Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...