Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...