡಾ ಮತ್ತು ಗಾಜಿಯಾಬಾದ್‌ನೊಂದಿಗೆ ಮಧ್ಯ ದೆಹಲಿಯ ನಡುವಿನ ಸಂಪರ್ಕವನ್ನು ಸುಲಭಗೊಳಿಸುವ ಗುರಿಯನ್ನು ಹೊಂದಿದೆ. 2022ರಲ್ಲಿ ಉದ್ಘಾಟನೆಗೊಂಡ 1.3 ಕಿಮೀ ಸುರಂಗವು ಕಳೆದ ವರ್ಷ ಪ್ರವಾಹದ ಸಮಯದಲ್ಲಿ ಅನೇಕ ಬಾರಿ ಬಂದ್ ಮಾಡಬೇಕಾಯಿತು.

ಸರಂಗ ಸೋರಿಕೆಯ ಬಗ್ಗೆ ಮಾತನಾಡಿರುವ ದೆಹಲಿ ಅಧಿಕಾರಿಯೊಬ್ಬರು, ‘ಎಲ್ಲ ಭೂಗತ ಸುರಂಗಗಳಲ್ಲಿ ಸೋರಿಕೆ ಸಾಮಾನ್ಯ. ಅದರ ನಿರ್ವಹಣೆಯನ್ನು ವಹಿಸಿಕೊಟ್ಟಿರುವ ಎಲ್ & ಟಿ ಕಂಪನಿಯು ಕಳೆದ ಎರಡು ತಿಂಗಳಿನಿಂದ ಹಲವಾರು ಬಾರಿ ದುರಸ್ತಿ ಕಾರ್ಯವನ್ನು ಕೈಗೊಳ್ಳದ ಕಾರಣ ಸಮಸ್ಯೆ ಕಾಣಿಸಿಕೊಂಡಿದೆ. ಎಂದರು.

ಇದನ್ನೂ ಓದಿ; ಮುಸ್ಲಿಮರ ಮನೆ, ಪ್ರಾರ್ಥನಾ ಸ್ಥಳಗಳ ‘ಕಾನೂನುಬಾಹಿರ ಧ್ವಂಸ’ವನ್ನು ತಕ್ಷಣ ನಿಲ್ಲಿಸಿ: ಅಮ್ನೆಸ್ಟಿ ಇಂಟರ್‌ನ್ಯಾಶನಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...