Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...