Homeಮುಖಪುಟಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

ಅಸ್ತಿತ್ವದಲ್ಲೇ ಇರದ ಶಿಸ್ತು ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು! ಪ್ರಗ್ಯಾ ಬೆಂಬಲಕ್ಕೆ ನಿಂತಿತೆ ‘ಶಿಸ್ತಿನ ಪಕ್ಷ’?!

- Advertisement -
- Advertisement -

ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥುರಾಮ್ ಗೋಡ್ಸೆಯನ್ನು ದೇಶಭಕ್ತ ಎಂದು ಸಾರ್ವಜನಿಕವಾಗಿ ಬೆಂಬಲಿಸಿದ್ದ ಆಗಿನ ಭೂಪಾಲ್ ಬಿಜೆಪಿ ಅಭ್ಯರ್ಥಿ (ಈಗ ಸಂಸದೆ) ಪ್ರಗ್ಯಾ ಸಿಂಗ್‍ರ ಈ ನಡೆಯಿಂದ ಬಿಜೆಪಿಗೆ ಆಂತರಿಕವಾಗಿ ಖುಷಿಯಾಗಿದ್ದರೂ ಬಾಹ್ಯವಾಗಿ ಮುಜುಗರವಾಗಿತ್ತು. ಘಟನೆ ನಡೆದು ಇಂದಿಗೆ ಒಂದು ತಿಂಗಳು ಆಗಿದೆ. ಆಗ ಪಕ್ಷದ ಅಧ್ಯಕ್ಷ ಅಮಿತ್‍ಶಾ ಈ ಪ್ರಕರಣವನ್ನು ಬಿಜೆಪಿಯ ಶಿಸ್ತು ಕ್ರಮ ಸಮಿತಿಗೆ ಒಪ್ಪಿಸಿ, 10 ದಿನದಲ್ಲಿ ಕ್ರಮ ಕೈಗೊಳ್ಳಿ ಎಂದಿದ್ದರು. ವಿಚಿತ್ರವೆಂದರೆ ಆಗ ಬಿಜೆಪಿಯ ಶಿಸ್ತು ಕ್ರಮ ಸಮಿತಿ ಅಸ್ತಿತ್ವದಲ್ಲೇ ಇರಲಿಲ್ಲ. ಶಾ ಕೊಟ್ಟ ಗಡುವು ಎಂದೋ ಮುಗಿದರೂ ಹೊಸ ಸಮಿತಿ ಕಾರ್ಯೋನ್ಮುಖವೇ ಆಗಿಲ್ಲ!

ಸದ್ಯದ ಬಿಜೆಪಿಯು ಭಯೋತ್ಪಾದನಾ ಆರೋಪಿ ಮತ್ತು ಭೂಪಾಲ್ ಸಂಸದೆ ಪ್ರಗ್ಯಾ ಸಿಂಗ್‍ರ ಮೇಲಿನ ಶಿಸ್ತುಕ್ರಮದ ವಿಚಾರವನ್ನು ಮುಚ್ಚಿಯೇ ಹಾಕಿದೆ ಎನ್ನಬಹುದು. ಚುನಾವಣಾ ಪ್ರಚಾರದ ವೇಳೆ ಪ್ರಗ್ಯಾ ಗಾಂಧಿ ಹಂತಕ ಗೋಡ್ಸೆಯನ್ನು ದೇಶಭಕ್ತ ಎಂದಾಗ, ‘ದೇಶದೆಲ್ಲಡೆ ಮತ್ತು ಬಿಜೆಪಿ ಮಿತ್ರಪಕ್ಷಗಳಿಂದಲೂ ಆಕ್ಷೇಪಣೆ ಎದುರಾದಾಗ ಡ್ಯಾಮೇಜ್ ಕಂಟ್ರೋಲ್’ಗೆ ಬಿಜೆಪಿ ಇಳಿದಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಈ ಪ್ರಕರಣವನ್ನು ಪಕ್ಷದ ಶಿಸ್ತು ಸಮಿತಿಗೆ ಒಪ್ಪಿಸಿ ಹತ್ತು ದಿನದಲ್ಲಿ ಮುಂದೆ ಕೈಗೊಳ್ಳಬೇಕಾದ ಕ್ರಮದ ವಿವರ ನೀಡಬೇಕು ಎಂದು ಮೇ 17ರಂದು ಆದೇಶ ಮಾಡಿದ್ದರು.

