Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...