Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...