Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...