Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...