Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...