ಆದರೆ ಈಗ ಒಂದು ತಿಂಗಳಾದರೂ ಏನೂ ಸಂಭವಿಸಿಲ್ಲ ಶಿಸ್ತು ಸಮಿತಿ ಏನು ಮಾಡುತ್ತಿದೆ? ಬಿಜೆಪಿ ಅಧ್ಯಕ್ಷರ ಆದೇಶ ಏನಾಯ್ತು?
ಕಾರಣ ಈ ಪ್ರಕರಣವನ್ನು ಶಿಸ್ತು ಸಮಿತಿಗೆ ವರ್ಗಾಯಿಸಿದಾಗ ಶಿಸ್ತು ಸಮಿತಿಯೇ ಕಾರ್ಯ ನಿರ್ವಹಿಸುತ್ತಿರಲಿಲ್ಲ. ಆಗ ಈ ಸಮಿತಿಯ ಅಧ್ಯಕ್ಷರನ್ನು ರಾಜ್ಯವೊಂದರ ರಾಜ್ಯಪಾಲರನ್ನಾಗಿ ನೇಮಿಸಲಾಗಿತ್ತು, ಇನ್ನೊಬ್ಬ ಸದಸ್ಯ ರಾಜಿನಾಮೆ ನೀಡಿದ್ದರು!

ನಿಷ್ಕ್ರಿಯ ಸಮಿತಿ!
ಬಿಜೆಪಿಯ ಶಿಸ್ತು ಸಮಿತಿಯಲ್ಲಿ ಮೂವರು ಸದಸ್ಯರಿರುತ್ತಾರೆ. ಪ್ರಗ್ಯಾ ಕೇಸನ್ನು ಅದಕ್ಕೆ ನೀಡಿದಾಗ ಸಮಿತಿ ಅಧ್ಯಕ್ಷ ಗಣೇಶಿ ಲಾಲ್ ಒರಿಸ್ಸಾದ ರಾಜ್ಯಪಾಲರಾಗಿ ನೇಮಕವಾಗಿದ್ದರು. ಇನ್ನೊಬ್ಬ ಸದಸ್ಯ ವಿಜಯ ಚಕ್ರವರ್ತಿ ವೈಯಕ್ತಿಕ ಕಾರಣದಿಂದ ಸಮಿತಿಗೆ ರಾಜಿನಾಮೆ ನೀಡಿದ್ದರು. ಮೂರನೇ ಸದಸ್ಯ ಸತ್ಯದೇವ ಸಿಂಗ್ ಬಿಜೆಪಿ ಬಿಹಾರದ ಶಿಸ್ತು ಸಮಿತಿಯನ್ನೂ ನೋಡಿಕೊಳ್ಳುತ್ತಿದ್ದರು. ಅಲ್ಲಿ ಅವರು ನೂರಕ್ಕೂ ಹೆಚ್ಚು ಅಶಿಸ್ತಿನ ಪ್ರಕರಣಗಳನ್ನು ಬಗೆಹರಿಸುವಲ್ಲಿ ಬ್ಯುಸಿ ಆಗಿದ್ದರು.

ಈ ಕುರಿತು ದಿ ಪ್ರಿಂಟ್‍ಗೆ ಪ್ರತಿಕ್ರಿಯಿಸಿದ ಸತ್ಯದೇವ ಸಿಂಗ್, ‘ಸಮಿತಿಗೆ ಪ್ರಗ್ಯಾ-ಗೋಡ್ಸೆ ಕೇಸು ರೆಫರ್ ಮಾಡಿದಾಗ ಸಮಿತಿಗೆ ಅಧ್ಯಕ್ಷರ್ಯಾರು ಇರಲಿಲ್ಲ, ಕಾರ್ಯದರ್ಶಿಯೂ ಇರಲಿಲ್ಲ. ಕೇಸನ್ನು ಒಬ್ಬ ಸದಸ್ಯ ತೀರ್ಮಾನಿಸಿವುದು ತಪ್ಪು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವರ ಗಮನಕ್ಕೆ ತಂದು, ಪ್ರಗ್ಯಾರನ್ನು ಸಸ್ಪೆಂಡ್ ಮಾಡುವ ನಿರ್ಧಾರವನ್ನು ನೀವೇ ತೆಗೆದುಕೊಳ್ಳಿ ಅಥವಾ ಈ ಪ್ರಕರಣವನ್ನು ಅಧ್ಯಕ್ಷ ಅಮಿತ್ ಶಾರಿಗೇ ರೆಫರ್ ಮಾಡಿ’ ಎಂದು ವಿನಂತಿಸಿದ್ದಾಗಿ ಹೇಳಿದ್ದಾರು.

