Homeಮುಖಪುಟಬಿಜೆಪಿ ಸೇರಿದ ಪ್ರಗ್ಯಾ ಸಿಂಗ್... ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

ಬಿಜೆಪಿ ಸೇರಿದ ಪ್ರಗ್ಯಾ ಸಿಂಗ್… ಮಲೆಗಾವ್ ಸ್ಪೋಟದ ಆರೋಪಿ ‘ಮರಳಿ ಮನೆಗೆ’!

- Advertisement -
- Advertisement -

ಜೈಲೂಟದಿಂದ ಮುಕ್ತಿ ಹೊಂದಿದ ಸಾಧ್ವಿ ಪ್ರಗ್ಯಾಸಿಂಗ್ ಠಾಕೂರ್ ಮರಳಿ ‘ಮನೆಗೆ’ ಬಂದಿದ್ದಾರೆ. ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿರುವ ಅವರು ಮಧ್ಯಪ್ರದೇಶದಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ‘ಹಿಂದೂ ಅಥವಾ ಹಿಂದುತ್ವ ಭಯೋತ್ಪಾದನೆ’ ಎಂಬ ಪದ ಹೆಚ್ಚು ಚಾಲ್ತಿಗೆ ಬರಲು ಕಾರಣಾದವರಲ್ಲಿ ಪ್ರಗ್ಯಾ ಕೂಡ ಒಬ್ಬರು! 2008ರ ಮಲೆಗಾವ್ ಸ್ಫೋಟದ ಆರೋಪಿಗಳಲ್ಲಿ ಒಬ್ಬರಾಗಿದ್ದ ಸಾಧ್ವಿ ಪ್ರಜ್ಞಾ ಠಾಕೂರ್ ಮೋದಿ ಸರ್ಕಾರ ಬಂದ ನಂತರ ಅವರು ಜಾಮೀನು ಮೇಲೆ ಹೊರಗಿದ್ದು, ಇನ್ನೂ ಪ್ರಕರಣದ ತೀರ್ಪು ಹೊರಬಂದಿಲ್ಲ.

ಮಲೆಗಾವ್, ಸಂಜೋತಾ ಎಕ್ಸ್‍ಪ್ರೆಸ್ ಮತ್ತು ಮೆಕ್ಕಾ ಮದೀನಾ ಬಾಂಬ್ ಸ್ಫೋಟದಲ್ಲಿ ‘ಹಿಂದುತ್ವ’ ಪ್ರತಿಪಾದನೆಯ ಹಲವರು ಭಾಗಿಯಾಗಿರುವ ಆರೋಪಗಳಿದ್ದವು. ಮೋದಿ ಸರ್ಕಾರ ಬಂದ ನಂತರ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ತನಿಖೆಯಲ್ಲಿ ತೋರಿದ ‘ಜಾಣ ನಿರ್ಲಕ್ಷತನ’ದಿಂದಾಗಿ ಹಲವರ ವಿರುದ್ಧ ಸಾಕ್ಷ್ಯಗಳು ಉಲ್ಟಾ ಹೊಡೆದವು. ಪರಿಣಾಮವಾಗಿ ಅವರೆಲ್ಲ ಆರೋಪಮುಕ್ತರಾದರು ಎಂದು ಹಲವು ಹಿರಿಯ ವಕೀಲರೇ ಅಭಿಪ್ರಾಯ ಪಟ್ಟಿದ್ದನ್ನು ಇಲ್ಲಿ ನೆನೆಯಬಹುದು. ಸದ್ಯ ಪ್ರಗ್ಯಾ ಮಲೆಗಾವ್ ಸ್ಫೋಟದ ಪ್ರಕರಣದಲ್ಲಿ ಆರೋಪಿಯೇ.

‘ಕೇಸರಿ ಭಯೋತ್ಪಾದನೆಯಲ್ಲಿ ಆರೋಪಿಗಳಾಗಿದ್ದವರಿಗೆ ಬಿಜೆಪಿ ಮತ್ತು ಸಂಘ ಪರಿವಾರದ ನಂಟು ಇರುವುದು ಸ್ಪಷ್ಟವಾಗಿದೆ. ಅದಕ್ಕೆ ತಕ್ಕಂತೆಯೇ ಇವತ್ತು ಸಾಧ್ವಿ ಪ್ರಗ್ಯಾ ಬಿಜೆಪಿಗೆ ಅಧಿಕೃತವಾಗಿಯೇ ಪ್ರವೇಶ ಪಡೆದಿದ್ದಾರೆ. ಅವರು ಮಧ್ಯಪ್ರದೇಶದ ಭೂಪಾಲಿನಲ್ಲಿ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್‍ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ. ಈ ಹಿಂದೆ ‘ಕೇಸರಿ ಭಯೋತ್ಪಾದನೆ’ ವಿರುದ್ಧ ದಿಗ್ವಿಜಯ್‍ಸಿಂಗ್ ಸಾಕಷ್ಟು ಟೀಕೆಗಳನ್ನು ಮಾಡಿದ್ದರು. ಈಗ ದಿಗ್ವಿಜಯ್‍ಸಿಂಗ್ ಮತ್ತು ಪ್ರಜ್ಞಾ ನಡುವಿನ ಸ್ಪರ್ಧೆ ಕುತೂಹಲ ಹುಟ್ಟಿಸಿದೆ.

ಭೂಪಾಲಿನಲ್ಲಿ ಸ್ಪರ್ಧಿಸಲು ಬಿಜೆಪಿಯ ಹಿರಿಯ ನಾಯಕರಾದ ನರೇಂದ್ರ ಸಿಂಗ್ ತೋಮರ್, ಶಿವರಾಜಸಿಂಗ್ ಚೌಹಾಣ್ ಮತ್ತು ಉಮಾಭಾರತಿಯವರು ನಿರಾಕರಿಸಿದ್ದು ಪ್ರಗ್ಯಾರನ್ನು ಕಣಕ್ಕಿಳಿಸಲು ಬಿಜೆಪಿ ಯೋಚಿಸಿದೆ.

ಮೆಕ್ಕಾ ಮದೀನಾ ಸ್ಪೋಟ ಪ್ರಕರಣದಲ್ಲಿ ಸ್ವಾಮಿ ಅಸೀಮಾನಂದ ಮೊದಲಿಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಆದರೆ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ನಂತರ ಎನ್‍ಐಎ ತನಿಖೆಯ ದಾರಿ ತಪ್ಪಿಸಿದ ಪರಿಣಾಮ ಅಸೀಮಾನಂದ ಆರೋಪಮುಕ್ತರಾದರು. ಈಗ ಇಂಥದ್ದೇ ಸ್ಫೋಟ ಪ್ರಕರಣದಲ್ಲಿ ಆರೋಪಯಾಗಿರುವ ಪ್ರಗ್ಯಾ ಬಿಜೆಪಿಗೆ ಬರುವ ಮೂಲಕ, ‘ಕೇಸರಿ ಭಯೋತ್ಪದನೆ’ಯೊಂದಿಗೆ ಯಾವ ಸಂಘಟನೆಯ ತಳುಕಿದೆ ಎಂಬುದು ಮತ್ತೊಮ್ಮೆ ಸ್ಪಷ್ಟವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...