ಶಾರ ಹತ್ತು ದಿನದ ಗಡುವು ಮುಗಿದು ವಾರದ ನಂತರ ಜೂನ್ 4ರಂದು ಶಿಸ್ತು ಸಮಿತಿಗೆ ಇನ್ನಿಬ್ಬರು ಸದಸ್ಯರನ್ನು ನೇಮಕ ಮಾಡಲಾಗಿತು. ಉತ್ತರಪ್ರದೇಶದ ಓಂ ಪಾಠಕ್ ಮತ್ತು ಪಂಜಾಬಿನ ಅವಿನಾಶ್ ರೈ ಖನ್ನಾ ಹೊಸ ಸದಸ್ಯರಾದರು. ಪಾಠಕ್ ಅವರಿಗೆ ಈ ಬಗ್ಗೆ ಕೇಳಿದರೆ, ಈ ವಿಷಯದ ಕುರಿತು ಮಾತಾಡಲು ನನಗೆ ಅಧಿಕಾರವಿಲ್ಲ ಎಂದು ಹೇಳಿದ್ದಾರೆ.

ಸಮಿತಿಯ ಸಭೆಗಳ ದಾಖಲೆಗಳಲ್ಲವೂ ಪಕ್ಷದ ಕಾರ್ಯದರ್ಶಿ ಮಹೇಂದ್ರ ಪಾಂಡೆ ಬಳಿಯಿವೆ ಎಂದು ಪಾಠಕ್ ಪಾಂಡೆ ಆ ಕಡೆ ಬೆರಳು ಮಾಡಿದ್ದಾರೆ. ಈ ಪ್ರಕರಣದ ಕುರಿತು ಸದದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದಿದ್ದು, ಚೆಂಡು ಈಗ ಅಮಿತ್ ಶಾ ಅಂಗಳದಲ್ಲಿದೆ ಎಂದಿದ್ದಾರೆ.

ಅಂದರೆ ಇಲ್ಲಿ ಚುನಾವಣಾ ಸಂದರ್ಭದ ಮುಜುಗರ, ಒತ್ತಡದಿಂದ ಪಾರಾಗಲು ಪ್ರಗ್ಯಾ ಪ್ರಕರಣವನ್ನು ಕಾಟಾಚಾರಕ್ಕೆ ನಿಷ್ಕ್ರಿಯ ಶಿಸ್ತು ಸಮಿತಿಗೆ ರೆಫರ್ ಮಾಡಲಾಗಿತ್ತೇ? ಈಗ ಇಬ್ಬರು ಹೊಸ ಸದಸ್ಯರನ್ನು ನೇಮಕ ಮಾಡಿದ ಮೇಲೂ ಸಮಿತಿ ಪ್ರಗ್ಯಾ ಪ್ರಕರಣವನ್ನು ಕೈಗೆತ್ತಿಕೊಂಡಿಲ್ಲವೇಕೆ? ಸಮಿತಿಯ ಸದಸ್ಯರೊಬ್ಬರೇ ಚೆಂಡು ಈಗ ಶಾ ಅಂಗಳದಲ್ಲಿ ಇದೆ ಎಂದಿರುವುದರ ಅರ್ಥ ಏನು?
‘ಶಿಸ್ತಿನ ಪಕ್ಷ’ ಎಂದು ಕರೆದುಕೊಳ್ಳುವ ಪಕ್ಷಕ್ಕೆ ಈಗ ಪ್ರಗ್ಯಾ ರಕ್ಷಣೆಗೆ ನಿಂತಿದೆಯೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...